ಬಿಜೆಪಿ ಅಭ್ಯರ್ಥಿಗೆ ಠೇವಣಿ ಹಣ ನೀಡಿದ ಸ್ವಉದ್ಯೋಗಸ್ಥ ಮಹಿಳೆಯರು
![ಬಿಜೆಪಿ ಅಭ್ಯರ್ಥಿಗೆ ಠೇವಣಿ ಹಣ ನೀಡಿದ ಸ್ವಉದ್ಯೋಗಸ್ಥ ಮಹಿಳೆಯರು ಬಿಜೆಪಿ ಅಭ್ಯರ್ಥಿಗೆ ಠೇವಣಿ ಹಣ ನೀಡಿದ ಸ್ವಉದ್ಯೋಗಸ್ಥ ಮಹಿಳೆಯರು](https://www.varthabharati.in/h-upload/2024/04/03/1258220-3-bjp-nari-shakthi.webp)
ಮಂಗಳೂರು : ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಅವರ ಚುನಾವಣಾ ಠೇವಣಿಯ ಹಣಕ್ಕೆ ನಗರದ ಸ್ವ ಉದ್ಯೋಗಸ್ಥ ಮಹಿಳೆಯರು ಬುಧವಾರ ಪಕ್ಷದ ಚುನಾವಣಾ ಕಚೇರಿಯಲ್ಲಿ ಕಿರು ದೇಣಿಗೆ ಸಲ್ಲಿಸಿದರು.
ಈ ಸಂದರ್ಭ ಮಾತನಾಡಿದ ಬ್ರಿಜೇಶ್ ಚೌಟ ಇಂದು ಛತ್ರಪತಿ ಶಿವಾಜಿಯ ಪುಣ್ಯತಿಥಿ. ನಾರೀಶಕ್ತಿ, ಮಾತೃಶಕ್ತಿಯನ್ನು ಗೌರವಿಸುವ ಬಿಜೆಪಿಗೆ ಮಹಿಳೆಯರು ಆಶೀರ್ವಾದ ಮಾಡುವ ಮೂಲಕ ನಾರಿಶಕ್ತಿಯನ್ನು ಪ್ರಶ್ನಿಸಿದವರಿಗೆ ಸೂಕ್ತ ಉತ್ತರ ನೀಡಿದ್ದಾರೆ. ಅವರ ನಿರೀಕ್ಷೆಗೆ ತಕ್ಕಂತೆ ಕಾರ್ಯನಿರ್ವಹಿಸುವೆ ಎಂದರು.
ಈ ಸಂದರ್ಭ ಪಕ್ಷದ ಚುನಾವಣಾ ಪ್ರಭಾರಿ ಕ್ಯಾ.ಗಣೇಶ್ ಕಾರ್ಣಿಕ್, ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್, ಜಿಲ್ಲಾ ಸಮಿತಿ ಉಪಾಧ್ಯಕ್ಷೆ ಪೂಜಾ ಪೈ, ಕೋಶಾಧಿಕಾರಿ ಸಂಜಯ್ ಪ್ರಭು, ಚುನಾವಣಾ ಸಂಚಾಲಕ ನಿತಿನ್ ಕುಮಾರ್, ಜಗದೀಶ್ ಶೇಣವ ಉಪಸ್ಥಿತರಿದ್ದರು.
Next Story