ಬಂಟ್ವಾಳ: ಯುವಕ ಆತ್ಮಹತ್ಯೆ

ಬಂಟ್ವಾಳ: ಯುವಕನೋರ್ವ ಮನೆಯ ಕಿಟಕಿಯ ಸರಳಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಣೆಮಂಗಳೂರು ಸಮೀಪದ ನರಿಕೊಂಬು ಎಂಬಲ್ಲಿ ಮಂಗಳವಾರ ನಡೆದಿದೆ.
ನರಿಕೊಂಬು ನಿವಾಸಿ ಶೇಖರ ಅವರ ಪುತ್ರ ರಮೇಶ್ (27) ಎಂಬಾತ ಆತ್ಮಹತ್ಯೆ ಮಾಡಿಕೊಂಡ ಯುವಕ. ಯಾವುದೋ ವಿಷ ಪದಾರ್ಥ ಸೇವಿಸಿ ಬಳಿಕ ಕಿಟಕಿಗೆ ಹಗ್ಗ ಬಿಗಿದು ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ.
ಸೌಮ್ಯ ಸ್ವಭಾವದ ಶ್ರಮ ಜೀವಿಯಾಗಿದ್ದ ಈತ ಇಲ್ಲಿನ ಸ್ಥಳೀಯ ದಿನಸಿ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಈತನ ಅಣ್ಣ ಕಳೆದ ವರ್ಷ ಇವರ ಹಳೆಯ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದ. ಶೇಖರ ಪೂಜಾರಿ ಅವರ ಇಬ್ಬರು ಗಂಡು ಮಕ್ಕಳು ಕೂಡ ಆತ್ಮಹತ್ಯೆ ಮಾಡಿಕೊಂಡಂತಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ನಗರ ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
Next Story





