Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿಯಿಂದ ಕನಕ ರಾಷ್ಟ್ರೀಯ...

ಮಂಗಳೂರು ವಿವಿಯಿಂದ ಕನಕ ರಾಷ್ಟ್ರೀಯ ವಿಚಾರ ಸಂಕಿರಣ

ವಾರ್ತಾಭಾರತಿವಾರ್ತಾಭಾರತಿ28 March 2024 10:02 PM IST
share
ಮಂಗಳೂರು ವಿವಿಯಿಂದ ಕನಕ ರಾಷ್ಟ್ರೀಯ ವಿಚಾರ ಸಂಕಿರಣ

ಕೊಣಾಜೆ : ಬದುಕಿನಲ್ಲಿ ಮೌಲ್ಯ, ಋಣಪ್ರಜ್ಞೆ, ದೇವರ ಭಯ ಇರಬೇಕು. ತನ್ನ ಧರ್ಮವನ್ನು ಅರಿತು ಆಚರಿಸುವಂತೆ ಇತರೆ ಧರ್ಮಗಳನ್ನೂ ಗೌರವಿಸಬೇಕು. ದೇವರ ವಿಷಯದಲ್ಲಿ ನಾವು ಚಿಕ್ಕವರಾಗುವುದು ಬೇಡ ಎಂಬುದು ಕನಕದಾಸರನ್ನೂ ಒಳಗೊಂಡಂತೆ ಎಲ್ಲ ಸಂತರ ಸಂದೇಶ ಎಂದು ಸಂಸ್ಕೃತಿ ಚಿಂತಕ ಮುನಿರಾಜ ರೆಂಜಾಳ ಹೇಳಿದರು.

ಅವರು ಗುರುವಾರ ಮಂಗಳೂರು ವಿಶ್ವವಿದ್ಯಾನಿಲಯದ ಕನಕದಾಸ ಸಂಶೋಧನಾ ಕೇಂದ್ರದ ವತಿಯಿಂದ ಸಿದ್ಧಕಟ್ಟೆ ಸರಕಾರಿ ಪ್ರಥಮ ದರ್ಜೆ ಕಾಲೇಜು ಸಹಯೋಗದೊಂದಿಗೆ ಏರ್ಪಡಿಸಿದ ಕನಕದಾಸರ ಕಾವ್ಯಗಳು : ಸ್ವರೂಪ ಮತ್ತು ಆಶಯ ಎಂಬ ವಿಷಯದ ಕುರಿತ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಹರಿಭಕ್ತಿಸಾರ ಕೃತಿಯ ಕುರಿತು ಉಪನ್ಯಾಸ ನೀಡಿದರು.

ಕನಕದಾಸರು ಮನುಷ್ಯನ ಅಸಹಾಯಕತೆಯನ್ನು ಅರ್ಥಮಾಡಿಕೊಂಡು ಭಕ್ತಿಯ ದಾರಿಯಲ್ಲಿ ಸಾಂತ್ವಾನ ಹೇಳಲು ಹರಿಭಕ್ತಿಸಾರ ಮತ್ತು ಕೆಲವು ಕೀರ್ತನೆಗಳನ್ನು ರಚಿಸಿದರು ಎಂದರು.

ರಾಮಧಾನ್ಯ ಚರಿತೆ ಕಾವ್ಯದ ಕುರಿತು ಮಾತನಾಡಿದ ವಾಮದಪದವು ಸ.ಪ್ರ.ಕಾಲೇಜಿನ ಪ್ರಾಧ್ಯಾಪಕಿ ಡಾ.ರೇಷ್ಮಾ ಭಟ್ ಮಾತನಾಡಿ ಹಿಂದಿನ ಕಾವ್ಯಗಳ ಓದಿನಿಂದ ನಿಜ ಭಾರತದ ಅರಿವು ಸಾಧ್ಯವಾಗುತ್ತದೆ. ಮನುಷ್ಯನ ನಡುವಿನ ತರತಮ ಭಾವವನ್ನು ಎಲ್ಲ ಸಂತರೂ ವಿರೋಧಿಸಿದ್ದರು ಎಂದರು.

ಆಳ್ವಾಸ್ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥ ಡಾ.ಯೋಗೀಶ್ ಕೈರೋಡಿ ನಳಚರಿತೆ ಕಾವ್ಯಾವಲೋಕನ ಮಾಡಿ ಕನಕದಾಸರು ಕವಿ ಮಾತ್ರವಲ್ಲ ಚಿಂತಕರು ಕೂಡ. ಅವರ ಕಾವ್ಯಗಳು ಮಾನಸಿಕವಾಗಿ ಕುಗ್ಗಿ ಹೋಗುವವರಿಗೆ ಆತ್ಮಸ್ಥೈರ್ಯ ತುಂಬುವ ಕಥನವಾಗಿದೆ ಎಂದರು.

ವಿಚಾರಸಂಕಿರಣವನ್ನು ಉದ್ಘಾಟಿಸಿದ ಕುವೆಂಪು ಭಾಷಾ ಭಾರತಿಯ ನಿಕಟಪೂರ್ವ ಅಧ್ಯಕ್ಷ ಡಾ.ಗಿರೀಶ್ ಅಜಕ್ಕಳ ದಾಸ ಪರಂಪರೆ ಕನ್ನಡದಲ್ಲಿ ಗಾಯನ, ದೀಕ್ಷೆಗಳ ಮೂಲಕ ಇನ್ನೂ ಜೀವಂತವಾಗಿದೆ ಎಂದರು. ಆಶಯ ಭಾಷಣ ಮಾಡಿದ ಕನಕದಾಸ ಸಂಶೋಧನ ಕೇಂದ್ರದ ಸಂಯೋಜಕ ಡಾ.ಧನಂಜಯ ಕುಂಬ್ಳೆ ಕನಕದಾಸರಿಗೆ ಭಕ್ತಿ ಅಂತರಂಗ ಮತ್ತು ಬಹಿರಂಗದ ತಲ್ಲಣಗಳಿಗೆ ಸಾಂತ್ವಾನವಾಗಿತ್ತು. ಸಾಮಾಜಿಕ ತಾರತಮ್ಯವನ್ನು ಆತ್ಮತತ್ವವನ್ನು ಪ್ರತಿಪಾದಿಸಿ ಅದರ ಮೂಲಕ ವಿರೋಧಿಸಿದ್ದರು ಎಂದರು.

ಪ್ರಸಿದ್ಧ ಗಮಕಿ ಮಂಜುಳಾ‌ ಸುಬ್ರಹ್ಮಣ್ಯ ಮಂಚಿ ಹಾಗೂ ಪ್ರಜ್ವಲ್ ಕಿನ್ನಿಗೋಳಿ ಕನಕದಾಸರ ಕಾವ್ಯದ ಆಯ್ದ ಭಾಗಗಳನ್ನು ಪ್ರಸ್ತುತಪಡಿಸಿದರು.

ಸಿದ್ಧಕಟ್ಟೆ ಸ.ಪ್ರ.ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ಬಿ.ಕೆ ಹರಿಪ್ರಸಾದ್ ಸ್ವಾಗತಿಸಿದರು. ಐಕ್ಯೂಎಸಿ ಸಂಯೋಜಕ ವಿನಯ್ ಎಂ.ಎಸ್ ಉಪಸ್ಥಿತರಿದ್ದರು. ಉಪನ್ಯಾಸಕಿ ಸುಮನ್ ಶೆಟ್ಟಿ ವಂದಿಸಿದರು. ಕನ್ನಡ ಉಪನ್ಯಾಸಕಿ ಸಂಧ್ಯಾ ಶೆಟ್ಟಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X