ಬಂಟ್ವಾಳ : ಲಾರಿ-ರಿಕ್ಷಾ ಢಿಕ್ಕಿ; ರಿಕ್ಷಾ ಚಾಲಕನಿಗೆ ಗಾಯ
![ಬಂಟ್ವಾಳ : ಲಾರಿ-ರಿಕ್ಷಾ ಢಿಕ್ಕಿ; ರಿಕ್ಷಾ ಚಾಲಕನಿಗೆ ಗಾಯ ಬಂಟ್ವಾಳ : ಲಾರಿ-ರಿಕ್ಷಾ ಢಿಕ್ಕಿ; ರಿಕ್ಷಾ ಚಾಲಕನಿಗೆ ಗಾಯ](https://www.varthabharati.in/h-upload/2024/02/12/1242920-.gif)
ಬಂಟ್ವಾಳ : ಲಾರಿ ಮತ್ತು ರಿಕ್ಷಾ ಢಿಕ್ಕಿಯಾಗಿ ರಿಕ್ಷಾ ಚಾಲಕ ಗಾಯಗೊಂಡಿರುವ ಘಟನೆ ಬಂಟ್ವಾಳ ಸಮೀಪದ ಜಕ್ರಿಬೆಟ್ಟು ಪಂಪ್ ಹೌಸ್ ಮುಂದೆ ಭಾನುವಾರ ರಾತ್ರಿ ನಡೆದಿರುವ ಬಗ್ಗೆ ವರದಿಯಾಗಿದೆ.
ಗಾಯಾಳು ರಿಕ್ಷಾ ಚಾಲಕನನ್ನು ಪೊಳಲಿ, ಬೆಳಂದೂರು ನಿವಾಸಿ ಚೇತನ್ ಎಂದು ಗುರುತಿಸಲಾಗಿದೆ. ಬಂಟ್ವಾಳ ಪೇಟೆಯಿಂದ ಹೆದ್ದಾರಿಗೆ ಕ್ರಾಸ್ ಮಾಡುವ ವೇಳೆ ಬೆಳ್ತಂಗಡಿ ಕಡೆಯಿಂದ ಮರದ ದಿಮ್ಮಿಗಳನ್ನು ಹೇರಿಕೊಂಡು ಬರುತ್ತಿದ್ದ ಲಾರಿಗೆ ಢಿಕ್ಕಿಯಾಗಿದೆ.
ಬಡ್ಡಕಟ್ಟೆಯಿಂದ ಜಕ್ರಿಬೆಟ್ಟುಗೆ ಹೋಗುತ್ತಿದ್ದ ವೇಳೆ ಘಟನೆ ನಡೆದಿದ್ದು, ಢಿಕ್ಕಿಯ ರಭಸಕ್ಕೆ ರಿಕ್ಷಾ ಸಂಪೂರ್ಣ ಜಖಂ ಗೊಂಡಿದೆ. ಆದರೆ ಚಾಲಕ ಚೇತನ್ ಅವರ ಕಾಲಿಗೆ ಸ್ವಲ್ಪ ಗಾಯವಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸ್ಥಳಕ್ಕೆ ಬಂಟ್ವಾಳ ಸಂಚಾರಿ ಪೋಲೀಸರು ಭೇಟಿ ನೀಡಿದ್ದಾರೆ.
Next Story