ಬಂಟ್ವಾಳ: ಬಸ್ ನಿಂದ ಹೊರಕ್ಕೆಸೆಯಲ್ಪಟ್ಟ ವಿದ್ಯಾರ್ಥಿನಿಗೆ ಗಂಭೀರ ಗಾಯ
ಬಂಟ್ವಾಳ: ಬಸ್ ಚಾಲಕನ ಹುಡುಕುತನದಿಂದ ಚಾಲನೆಯ ಪರಿಣಾಮ ಶಾಲಾ ವಿದ್ಯಾರ್ಥಿನಿಯೊರ್ವಳು ಬಸ್ ನಿಂದ ಹೊರಕ್ಕೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡ ಘಟನೆ ಬಿ.ಸಿ.ರೋಡಿನಲ್ಲಿ ವರದಿಯಾಗಿದೆ.
ಪಾಣೆಮಂಗಳೂರು ಗ್ರಾಮದ ಗುಡ್ಡೆಯಂಗಡಿ ನಿವಾಸಿ ಮುಹಮ್ಮದ್ ರಫೀಕ್ ಎಂಬವರ ಮಗಳು ಅಪ್ಸನಾ ಬಸ್ನಿಂದ ಕೆಳಗೆ ಬಿದ್ದು ಗಾಯಗೊಂಡ ವಿದ್ಯಾರ್ಥಿನಿ. ಗಾಯಾಳು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ .
ಬೆಳಗ್ಗೆ ಸುಮಾರು 9.30 ಗಂಟೆಗೆ ಅಪ್ಸನಾ ಹೋಗುತ್ತಿದ್ದ ಬಸ್ ಚಾಲಕ ದುಡುಕುತನ ಹಾಗೂ ನಿರ್ಲಕ್ಷ್ಯತನದಿಂದ ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮವಾಗಿ ಬಸ್ಸ್ ನಿಂದ ಇಳಿಯಲು ಡೋರ್ ಬಳಿ ನಿಂತಿದ್ದ ವಿದ್ಯಾರ್ಥಿನಿ ಬಸ್ನಿಂದ ಒಮ್ಮೆಲೆ ಹೊರೆಗೆ ಎಸೆಯಲ್ಪಟ್ಟರು ಎನ್ನಲಾಗಿದೆ. ರಸ್ತೆಗೆ ಬಿದ್ದು ಆಕೆಯ ತಲೆಗೆ ಗಂಭೀರ ಗಾಯವಾಗಿದೆ. ಮಂಗಳೂರು ನಗರದ ಖಾಸಗಿ ಆಸ್ಪತ್ರೆಯೊಂದರ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಂಟ್ವಾಳ ಟ್ರಾಫಿಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





