ಗ್ಯಾರಂಟಿ ಹೊರತು ಅಭಿವೃದ್ಧಿ ಕಾಮಗಾರಿ ಇಲ್ಲ: ಪ್ರತಾಪಸಿಂಹ ನಾಯಕ್
ಮಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದು 11 ತಿಂಗಳಾಗುತ್ತಿದ್ದು, ಗ್ಯಾರಂಟಿ ಯೋಜನೆಗಳ ಹೊರ ತಾಗಿ ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆದಿಲ್ಲ. ಇದಕ್ಕೆ ಕಾರಣ ಏನೆಂಬುದನ್ನು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ರಾಜ್ಯದ ಜನತೆಗೆ ತಿಳಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಒತ್ತಾಯಿಸಿದ್ದಾರೆ.
ಬಿಜೆಪಿ ಕಚೇರಿಯಲ್ಲಿ ಬುಧವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ವಿದೇಶಕ್ಕೆ ತೆರಳಿ ಭಾರತದ ಸಂವಿ ಧಾನ, ಪ್ರಜಾಪ್ರಭುತ್ವ, ಚುನಾವಣಾ ಆಯೋಗ ಸಹಿತ ಸ್ವಾಯತ್ತ ಸಂಸ್ಥೆಗಳ ಬಗ್ಗೆ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಚುನಾವಣಾ ಪ್ರಚಾರಕ್ಕಾಗಿ ರಾಜ್ಯಕ್ಕೆ ಆಗಮಿಸಿದ್ದಾರೆ. ಈ ವೇಳೆ ರಾಜ್ಯದ ಜನತೆಯ ಪ್ರಶ್ನೆಗೆ ಅವರು ಉತ್ತರಿಸಬೇಕು ಎಂದರು.
ರಾಜ್ಯದ ಹಾಲು ಉತ್ಪಾದಕರಿಗೆ 600 ಕೋ.ರೂ. ಪ್ರೋತ್ಸಾಹಧನ ಬಾಕಿ ಇದೆ. ಶಾಸಕರ ನಿಧಿಯನ್ನು ಈವರೆಗೆ ನೀಡಿಲ್ಲ. ರಾಜ್ಯ ಸರಕಾರ ಸಾಲ ಪಡೆದುಕೊಂಡಿದ್ದರೂ ಬರ ಪರಿಹಾರಕ್ಕೆ ಹಣ ನೀಡಿಲ್ಲ. ವಿದ್ಯುತ್, ಮುದ್ರಾಂಕ ಶುಲ್ಕ ಏರಿಕೆ ಮಾಡ ಲಾಗಿದೆ. ಇಂಡಿಯಾ ಒಕ್ಕೂಟದ ಸ್ನೇಹಕ್ಕೆ ಕಟ್ಟುಬಿದ್ದು ತಮಿಳುನಾಡಿಗೆ ಕಾವೇರಿ ನೀರು ಬಿಡಲಾಗುತ್ತಿದೆ. ಇದರಿಂದ ರೈತರ ಬೆಳೆಗಳಿಗೆ ಮತ್ತು ಬೆಂಗಳೂರಿಗೆ ಕುಡಿಯಲು ನೀರಿಲ್ಲದಾಗಿದೆ. ರಾಜ್ಯ ಸರಕಾರದ ಅಂಕಿ ಅಂಶದ ಪ್ರಕಾರ 692 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಜನರಿಗೆ ಏನು ಉತ್ತರ ನೀಡುತ್ತೀರಿ ಎಂದು ರಾಹುಲ್ ಗಾಂಧಿಗೆ ಪ್ರತಾಪಸಿಂಹ ನಾಯಕ್ ಪ್ರಶ್ನಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಒಬಿಸಿ ಮೋರ್ಚಾ ರಾಜ್ಯ ಕಾರ್ಯದರ್ಶಿ ಆರ್.ಸಿ. ನಾರಾಯಣ್, ಪಕ್ಷದ ಜಿಲ್ಲಾ ವಕ್ತಾರರಾದ ರಾಜಗೋಪಾಲ ರೈ, ಅರುಣ್ ಶೇಟ್ ಉಪಸ್ಥಿತರಿದ್ದರು.