Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕರಂಬಾರು: ಭೀಮಾ ಕೋರೆಗಾಂವ್ ವಿಜಯ...

ಕರಂಬಾರು: ಭೀಮಾ ಕೋರೆಗಾಂವ್ ವಿಜಯ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ2 Jan 2025 6:13 PM IST
share
ಕರಂಬಾರು: ಭೀಮಾ ಕೋರೆಗಾಂವ್ ವಿಜಯ ದಿನಾಚರಣೆ

ಮಂಗಳೂರು: ಶೋಷಿತರ ಮೊಟ್ಟ ಮೊದಲ ಸ್ವಾಭಿಮಾನದ ಕದನ ಭೀಮಾ ಕೋರೆಗಾಂವ್ ವಿಜಯ ದಿನವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಸ್ವಾಭಿಮಾನಿ ಪ್ರೊ.ಬಿ. ಕೃಷ್ಣಪ್ಪಬಣದ ಮಂಗಳೂರು ತಾಲೂಕು ಸಮಿತಿ ಹಾಗೂ ಕರಂಬಾರು ಗ್ರಾಮ ಸಮಿತಿಯ ಜಂಟಿ ಆಶ್ರಯದಲ್ಲಿ ಬುಧವಾರ ಮಂಗಳೂರು ವಿಮಾನ ನಿಲ್ದಾಣದ ಪ್ರವೇಶ ದ್ವಾರದಿಂದ ಕರಂಬಾರು ಅಂಬೇಡ್ಕರ್ ನಾಮ ಫಲಕದವರೆಗೆ ವಿಜಯೋತ್ಸವ -ಪಂಜಿನ ಮೆರವಣಿಗೆ ಜಾಥಾ ಮೂಲಕ ನಡೆಸಲಾಯಿತು.

ಜಾಥಾವನ್ನು ಉದ್ದೇಶಿಸಿ ಮಾತನಾಡಿದ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ರಘು ಕೆ. ಎಕ್ಕಾರು ಪ್ರಪಂಚದಾದ್ಯಂತ ಹೆಣ್ಣು, ಹೊನ್ನು, ಮಣ್ಣು, ಅಧಿಕಾರಕ್ಕಾಗಿ ಹಲವಾರು ಭೀಕರ ಕದನಗಳು ನಡೆದಿವೆ, ನಡೆಯುತ್ತಲೇ ಇದೆ. ಆದರೆ ವ್ಯಕ್ತಿಯ ಆತ್ಮಗೌರವ, ಸ್ವಾಭಿಮಾನಕ್ಕಾಗಿ ಹಾಗೂ ಅಸ್ಪೃಶ್ಯತೆ, ಅಸಮಾನತೆ, ಅವಮಾನದ ವಿರುದ್ಧ ನಡೆದ ಏಕಮಾತ್ರ ಯುದ್ಧ ವೆಂದರೆ ಅದು ಭೀಮಾ ಕೋರೆಗಾಂವ್ ಯುದ್ಧವಾಗಿತ್ತು. ಇದರಲ್ಲಿ 22 ಜನ ಮಹರ್ ಸೈನಿಕರು ವೀರ ಮರಣ ಹೊಂದಿ ಹಲವು ಜನ ಗಾಯಗೊಳ್ಳುತ್ತಾರೆ.ಪೇಶ್ವೇ ಸೈನ್ಯವನ್ನು ಹಿಮ್ಮೆಟ್ಟಿಸಿ ಅಭೂತಪೂರ್ವ ಗೆಲುವು ತಂದುಕೊಡುವಲ್ಲಿ ಹುತಾತ್ಮ ರಾದ ಮಹರ್ ಸೈನಿಕರ ನೆನಪಿಗಾಗಿ ಬ್ರಿಟಿಷ್ ಸರಕಾರವು 1821ರಲ್ಲಿ ಕೊರೆಂಗಾವ್‌ನಲ್ಲಿ 75 ಅಡಿ ಎತ್ತರದ ಯುದ್ಧ ಸ್ಮಾರಕವನ್ನು ನಿರ್ಮಿಸಿ ಹುತಾತ್ಮರಾದ ಸೈನಿಕರ ಹೆಸರನ್ನು ಕೆತ್ತಲಾಗಿದೆ. ಶೋಷಿತ ಸಮುದಾಯವು ಹಸಿವನ್ನು ಸಹಿಸು ತ್ತದೆ. ಆದರೆ ಅಸಮಾನತೆ, ಅಸ್ಪೃಶ್ಯತೆ, ಅವಮಾನವನ್ನು ಸಹಿಸಲಾರರು. ಅಂತಹ ಸಂದರ್ಭಗಳಲ್ಲಿ ಆತ್ಮಗೌರವ ಹಾಗೂ ಸ್ವಾಭಿಮಾನಕ್ಕಾಗಿ ಸಂಘಟಿತರಾಗಿ ಹೋರಾಟ ಮಾಡಿ ಗುರಿ ಮುಟ್ಟುವ ಛಲ ಈ ಸಮುದಾಯದಲ್ಲಿದೆ ಎಂದರು.

ಜಿಲ್ಲಾ ಮಹಿಳಾ ಸಂಚಾಲಕಿ ಸರೋಜಿನಿ ಬಂಟ್ವಾಳ ವಿಜಯೋತ್ಸವ ದೀವಟಿಗೆಯನ್ನು ಕರಂಬಾರು ಗ್ರಾಮ ಸಂಚಾಲಕ ಗಣೇಶ್ ಅಮೀನ್‌ಗೆ ಹಸ್ತಾಂತರಿಸುವ ಮೂಲಕ ಜಾಥಾಗೆ ಚಾಲನೆ ನೀಡಿದರು. ಸಮಾರೋಪದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಕೃಷ್ಣಾನಂದ ಅವರು ಅಂಬೇಡ್ಕರ್ ಭಾವಚಿತ್ರಕ್ಕೆ ಮಾಲಾ ರ್ಪಣೆ ಮಾಡಿ ಮಾತನಾಡಿದರು.

ಮಂಗಳೂರು ತಾಲೂಕು ಸಂಚಾಲಕ ರಾಘವೇಂದ್ರ ಎಸ್. ಅಧ್ಯಕ್ಷತೆ ವಹಿಸಿದ್ದರು. ಸಂಘಟನಾ ಸಂಚಾಲಕ ರುಕ್ಕಯ್ಯ ಕರಂಬಾರು, ದೊಂಬಯ್ಯ ಕಟೀಲ್, ದಲಿತ ಕಲಾ ಮಂಡಳಿ ಸಂಚಾಲಕ ಗಂಗಾಧರ ಪೇಜಾವರ, ಸಂಕಪ್ಪಕಾಂಚನ್, ಗ್ರಾಮ ಸಂಚಾಲಕ ಗಣೇಶ್ ಕೆಂಚಗುಡ್ಡೆ ಎಕ್ಕಾರು, ಲಿಂಗಪ್ಪಕುಂದರ್ ಪೇಜಾವರ, ಚಂದ್ರಶೇಖರ್ ಸಿದ್ಧಾರ್ಥನಗರ, ಗೀತಾ ಕರಂಬಾರು, ಸೀತಾ ಪೇಜಾವರ, ಸಾಮಾಜಿಕ ಕಾರ್ಯಕರ್ತೆ ಸಜಿನಿ ಕುಳಾಯಿ ಉಪಸ್ಥಿತರಿದ್ದರು. ಮಂಗಳೂರು ತಾಲೂಕು ಸಂಘಟನಾ ಸಂಚಾಲಕ ಕೃಷ್ಣ ಕೆ. ಎಕ್ಕಾರು ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X