Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು...

ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಒಲವು ಹೆಚ್ಚಿಸಲು ಗ್ರಾಮ ಸಾಹಿತ್ಯ ಸಂಭ್ರಮ ಪೂರಕ: ವೆಂಕಟರಮಣ ಬೋರ್ಕರ್

ಪುತ್ತೂರು ಕಸಾಪ ಗ್ರಾಮ ಸಾಹಿತ್ಯ ಸಂಭ್ರಮ

ವಾರ್ತಾಭಾರತಿವಾರ್ತಾಭಾರತಿ27 Feb 2024 7:11 PM IST
share
ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಒಲವು ಹೆಚ್ಚಿಸಲು ಗ್ರಾಮ ಸಾಹಿತ್ಯ ಸಂಭ್ರಮ ಪೂರಕ: ವೆಂಕಟರಮಣ ಬೋರ್ಕರ್

ಪುತ್ತೂರು: ಗ್ರಾಮೀಣ ಮಕ್ಕಳಲ್ಲಿ ಓದುವಿಕೆ ಮತ್ತು ಸಾಹಿತ್ಯದ ಒಲವು ಹೆಚ್ಚಾಗಲು ಇಂತಹ ಗ್ರಾಮ ಸಾಹಿತ್ಯ ಸಂಭ್ರಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಉತ್ತಮ ವಿಚಾರವಾಗಿದ್ದು, ಓದುವಿಕೆ ಮತ್ತು ಸಾಹಿತ್ಯದ ಬೆಳವಣಿಗೆಗೆ ಇದು ಪೂರಕವಾಗಿದೆ. ನಮ್ಮ ಬಾಲ್ಯದಲ್ಲಿ ಇಂತಹ ಅವಕಾಶ ಸಿಗುತ್ತಿರಲಿಲ್ಲ. ಮಕ್ಕಳು ಇಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಂಡು ನಾಡಿನ ಭಾಷೆಯನ್ನು ಉಳಿಸುವ ಕೆಲಸ ಮಾಡಬೇಕು ಎಂದು ನಿಡ್ಪಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಿ. ವೆಂಕಟರಮಣ ಬೋರ್ಕರ್ ಹೇಳಿದರು.

ಅವರು ಕಸಾಪು ಪುತ್ತೂರು ಘಟಕದ ನೇತೃತ್ವದಲ್ಲಿ, ಪುತ್ತೂರು ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು, ನಿಡ್ಪಳ್ಳಿ ಗ್ರಾಮ ಪಂಚಾಯತ್ ಮಿತ್ರಂಪಾಡಿ ಜಯರಾಮ ರೈ ಅಬುದಾಬಿ ಪೋಷಕತ್ವದಲ್ಲಿ, ಚಿಗುರೆಲೆ ಸಾಹಿತ್ಯ ಬಳಗದ ಸಂಯೋಜನೆ ಯಲ್ಲಿ `ಸಾಹಿತ್ಯದ ನಡಿಗೆ ಗ್ರಾಮದ ಕಡೆಗೆ ಅಭಿಯಾನ' ಅಂಗವಾಗಿ ನಡೆದ ಗ್ರಾಮ ಸಾಹಿತ್ಯ ಸಂಭ್ರಮ ಸರಣಿ ಕಾರ್ಯಕ್ರಮ 13ನ್ನು ನಿಡ್ಪಳ್ಳಿ ಸಮುದಾಯ ಭವನದಲ್ಲಿ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿನಿ ರಕ್ಷಿತಾ ಬಿ ಕಾರ್ಯಕ್ರಮದ ಸರ್ವಾಧ್ಯಕತೆ ವಹಿಸಿದ್ದರು. ಕಸಾಪ ಪುತ್ತೂರು ಘಟಕದ ಅಧ್ಯಕ್ಷ ಉಮೇಶ್ ನಾಯಕ್ ಸಮಾರಂಭದ ಅಧ್ಕಕ್ಷತೆ ವಹಿಸಿದ್ದರು. ನಿಡ್ಪಳ್ಳಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಗೀತಾ. ಡಿ, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸಂಧ್ಯಾಲಕ್ಷ್ಮಿ, ಬೆಟ್ಟಂಪಾಡಿ ಸಿ. ಆರ್. ಪಿ. ಪರಮೇಶ್ವರಿ ಪ್ರಸಾದ್, ತಾಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್ ಮಾತನಾಡಿದರು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.

ಬಳಿಕ ನಡೆದ ಗೋಷ್ಠಿಯಲ್ಲಿ `ಸಾಹಿತ್ಯಕ್ಕೆ ನಿಡ್ಪಳ್ಳಿ ಗ್ರಾಮದ ಕೊಡುಗೆ* ವಿಷಯ ಕುರಿತು ನುಳಿಯಾಲು ರಾಧಾಕೃಷ್ಣ ರೈ, `ಕನ್ನಡದಲ್ಲೂ ಐಎಸ್‍ಎ ಎಸ್ ಬರೆಯಿರಿ ಅಭಿಯಾನ' ವಿಷಯ ಮಾಹಿತಿ ಕುರಿತು ಪ್ರಣವ್ ಭಟ್ ವಿಚಾರ ಮಂಡಿಸಿದರು. ಆ ಬಳಿಕ ನಡೆದ ಬಾಲ ಕವಿಗೋಷ್ಠಿ ಅಧ್ಯಕ್ಷತೆಯನ್ನು ವಿವೇಕಾನಂದ ಕಾಲೇಜು ಪುತ್ತೂರು ಇಲ್ಲಿನ ಪತ್ರಿಕೋದ್ಯಮ ವಿಭಾಗ ಮುಖ್ಯಸ್ಥೆ ಭವ್ಯಾ. ಪಿ. ಆರ್. ನಿಡ್ಪಳ್ಳಿ , ಬಾಲ ಕಥಾಗೋಷ್ಠಿ ಅಧ್ಯಕ್ಷತೆಯನ್ನು ಸ. ಪ್ರೌಢಶಾಲೆ ಬೆಟ್ಟಂಪಾಡಿ ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕಿ ಚಂದ್ರಕಲಾ , ಸಾರ್ವಜನಿಕ ವಿಭಾಗದ ಕವಿಗೋಷ್ಠಿಯ ಅಧ್ಯಕ್ಷತೆಯನ್ನು ಮಾ. ಉ. ಹಿ. ಪ್ರಾ. ಶಾಲೆ ಇಲ್ಲಿನ ಆಂಗ್ಲ ಭಾಷಾ ಶಿಕ್ಷಕ ಜನಾರ್ಧನ ದುರ್ಗ ವಹಿಸಿದ್ದರು. ಯುವ ಕವಿಗೋಷ್ಠಿಯಲ್ಲಿ ಸಮನ್ವಿ ರೈ ನುಳಿಯಾಲು, ಶೋಭಾ ಕಾಟುಕುಕ್ಕೆ,ಕು. ಭಾವನಾ. ಕೆ. ಜೆ. ಸುಜಯ ಸ್ವರ್ಗ, ಆನಂದ ರೈ ಅಡ್ಕಸ್ಥಳ,ಅಪೂರ್ವ ಕಾರಂತ್ ದರ್ಬೆ, ಭಾಗವಹಿಸಿದ್ದರು.

ಗ್ರಾಮ ಸಾಹಿತ್ಯ ಸಂಭ್ರಮ ಸಂಚಾಲಕ ನಾರಾಯಣ ಕುಂಬ್ರ ಪ್ರಾಸ್ತಾವಿಕ ನುಡಿಗಳನ್ನಾಡಿದರು. ಚಿಗುರೆಲೆ ಬಳಗದ ಚಿತ್ರಾ. ಎಸ್ ಸ್ವಾಗತಿಸಿದರು. ಅಪೂರ್ವ ಕಾರಂತ್ ದರ್ಬೆ ಕಾರ್ಯಕ್ರಮ ನಿರೂಪಿಸಿದರು. ರಶ್ಮಿತಾ ಸುರೇಶ್ ಜೋಗಿಬೆಟ್ಟು ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X