ರಾಜ್ಯ ವಿಭೂಷಣ ಪ್ರಶಸ್ತಿಗೆ ಮಾಲತಿ ಶೆಟ್ಟಿ ಮಾಣೂರು ಆಯ್ಕೆ
![ರಾಜ್ಯ ವಿಭೂಷಣ ಪ್ರಶಸ್ತಿಗೆ ಮಾಲತಿ ಶೆಟ್ಟಿ ಮಾಣೂರು ಆಯ್ಕೆ ರಾಜ್ಯ ವಿಭೂಷಣ ಪ್ರಶಸ್ತಿಗೆ ಮಾಲತಿ ಶೆಟ್ಟಿ ಮಾಣೂರು ಆಯ್ಕೆ](https://www.varthabharati.in/h-upload/2024/06/11/1271532-malathi.webp)
ಮಂಗಳೂರು, ಜೂ.11: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಹಾಗೂ ಸುವರ್ಣ ಕರ್ನಾಟಕ ಕಾರ್ಮಿಕ ವೇದಿಕೆ (ರಿ) ಮೈಸೂರು ನೀಡುವ ರಾಜ್ಯ ವಿಭೂಷಣ ಪ್ರಶಸ್ತಿಗೆ 2024 ಕ್ಕೆ ಅಮೃತ ಪ್ರಕಾಶ ಪತ್ರಿಕೆ ವ್ಯವಸ್ಥಾಪಕ ಸಂಪಾದಕಿ ಡಾ.ಮಾಲತಿ ಶೆಟ್ಟಿ ಮಾಣೂರು ಆಯ್ಕೆ ಆಗಿದ್ದಾರೆ.
ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜೂನ್ 30ರಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭವನ ವಿಜಯನಗರ ಮೈಸೂರಿನಲ್ಲಿ ನಡೆಯಲಿದೆ ಎಂದು ಪ್ರಕಟನೆ ತಿಳಿಸಿದೆ.
ಡಾ. ಮಾಲತಿ ಶೆಟ್ಟಿ ಮಾಣೂರು ಅವರು 18 ವರ್ಷಗಳಿಂದ ಸಾಹಿತ್ಯ, ಪತ್ರಿಕೋದ್ಯಮದಲ್ಲಿ ತೊಡಗಿಸಿಕೊಂಡಿದ್ದಾರೆ.
Next Story