Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. "ಕೊಂಕಣಿ ಭಾಷೆ, ಸಾಹಿತ್ಯದ ರುಚಿ ಸವಿಯಲು...

"ಕೊಂಕಣಿ ಭಾಷೆ, ಸಾಹಿತ್ಯದ ರುಚಿ ಸವಿಯಲು ಭಿನ್ನತೆ ಅಡ್ಡಿಬೇಡ"

ವಿಶ್ವ ಕೊಂಕಣಿ ಸಮಾರಂಭದಲ್ಲಿ ವಿಚಾರಗೋಷ್ಠಿ

ವಾರ್ತಾಭಾರತಿವಾರ್ತಾಭಾರತಿ10 Feb 2024 10:27 PM IST
share
ಕೊಂಕಣಿ ಭಾಷೆ, ಸಾಹಿತ್ಯದ ರುಚಿ ಸವಿಯಲು ಭಿನ್ನತೆ ಅಡ್ಡಿಬೇಡ

ಮಂಗಳೂರು: ಕೊಂಕಣಿ ಭಾಷೆ ಮತ್ತು ಸಾಹಿತ್ಯದ ರುಚಿ ಸವಿಯಲು, ಕಲೆಯನ್ನು ಅಸ್ವಾದಿಸಲು ಕೊಂಕಣಿಯೊಳಗಿನ ಸಮುದಾಯದ ಭಿನ್ನತೆ ಅಡ್ಡಿಬರುತ್ತಿದೆ. ಇದು ಭಾಷೆ, ಸಾಹಿತ್ಯದ ಬೆಳವಣಿಗೆಗೆ ತಡೆಯಾಗುವ ಅಪಾಯವೂ ಇದೆ. ಹಾಗಾಗಿ ಕೊಂಕಣಿ ಭಾಷೆ, ಸಾಹಿತ್ಯ, ಕಲೆಯನ್ನು ಭಿನ್ನತೆ ಮೀರಿ ಬೆಳೆಸಬೇಕು ಎಂದು ರಂಗಕರ್ಮಿ ಎಲ್.ಕೃಷ್ಞಭಟ್ ಅಭಿಪ್ರಾಯಪಟ್ಟರು.

ವಿಶ್ವ ಕೊಂಕಣಿ ಕೇಂದ್ರದ ಕೊಂಕಣಿ ಭಾಷೆ ಮತ್ತು ಸಾಂಸ್ಕೃತಿಕ ಪ್ರತಿಷ್ಠಾನವು ಶಕ್ತಿನಗರದ ಕಲಾಂಗಣ್‌ನಲ್ಲಿ ಏರ್ಪಡಿಸಿ ರುವ ವಿಶ್ವ ಕೊಂಕಣಿ ಸಮಾರಂಭದಲ್ಲಿ ಶನಿವಾರ ನಡೆದ ‘ಕೊಂಕಣಿ ರಂಗಭೂಮಿ ಇಂದು ಮತ್ತು ಮುಂದೆ’ ಎಂಬ ವಿಚಾರ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಗೌಡ ಸಾರಸ್ವತರ ನಾಟಕ ನೋಡಲು ಕೆಥೋಲಿಕ್ ಸಮುದಾಯದವರು ಬರುವುದಿಲ್ಲ. ಕೆಥೋಲಿಕ್ ಸಮುದಾಯದ ನಾಟಕಗಳನ್ನು ನೋಡಲು ಗೌಡ ಸಾರಸ್ವತರಿಗೆ ಹೋಗುವುದಿಲ್ಲ. ಇದು ಕಂದಕವನ್ನು ಸೃಷ್ಟಿಸಲಿದೆಯೇ ವಿನಃ ಒಗ್ಗೂಡಿ ಸದು. ಈ ನಿರ್ಲಕ್ಷ್ಯವನ್ನು ಮೀರಿ ನಿಲ್ಲುವ ಪ್ರಯತ್ನ ಆಗಬೇಕಿದೆ ಎಂದು ಎಲ್.ಕೃಷ್ಞಭಟ್ ಹೇಳಿದರು.

ರಂಗ ಕರ್ಮಿ ಕ್ರಿಸ್ಟೋಫರ್ ಕೊಂಕಣಿ ರಂಗಭೂಮಿಯಲ್ಲೂ ಸಾಕಷ್ಟು ವಿಭಿನ್ನ ಪ್ರಯೋಗಗಳಾಗಿವೆ. ಆದರೆ ಮರಾಠಿಗೆ ಹೋಲಿಸಿದರೆ, ನಾವು ತುಂಬಾ ಹಿಂದೆ ಬಿದ್ದಿದ್ದೇವೆ ಎಂದರು.

ಸಮನ್ವಯಕಾರ ಜಾನ್‌ಎಂ.ಪೆರ್ಮನ್ನೂರು ಮಾತನಾಡಿ ನಾಟಕ ಕೇವಲ ಮನರಂಜನೆಯ ಮಾಧ್ಯಮ ಅಲ್ಲ. ಅದು ಸಮಾಜ ಪರಿವರ್ತನೆಯ ಚಿಂತನೆಗಳಿಗೆ ಕಿಡಿಹಚ್ಚಬೇಕು. ಜೊತೆಗೆ ಪ್ರಭುತ್ವಕ್ಕೆ ಸವಾಲೆಸೆಯುಂತಹ ನಾಟಕಗಳು ಹೆಚ್ಚಬೇಕು ಎಂದರು.

ಇತರ ರಂಗಭೂಮಿಗಳಂತೆಯೇ ಕೊಂಕಣಿ ರಂಗಭೂಮಿಯೂ ಇತ್ತೀಚಿನ ದಿನಗಳಲ್ಲಿ ಸೊರಗುತ್ತಿವೆ. ಶಾಲಾ ಕಾಲೇಜು ಗಳಲ್ಲಿ ತರಬೇತಿ ನೀಡಿ ರಂಗಾಸಕ್ತರನ್ನು ಹುಟ್ಟುಹಾಕುವ ಕೆಲಸ ಆಗಬೇಕು ಎಂದು ರಂಗಕರ್ಮಿ ಪ್ರಕಾಶ್ ಶೆಣೈ ಹೇಳಿದರು.

*4 ರಾಜ್ಯಗಳಲ್ಲಿ 25 ಲಕ್ಷಕ್ಕೂ ಅಧಿಕ ಜನರು ಬಳಸುವ ಸುಮಾರು 42 ಆಡುಭಾಷೆಗಳ ಕೊಂಕಣಿಯ ಶೈಲಿಯು ರಾಜ್ಯ ದಿಂದ ರಾಜ್ಯಕ್ಕೆ ವಿಭಿನ್ನವಾಗಿದೆ. ಕೊಂಕಣಿ ಸಾಹಿತ್ಯ ರಚನೆಗೆ ಬಳಸುವ ಲಿಪಿಗಳೂ ಬೇರೆ ಇದೆ. ಹಾಗಾಗಿ ಜಗತ್ತಿನ ಬೇರೆ ಬೇರೆ ದೇಶದಲ್ಲಿ ನೆಲೆಸಿರುವ ಎಲ್ಲಾ ಕೊಂಕಣಿಗರೂ ಒಪ್ಪುವಂತೆ ಭಾಷೆಗೆ ಸಾಂಸ್ಥಿಕ ರೂಪ ನೀಡಬೇಕಿದೆ ಎಂಬ ಅಭಿಪ್ರಾಯವು ‘ಕೊಂಕಣಿ ಭಾಷಾಭಿವೃದ್ಧಿಗೆ ಕೃತಕ ಬುದ್ಧಿಮತ್ತೆ ಅಳವಡಿಕೆ’ ಗೋಷ್ಠಿಯಲ್ಲಿ ವ್ಯಕ್ತವಾಯಿತು. ಗೌರೀಶ ಪ್ರಭು ಸಮನ್ವಯಕಾರರಾಗಿದ್ದರು.

*ವಿಶ್ವ ಕೊಂಕಣಿ ಸಮಾರಂಭವನ್ನು ಎಂಆರ್‌ಪಿಎಲ್‌ನ ಮುಖ್ಯ ಪ್ರಧಾನ ವ್ಯವಸ್ಥಾಪಕ ಯು.ಎಸ್. ಸುರೇಂದ್ರ ನಾಯಕ್ ಉದ್ಘಾಟಿಸಿದರು. ಗೋವಾದ ಸಾಹಿತಿ ದಾಮೋದರ್ ಕಾಮತ್ ಗಣೇಕರ್ ಗೋಷ್ಠಿಯಲ್ಲಿ ಭಾಗವಹಿಸಿದರು. ಕೃತಕ ಬುದ್ಧಿಮತ್ತೆ ತಜ್ಞರಾದ ವೆಂಕಟರಮಣ ಕಿಣಿ ಅಮೆರಿಕದಿಂದ ವೀಡಿಯೊ ಕಾನ್ಫರೆನ್ಸ್ ಮೂಲಕ ಸಲಹೆ ನೀಡಿದರು. ಸಾಹಿತಿಗಳಾದ ಗೋಕುಲ್ ದಾಸ್ ಪ್ರಭು ಹಾಗೂ ಮೆಲ್ವಿನ್ ರಾಡ್ರಿಗಸ್, ಕಿರಣ್ ಬುಡ್ಕುಳೆ, ನಂದಗೋಪಾಲ ಶೆಣೈ ಮಾತನಾಡಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X