ಕಾಶಿಪಟ್ಣ ದಾರುನ್ನೂರ್ ಎಜುಕೇಶನ್ ಸೆಂಟರ್ನ ನೂತನ ಉಪಾಧ್ಯಕ್ಷ ಸಿಎ ಅಬ್ದುಲ್ಲ ಮಾದುಮೂಲೆಗೆ ಸನ್ಮಾನ
ಮಂಗಳೂರು: ಸಿ.ಎಂ.ಅಬ್ದುಲ್ಲ ಮುಸ್ಲಿಯಾರ್ ಫೌಂಡೇಷನ್ ದಾರುನ್ನೂರ್ ಎಜುಕೇಶನ್ ಸೆಂಟರ್ ಕಾಶಿಪಟ್ಣ ಇದರ ಕೇಂದ್ರ ಸಮಿತಿಯ ನೂತನ ಉಪಾಧ್ಯಕ್ಷರಾಗಿ ಆಯ್ಕೆಯಾದ ದಾರುನ್ನೂರ್ ದುಬೈ ಯುಎಇ ರಾಷ್ಟ್ರೀಯ ಸಮಿತಿಯ ಸಲಹೆಗಾರ ಸಿಎ ಅಬ್ದುಲ್ಲ ಮಾದುಮೂಲೆ ಅವರನ್ನು ಬುಧವಾರ ಮಂಗಳೂರು ಖಾಝಿ ಹೌಸ್ನಲ್ಲಿ ಸನ್ಮಾನಿಸಲಾಯಿತು.
ದಾರುನ್ನೂರ್ ಕೇಂದ್ರ ಸಮಿತಿ ಅಧ್ಯಕ್ಷ ದಕ್ಷಿಣ ಕನ್ನಡ ಜಿಲ್ಲಾ ಖಾಝಿ ತ್ವಾಖ ಅಹ್ಮದ್ ಮುಸ್ಲಿಯಾರ್ ಅಲ್ ಆಝ್ಹರಿ ಅವರು ಶಾಲು ಹೊದಿಸಿ ಸನ್ಮಾನಿಸಿದರು.
ಈ ಸಂದರ್ಭ ದಾರುನ್ನೂರ್ ಕೇಂದ್ರ ಸಮಿತಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಸಮದ್ ಹಾಜಿ, ಕೋಶಾಧಿಕಾರಿ ಉಸ್ಮಾನ್ ಹಾಜಿ ಏರ್ ಇಂಡಿಯಾ, ಜೊತೆ ಕಾರ್ಯದರ್ಶಿ ಅದ್ದು ಹಾಜಿ, ಸದಸ್ಯರಾದ ಹನೀಫ್ ಹಾಜಿ, ಹಾರಿಸ್ ಹಾಜಿ, ಪಿಟಿಎ ಅಧ್ಯಕ್ಷ ಫಕೀರಬ್ಬ ಮಾಸ್ಟರ್, ಮೆನೇಜರ್ ಅಬ್ದುಲ್ ಹಕೀಮ್ ಉಪಸ್ಥಿತರಿದ್ದರು.
Next Story