ಕಲಾಪಗಳಲ್ಲಿ ಸಕ್ರಿಯವಾಗಿ ಸದಸ್ಯರು ಭಾಗವಹಿಸಿದರೆ ಜನರಿಗೆ ನ್ಯಾಯ ಸಿಗಲು ಸಾಧ್ಯ: ಬಸವರಾಜ್ ಹೊರಟ್ಟಿ
![ಕಲಾಪಗಳಲ್ಲಿ ಸಕ್ರಿಯವಾಗಿ ಸದಸ್ಯರು ಭಾಗವಹಿಸಿದರೆ ಜನರಿಗೆ ನ್ಯಾಯ ಸಿಗಲು ಸಾಧ್ಯ: ಬಸವರಾಜ್ ಹೊರಟ್ಟಿ ಕಲಾಪಗಳಲ್ಲಿ ಸಕ್ರಿಯವಾಗಿ ಸದಸ್ಯರು ಭಾಗವಹಿಸಿದರೆ ಜನರಿಗೆ ನ್ಯಾಯ ಸಿಗಲು ಸಾಧ್ಯ: ಬಸವರಾಜ್ ಹೊರಟ್ಟಿ](https://www.varthabharati.in/h-upload/2024/06/10/1271382-ivan-mane-1.webp)
ಮಂಗಳೂರು, ಜೂ.10: ವಿಧಾನ ಮಂಡಲಗಳ ಕಲಾಪಗಳಲ್ಲಿ ಸಕ್ರಿಯವಾಗಿ ಸದಸ್ಯರು ಕಾರ್ಯ ನಿರ್ವಹಿಸಿದರೆ, ಜನರಿಗೆ ನ್ಯಾಯ ಸಿಗಲು ಸಾಧ್ಯ ಎಂದು ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ್ ಹೊರಟ್ಟಿ ಹೇಳಿದ್ದಾರೆ.
ನೂತನವಾಗಿ ಆಯ್ಕೆಗೊಂಡ ವಿಧಾನ ಪರಿಷತ್ ಸದಸ್ಯರು ಐವನ್ ಡಿ ಸೋಜರವರು ತನ್ನ ಮನೆಯಲ್ಲಿ ಏರ್ಪಡಿಸಿದ ಉಪಹಾರ ಕೂಟದಲ್ಲಿ ಭಾಗವಹಿಸಿ ಮಾತನಾಡಿದರು.
ವಿಧಾನ ಮಂಡಲಗಳಲ್ಲಿ ಚುನಾಯಿತರಾದ ಜನಪ್ರತಿನಿಧಿಗಳು ಸಕ್ರಿಯವಾಗಿ ಭಾಗವಹಿಸಿ, ಜನರ ಸಮಸ್ಯೆಗಳನ್ನು ಉನ್ನತ ವೇದಿಕೆಯಲ್ಲಿ ಚರ್ಚೆ ನಡೆಸಿದರೆ, ಸಮಾಜಕ್ಕೆ ಒಳ್ಳೆ ಸಂದೇಶ ನೀಡಿದಂತಾಗುತ್ತದೆ ಎಂದರು.
ವಿಧಾನ ಸಭೆಯ ಸ್ಪೀಕರ್ ಯು.ಟಿ.ಖಾದರ್, ದ.ಕ.ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ವಿಧಾನ ಪರಿಷತ್ನ ಸದಸ್ಯರುಗಳಾದ ಡಾ. ಮಂಜುನಾಥ ಭಂಡಾರಿ, ಹರೀಶ್ ಕುಮಾರ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಎಐಸಿಸಿ ಕಾರ್ಯದರ್ಶಿ ಪಿ.ವಿ.ಮೋಹನ್, ಕೆಪಿಸಿಸಿ ಕಾರ್ಯದರ್ಶಿ ಇನಾಯತ್ ಆಲಿ, ಫಾದರ್ ಮುಲ್ಲರ್ಸ್ ಕಾಲೇಜಿನ ಆಡಳಿತ ನಿರ್ದೇಶಕ ರೆ.ಫಾ.ಅಜಿತ್ ಮಿನೇಜಸ್, ಸಂತ ಅಂತೊನಿ ಆಶ್ರಮದ ನಿರ್ದೆಶಕ ರೆ.ಫಾ.ಜೆ.ಬಿ.ಕ್ರಾಸ್ತ, ಮಾಜಿ ಮೇಯರು ಶಶಿಧರ ಹೆಗ್ಡೆ, ಕೆ.ಅಶ್ರಫ್, ಕೋಡಿಜಾಲ್ ಇಬ್ರಾಹೀಂ , ಶಾಹುಲ್ ಹಮೀದ್, ಮಾಜಿ ಕಾರ್ಪೋರೇಟರ್ ನಾಗೇಂದ್ರ ಕುಮಾರ್, ಭಾಸ್ಕರ್ ರಾವ್, ಕಾರ್ಪೋರೇಟರ್ ಪ್ರವೀಣ್ಚಂದ್ರ ಆಳ್ವ, ಪದ್ಮರಾಜ್ ಪೂಜಾರಿ, ಕೆ.ಅಶ್ರಫ್, ಮಾರ್ಸೆಲ್ ಮೊಂತೆರೊ, ಡಾ.ಕವಿತಾ ಡಿ ಸೋಜ, ವಿವೇಕ್ರಾಜ್ ಪೂಜಾರಿ ಹಾಗೂ ಇತರರು ಉಪಸ್ಥಿತರಿದ್ದರು.