ಸುರತ್ಕಲ್: ಬಸ್ ಢಿಕ್ಕಿ; ಪಾದಚಾರಿಗೆ ಗಂಭೀರ ಗಾಯ
ಸುರತ್ಕಲ್: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೂರಿಸ್ಟ್ ಬಸ್ ಢಿಕ್ಕಿ ಹೊಡೆದು ಆತ ಗಂಭೀರ ಗಾಯಗೊಂಡಿರುವ ಘಟನೆ ಸುರತ್ಕಲ್ ಸಮೀಪದ ಮಾರಿಗುಡಿ ಎದುರು ಸೋಮವಾರ ರಾತ್ರಿ ವರದಿಯಾಗಿದೆ.
ಗಾಯಗೊಂಡವರನ್ನು ಸ್ಥಳೀಯ ನಿವಾಸಿ ಸುಕೇಶ್ (40) ಎಂದು ತಿಳಿದು ಬಂದಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಬಸ್ ಕೇರಳದಿಂದ ಬಂದಿದ್ದ ಪ್ರವಾಸಿಗರನ್ನು ಕೊಲ್ಲೂರು ಮೂಕಾಂಬಿ ದೇವಸ್ಥಾನಕ್ಕೆ ಕರೆದೊಯ್ದು ಮಂಗಳೂರು ರೈಲು ನಿಲ್ದಾಣಕ್ಕೆ ಬಿಡಲು ತೆಳುತ್ತಿತ್ತು ಎನ್ನಲಾಗಿದೆ.
ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Next Story