Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು: ಪೂರೈಕೆಯಾಗದ ನೀರು;...

ಮಂಗಳೂರು: ಪೂರೈಕೆಯಾಗದ ನೀರು; ಸಮಸ್ಯೆಯಲ್ಲಿ ನಾಗರಿಕರು

ಪೈಪ್‌ಲೈನ್‌ನ ದುರಸ್ತಿ ಕಾಮಗಾರಿ ಮುಂದುವರಿಕೆ

ವಾರ್ತಾಭಾರತಿವಾರ್ತಾಭಾರತಿ8 Feb 2024 9:15 PM IST
share
ಮಂಗಳೂರು: ಪೂರೈಕೆಯಾಗದ ನೀರು; ಸಮಸ್ಯೆಯಲ್ಲಿ ನಾಗರಿಕರು

ಮಂಗಳೂರು, ಫೆ.8: ನೀರಿನ ಪೈಪ್‌ಲೈನ್‌ಗೆ ಆದ ಹಾನಿಯಿಂದ ಗುರುವಾರವೂ ನಗರದಲ್ಲಿ ನೀರಿನ ಸರಬರಾಜು ಸ್ಥಗಿತಗೊಂಡಿದ್ದು, ಇದರಿಂದ ನಗರದ ಹಲವೆಡೆ ನಾಗರಿಕರು ಸಮಸ್ಯೆಯನ್ನು ಎದುರಿಸುವಂತಾಗಿದೆ.

ನೀರಿನ ಪೈಪ್‌ಲೈನ್‌ಗೆ ಹಾನಿಯಾದ ಕಾರಣ ಮಂಗಳವಾರದಿಂದ ನಗರದ ಹಲವು ಭಾಗಗಳಿಗೆ ನೀರು ಸರಬರಾಜು ಸ್ಥಗಿತವಾಗಿತ್ತು. ಪೈಪ್‌ಲೈನ್‌ನ ದುರಸ್ತಿ ಕಾರ್ಯವು ಬಿರುಸಿನಿಂದ ನಡೆಯುತ್ತಿದ್ದರೂ ಸತತ ಮೂರು ದಿನದಿಂದ ನಗರದ ಬಹುತೇಕ ಕಡೆ ನೀರು ಲಭ್ಯವಾಗಲಿಲ್ಲ. ವಸತಿ ಸಮುಚ್ಚಯಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಆಗಿದೆ ಎನ್ನಲಾಗಿದೆ.

ನಗರದ ಬಂದರು, ಕೊಡಿಯಾಲಬೈಲು, ಕದ್ರಿ, ಪಿವಿಎಸ್, ಲೇಡಿಹಿಲ್, ಜಲ್ಲಿಗುಡ್ಡೆ, ಕೋಡಿಕಲ್, ಮೇರಿಹಿಲ್, ಪಚ್ಚನಾಡಿ, ಅಶೋಕನಗರ, ದೇರೆಬೈಲ್, ನಾಗುರಿ, ಕೂಳೂರು, ಪಣಂಬೂರು ಸುರತ್ಕಲ್, ಕಾಟಿಪಳ್ಳ, ಕಾನ, ಕುಳಾಯಿ, ಮುಕ್ಕ ಮತ್ತಿತರ ಪ್ರದೇಶಗಳಲ್ಲಿ ಜನರು ನೀರಿನ ಸಮಸ್ಯೆ ಎದುರಿಸುವಂತಾಯಿತು.

ಹಾನಿಯಾಗಿರುವ ನೀರಿನ ಪೈಪ್‌ಲೈನ್‌ನ ದುರಸ್ತಿ ಕಾಮಗಾರಿಯು ಗುರುವಾರವೂ ಮುಂದುವರಿದಿದ್ದು, ಶುಕ್ರವಾರದಿಂದ ನೀರು ಸರಬರಾಜು ಮತ್ತೆ ಆರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ.

ತುಂಬೆ ಡ್ಯಾಂನಿಂದ ಬೆಂದೂರ್‌ವೆಲ್ ಪಂಪ್‌ಹೌಸ್‌ಗೆ ನೀರು ಸರಬರಾಜು ಮಾಡುವ ಪ್ರಮುಖ 1 ಮೀ. ಅಗಲ ವ್ಯಾಸದ ಪೈಪ್‌ಗೆ ನಾಗುರಿ ಸಮೀಪದಲ್ಲಿ ಹಾನಿಯಾಗಿತ್ತು. ನಿರ್ಮಾಣ ಹಂತದ ಕಟ್ಟಡ ಕಾಮಗಾರಿ ಸಂದರ್ಭ ಪೈಪ್‌ಗೆ ಹಾನಿಯಾಗಿದೆ ಎನ್ನಲಾಗಿದೆ. ತುಂಬೆಯಲ್ಲಿ ದುರಸ್ತಿ ಕಾಮಗಾರಿಗಾಗಿ ಮಂಗಳವಾರ ಬೆಳಗ್ಗಿನಿಂದ ನೀರು ಪಂಪಿಂಗ್ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಕಾಮಗಾರಿ ಮುಗಿದ ಬಳಿಕ ಮಂಗಳವಾರ ಮಧ್ಯರಾತ್ರಿ 12:30ರ ವೇಳೆಗೆ ತುಂಬೆಯಿಂದ ನೀರು ಪಂಪಿಂಗ್ ಶುರು ಮಾಡಲಾಗಿತ್ತು. ಆದರೆ ನೀರು ಬೆಂದೂರ್‌ವೆಲ್ ಪಂಪ್‌ಹೌಸ್‌ಗೆ ಕೊಂಚ ಬಂದು ಬಳಿಕ ಸಂಪೂರ್ಣ ನಿಂತಿತ್ತು. ಪರಿಶೀಲಿಸಿದಾಗ ನಾಗುರಿ ಬಳಿ ಪೈಪ್‌ಗೆ ಹಾನಿಯಾಗಿ ನೀರು ವ್ಯರ್ಥವಾಗುತ್ತಿರುವುದು ಕಂಡು ಬಂದಿದೆ. ಮುಂಜಾನೆ 3:30ಕ್ಕೆ ತುಂಬೆಯಲ್ಲಿ ನೀರು ಪಂಪಿಂಗ್ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X