Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಆಲಡ್ಕ: ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ

ಆಲಡ್ಕ: ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ

ವಾರ್ತಾಭಾರತಿವಾರ್ತಾಭಾರತಿ7 Feb 2024 5:34 PM IST
share
ಆಲಡ್ಕ: ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮ

ಬಂಟ್ವಾಳ : ಇಂದು ಲೋಕವು ಪರಿಹಾರವಿಲ್ಲದ ಹಲವು ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದಕ್ಕೆಲ್ಲ ಪರಿಹಾರ ಇರುವ ಏಕೈಕ ಮಾರ್ಗ ಆಧ್ಯಾತ್ಮಿಕತೆಯೆಡೆಗೆ ಮರಳುವುದಾಗಿದೆ ಎಂದು ನೂರೇ ಅಜ್ಮೀರ್ ಆಧ್ಯಾತ್ಮಿಕ ಮಜ್ಲಿಸಿನ ರೂವಾರಿ, ಸುನ್ನೀ ವಿದ್ವಾಂಸ ಕೇರಳ-ವಾಯಕ್ಕಾಡಿನ ವಲಿಯುದ್ದೀನ್ ಫೈಝಿ ಹೇಳಿದರು.

ಶಂಸುಲ್ ಉಲಮಾ ಇಸ್ಲಾಮಿಕ್ ಸೆಂಟರ್ ಹಾಗೂ ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖೆ ಇದರ ದಶ ವಾರ್ಷಿಕ ಸಂಭ್ರಮದ ಪ್ರಯುಕ್ತ ಆಲಡ್ಕದ ಮರ್ಹೂಂ ಶೈಖುನಾ ಶಂಸುಲ್ ಉಲಮಾ ನಗರ, ಮರ್ ಹೂಂ ಶೈಖುನಾ ಮಿತ್ತಬೈಲು ಉಸ್ತಾದ್ ದ್ವಾರ, ಮರ್ಹೂಂ ಶೈಖುನಾ ಸಜಿಪ ಉಸ್ತಾದ್ ವೇದಿಕೆಯಲ್ಲಿ ಮಂಗಳವಾರ ರಾತ್ರಿ ನಡೆದ ನೂರೇ ಅಜ್ಮೀರ್ ಆಧ್ಯಾತ್ಮಿಕ ಸಂಗಮಕ್ಕೆ ನೇತೃತ್ವ ನೀಡಿ ಮಾತನಾಡಿದ ಅವರು, ಸರ್ವಶಕ್ತನಾದ ಅಲ್ಲಾಹನ ಸ್ಮರಣೆಯಿಂದ ಮನಶ್ಶಾಂತಿ ದೊರೆಯುವುದರ ಜೊತೆಗೆ ಇಹಲೋಕ ಹಾಗೂ ಪರಲೋಕ ವಿಜಯಕ್ಕೂ ಕಾರಣವಾಗಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಎಸ್ಕೆಎಸ್ಸೆಸ್ಸೆಫ್ ಬಂಟ್ವಾಳ ವಲಯಾಧ್ಯಕ್ಷ ಕೆ.ಪಿ. ಇರ್ಶಾದ್ ದಾರಿಮಿ ಅಲ್-ಜಝರಿ ಮಿತ್ತಬೈಲು ಅವರು ಮಾತನಾಡಿ, ಆಧ್ಯಾತ್ಮಿಕ ಮಜ್ಲಿಸ್ ಗಳು ಆಧ್ಯಾತ್ಮಿಕ ಉದ್ದೇಶವನ್ನೇ ಪ್ರಮುಖವಾಗಿ ಮೈಗೂಡಿಸಿ ಕೊಳ್ಳಬೇಕಾಗಿದೆ. ಹೀಗಿದ್ದಾಗ ಅದರ ಜೊತೆಗೆ ಐಹಿಕವಾಗಿ ಮನಶ್ಶಾಂತಿ ದೊರೆಯಲಿದೆ ಎಂದರು.

ದುವಾಶಿರ್ವಚನಗೈದ ಸಯ್ಯಿದ್ ಹುಸೈನ್ ಬಾ-ಅಲವಿ ತಂಙಳ್ ಕುಕ್ಕಾಜೆ ಅವರು ಮಾತನಾಡಿ, ಆಧ್ಯಾತ್ಮಿಕ ಕಾರ್ಯಕ್ರಮ ಗಳು ತನ್ನ ಐಹಿಕ ಉದ್ದೇಶ ಈಡೇರಿದ ತಕ್ಷಣ ಅದರಿಂದ ಹಿಂದೆ ಸರಿಯದೆ ಜೀವನ ಪರ್ಯಂತ ಅಲ್ಲಾಹನ ಸ್ಮರಣೆಯನ್ನು ಅಳವಡಿಸಿಕೊಂಡು ಧನ್ಯರಾಗುವಂತಾಗಬೇಕು ಎಂದರು.

ಎಸ್ಕೆಎಸ್ಸೆಸ್ಸೆಫ್ ಆಲಡ್ಕ ಶಾಖಾಧ್ಯಕ್ಷ ಮುಹಮ್ಮದ್ ಇಶಾಕ್ ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ಪುರಸಭಾ ಸದಸ್ಯ ಅಬೂಬಕ್ಕರ್ ಸಿದ್ದೀಕ್ ಗುಡ್ಡೆಅಂಗಡಿ, ಅಕ್ಕರಂಗಡಿ ಕೇಂದ್ರ ಜುಮಾ ಮಸೀದಿ ಖತೀಬ್ ಉಸ್ಮಾನ್ ರಾಝಿ ಬಾಖವಿ, ಗೂಡಿನಬಳಿ ಮಸ್ಜಿದ್-ಎ-ಮುತ್ತಲಿಬ್ ಖತೀಬ್ ಅಶ್ರಫ್ ಫೈಝಿ ಮಲಾರ್, ಅಧ್ಯಕ್ಷ ಉಬೈದುಲ್ಲಾ ಹಾಜಿ, ಆಲಡ್ಕ ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಅಬ್ದುಲ್ ರಹಿಮಾನ್ ಮೋನಾಕ, ಬದ್ರಿಯಾ ಜುಮಾ ಮಸೀದಿ ಅಧ್ಯಕ್ಷ ಮುಹಮ್ಮದ್ ಇಂಜಿನಿಯರ್, ಮಲಾಯಿಬೆಟ್ಟು ಮುಹಿಯುದ್ದೀನ್ ಜುಮಾ ಮಸೀದಿ ಅಧ್ಯಕ್ಷ ಯೂಸುಫ್ ಕರಂದಾಡಿ, ಮುಹಮ್ಮದ್ ನಂದಾವರ, ಎಸ್ಕೆಎಸ್ಸೆಸ್ಸೆಫ್ ಪಾಣೆಮಂಗಳೂರು ಕ್ಲಸ್ಟರ್ ಅಧ್ಯಕ್ಷ ಅಬ್ದುಲ್ ಬಶೀರ್ ಇಸ್ಮಾಯಿಲ್, ಆಲಡ್ಕ ಶಾಖಾ ಗೌರವಾಧ್ಯಕ್ಷ ಅಬ್ದುಲ್ ಖಾದರ್ ಬೋಗೋಡಿ, ಖಾದರ್ ಮಾಸ್ಟರ್ ಬಂಟ್ವಾಳ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು.

ಆಲಡ್ಕ ಶಾಖಾ ಪ್ರಮುಖರಾದ ಮುಹಮ್ಮದ್ ಹನೀಫ್ ಹಾಸ್ಕೋ, ಮುಹಮ್ಮದ್ ಶಫೀಕ್ ಆಲಡ್ಕ, ಅಬ್ದುಲ್ ಅಝೀಝ್ ಪಿಐಬಿ, ಅಬೂಬಕ್ಕರ್ ಎನ್ ಬಿ, ಅಬ್ದುಲ್ ಮಜೀದ್ ಬೋಳಂಗಡಿ, ಝುಬೈರ್ ಯು, ರಫೀಕ್ ಇನೋಳಿ, ಅಬ್ದುಲ್ ಸಲಾಂ, ಅಬ್ದುಲ್ ಮುತ್ತಾಲಿಬ್, ಮುಹಮ್ಮದ್ ಹನೀಫ್ ಡ್ರೈಫಿಶ್, ಅಬ್ದುಲ್ ಖಾದರ್ ಪುತ್ತುಮೋನು, ಅಬ್ದುಲ್ ಜಬ್ಬಾರ್ ಪಡ್ಪು, ಶಾಫಿ ಹಾಜಿ ಬಂಗ್ಲೆಗುಡ್ಡೆ ಮೊದಲಾದವರು ಉಪಸ್ಥಿತರಿದ್ದರು.

ಎಸ್ಕೆಎಸ್ಸೆಸ್ಸೆಫ್ ದಕ್ಷಿಣ ಕನ್ನಡ ಜಿಲ್ಲಾ ವೆಸ್ಟ್ ಪ್ರಧಾನ ಕಾರ್ಯದರ್ಶಿ ಅಬೂಸ್ವಾಲಿಹ್ ಫೈಝಿ ಸ್ವಾಗತಿಸಿ, ವಿದ್ಯಾರ್ಥಿ ಮುಹಮ್ಮದ್ ರಹೀಝ್ ಕಿರಾಅತ್ ಪಠಿಸಿದರು. ನೆಹರುನಗರ ಮದ್ರಸ ವಿದ್ಯಾರ್ಥಿಗಳು ದಫ್ ಪ್ರರ್ಶನ ನೀಡಿದರು. ನಾಸಿರ್ ಬೊಳ್ಳಾಯಿ ಕಾರ್ಯಕ್ರಮ ನಿರೂಪಿಸಿದರು.










share
ವಾರ್ತಾಭಾರತಿ
ವಾರ್ತಾಭಾರತಿ
Next Story
X