ಮುಲ್ಕಿ: ಜೆಡಿಎಸ್ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ
ಕಿನ್ನಿಗೋಳಿ: ಮುಲ್ಕಿ - ಮೂಡಬಿದ್ರೆ ವಿಧಾನ ಸಭಾ ಕ್ಷೇತ್ರದ ಸುಮಾರು 25ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ, ಕೆಪಿಸಿಸಿ ಕೋ ಆಡಿನೇಟರ್ ವಸಂತ್ ಬರ್ನಾರ್ಡ್ ಹಾಗೂ ರಾಜ್ಯ ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಕೆ. ಸಾಹುಲ್ ಹಮೀದ್ ಕದಿಕೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಜೆಡಿಎಸ್ ದಕ್ಷಿಣ ಕನ್ನಡ ಜಿಲ್ಲೆಯ ಮಾಜಿ ಉಪಾಧ್ಯಕ್ಷ ಹಾಗೂ ಮುಲ್ಕಿ ಬ್ಲಾಕ್ ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ನಿಸಾರ್ ಅಹ್ಮದ್ ಅಂಗರಗುಡ್ಡೆ, ಹುಸೈನ್, ರಹೀಮ್ ಸಯ್ಯದ್, ನಿಲಾಧರ ದೇವಾಡಿಗ, ಆಸೀಫ್, ಇಸ್ಮಾಯಿಲ್ ಬಿ.ಎಂ., ಮುಸ್ತಫಾ ಸಯ್ಯದ್, ನಶಾಲ್ ಅಹ್ಮದ್, ಖಾದರ್ ಶಿಮಾನ್, ಮುಬಾರಕ್ ಪುನರೂರು ಸೇರಿದಂತೆ 25ಕ್ಕೂ ಹೆಚ್ಚಿನ ಜೆಡಿಎಸ್ ಕಾರ್ಯಕರ್ತರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಅವರ ಕಿನ್ನಿಗೋಳಿಯ ನಿವಾಸದ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಸ್ವಾಗತಿಸಿದರು.
ಈ ಸಂದರ್ಭ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾ ಕಾರ್ಯದರರ್ಶಿ ಅಬ್ದುಲ್ ಖಾದರ್ ಉಪಸ್ಥಿತರಿದ್ದರು.