Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸಾಹಿತ್ಯದಿಂದ ಉತ್ತಮ ಪ್ರಜೆಗಳಾಗಿ...

ಸಾಹಿತ್ಯದಿಂದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬಹುದು: ಸ್ಪೀಕರ್ ಯು.ಟಿ ಖಾದರ್

ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನ

ವಾರ್ತಾಭಾರತಿವಾರ್ತಾಭಾರತಿ3 Jan 2025 8:35 PM IST
share
ಸಾಹಿತ್ಯದಿಂದ ಉತ್ತಮ ಪ್ರಜೆಗಳಾಗಿ ರೂಪುಗೊಳ್ಳಬಹುದು: ಸ್ಪೀಕರ್ ಯು.ಟಿ ಖಾದರ್

ಕೊಣಾಜೆ: ಉತ್ತಮ ನಾಗರಿಕ ಸಮಾಜದ ನಿರ್ಮಾಣದಲ್ಲಿ ಸಾಹಿತಿಗಳ ಕೊಡುಗೆಯೂ ಅಪಾರವಾದದ್ದು. ಸಮಾಜದಲ್ಲಿ ವೈದ್ಯರು, ಇಂಜಿನಿಯರ್ ಗಳು ಎಷ್ಟು ಮುಖ್ಯವೋ ಸಾಹಿತಿಗಳು ಕೂಡಾ ಮುಖ್ಯವಾಗುತ್ತಾರೆ. ವಿದ್ಯಾರ್ಥಿಗಳು ಭಾಷೆ ಮತ್ತು ಸಾಹಿತ್ಯವನ್ನು ಆಸಕ್ತಿಯಿಂದ ಕಲಿತರೆ ಉತ್ತಮ ಪ್ರಜೆಗಳಾಗಿ ಬೆಳೆಯಬಹುದು ಮಾನವೀಯತೆಯನ್ನು ಅರಳಿಸುವ ಸಾಹಿತ್ಯವು ನಮಗೆ ಕಿಟಕಿಯಿದ್ದಂತೆ. ಈ ಕಿಟಕಿಯ ಮೂಲಕ ನಾವು ಜಗತ್ತನ್ನು ಅರ್ಥಮಾಡಿಕೊಳ್ಳಬಹುದಾಗಿದೆ ಎಂದು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ ಖಾದರ್ ಹೇಳಿದರು.

ಅವರು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಉಳ್ಳಾಲ ತಾಲೂಕು ಘಟಕ, ವೀರರಾಣಿ ಅಬ್ಬಕ್ಕ ರಾಷ್ಟ್ರೀಯ ಪ್ರತಿಷ್ಠಾನ ಮಂಗಳೂರು, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶ್ರೀ ರಾಮಕೃಷ್ಣ ಅನುದಾನಿತ ಪ್ರೌಢಶಾಲೆ ಪಾವೂರು ಹರೇಕಳ ಸಂಯುಕ್ತ ಆಶ್ರಯದಲ್ಲಿ ಹರೇಕಳ ಶ್ರೀರಾಮಕೃಷ್ಣ ಪ್ರೌಢಶಾಲೆಯಲ್ಲಿ ಉಳ್ಳಾಲ ತಾಲೂಕು ಪ್ರಥಮ ವಿದ್ಯಾರ್ಥಿ ಸಾಹಿತ್ಯ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳನ್ನು ಕ್ರೀಡೆ ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲಿಯೂ ತೊಡಗಿಸಿಕೊಳ್ಳಬೇಕು.ಆಗ ಅವರು ಅಡ್ಡ ದಾರಿ ಹಿಡಿಯದೆ ಉತ್ತಮ ವ್ಯಕ್ತಿತ್ವವನ್ನು ಬೆಳೆಸಲು ಸಾಧ್ಯ.ತಂದೆ ತಾಯಿಗಳು ಕೂಡಾ ಪ್ರೋತ್ಸಾಹ ನೀಡಬೇಕಿದೆ. ಉಳ್ಳಾಲ ತಾಲೂಕಿನಲ್ಲಿ ಕಸಾಪ ಉತ್ತಮ ಸಾಹಿತ್ಯ ಕಾರ್ಯಕ್ರಮಗಳನ್ನು ನಡೆಸುತ್ತಿರುವುದು ಅಭಿನಂದನೀಯ ಎಂದರು.

ದ.ಕ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ. ಎಂ.ಪಿ ಶ್ರೀನಾಥ್ ಮಾತನಾಡಿ ಮಕ್ಕಳಿರುವಲ್ಲಿಗೆ ಸಾಹಿತ್ಯ ಪರಿಷತ್ತು ಹೋಗಿ ಗ್ರಾಮ ಗ್ರಾಮಗಳಲ್ಲಿ ಕಾರ್ಯಕ್ರಮ ನಡೆಸುತ್ತಿದೆ. ವಿದ್ಯಾರ್ಥಿಗಳೇ ಕನ್ನಡದ ಭವಿಷ್ಯ. ಅವರಲ್ಲಿ ಆಸಕ್ತಿ ಬೆಳೆಸುವ ಕಾರ್ಯವನ್ನು ಶಿಕ್ಷಕರು ಹೆತ್ತವರು ಮಾಡಬೇಕು ಎಂದರು.

ಆಶಯ ಭಾಷಣ ಮಾಡಿದ ಡಾ.ಧನಂಜಯ ಕುಂಬ್ಳೆ ಮಾತನಾಡಿ ಕನ್ನಡ ಭಾಷೆ ಸುಂದರವೂ ಸುಲಲಿತವೂ ಆದ ಭಾಷೆ, ಅದರ ಸಾಹಿತ್ಯವು ಜೀವನ ಮೌಲ್ಯಗಳನ್ನು, ಸೌಹಾರ್ದತೆಯನ್ನು ಸಾರಿದೆ. ವಿದ್ಯಾರ್ಥಿಗಳು ಈ ಆದರ್ಶವನ್ನು ತಿಳಿದು ಕೊಳ್ಳಬೇಕು ಎಂದರು.

ಹರೇಕಳ ಗ್ರಾಮ ಪಂಚಾಯತ್ ಆವರಣದಿಂದ ಜಾನಪದ ದಿಬ್ಬಣ ನಡೆಯಲಿದ್ದು ಹರೇಕಳ ಗ್ರಾಮ ಪಂಚಾಯತ್ ಅಧ್ಯಕ್ಷ ರಾದ ಗುಲಾಬಿ ಇವರು ಉದ್ಘಾಟನೆ ನೆರವೇರಿಸಿದರು. ಅಕ್ಷರ ಸಂತ ಪದ್ಮಶ್ರೀ ಹರೇಕಳ ಹಾಜಬ್ಬ ಅತಿಥಿಯಾಗಿ ಭಾಗವಹಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು , ಉಳ್ಳಾಲ ತಾಲೂಕು ಕಸಾಪ ಗೌರವ ಕಾರ್ಯದರ್ಶಿ ರವೀಂದ್ರ ರೈ ಕಲ್ಲಿಮಾರ್, ಪಾವೂರು ಹರೇಕಳ ತ್ರಿಶಕ್ತಿ ವಿದ್ಯಾವರ್ಧಕ ಸಂಘ ಅಧ್ಯಕ್ಷರಾದ ಕೆ. ಎನ್. ಆಳ್ವ, ವೀರರಾಣಿ ಅಬ್ಬಕ್ಕ ಪ್ರತಿಷ್ಠಾನದ ಅಧ್ಯಕ್ಷ ಪ್ರೊ . ಭಾಸ್ಕರ್ ರೈ ಕುಕ್ಕುವಳ್ಳಿ ,ಶಾಲಾ ಸಂಚಾಲಕರಾದ ಕಡೆಂಜ ಸೋಮಶೇಖರ್ ಚೌಟ, ಲ.ಚಂದ್ರಹಾಸ ಶೆಟ್ಟಿ ದೇರಳಕಟ್ಟೆ, ಸುರೇಶ್ ಅಸೈ, ಚಂದ್ರ ಶೇಖರ್ ಶೆಟ್ಟಿ ಮಂಟಮೆ, ಪೋಡಾರು ಜಯರಾಮ ಆಳ್ವ, ರಾಧಾಕೃಷ್ಣ ರಾವ್ , ಕೃಷ್ಣಕುಮಾರ್ ಕಮ್ಮಾಜೆ, ವಿಜಯಲಕ್ಷ್ಮಿ ಕಟೀಲು, ಎಡ್ವಾರ್ಡ್ ಲೋಬೊ ಗೀತಾ ಜುಡಿತ್ ಸಾಲ್ದಾನ್ಹ , ಜಯಲಕ್ಷ್ಮಿ , ಮೋಹಿನಿ, ಸಮ್ಮೇಳನ ಸಂಚಾಲಕ ತ್ಯಾಗಮ್ ಹರೇಕಳ ಮೊದಲಾದವರು ಉಪಸ್ಥಿತರಿದ್ದರು.

ಇದೇ ಸಂದರ್ಭ ಕಲೆ, ಸಾಹಿತ್ಯ, ಕ್ರೀಡೆ, ಯಕ್ಷಗಾನ, ಸಾಂಸ್ಕೃತಿಕ ಮುಂತಾದ ಕ್ಷೇತ್ರದಲ್ಲಿ ಜಿಲ್ಲೆ, ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಪ್ರಶಸ್ತಿ ಪಡೆದ ಉಳ್ಳಾಲ ತಾಲೂಕಿನ ಪ್ರತಿಭಾನ್ವಿತ ಸಾಧಕ ವಿದ್ಯಾರ್ಥಿಗಳಾದ ಸಾನ್ವಿ , ಲಾವಣ್ಯ , ವೈಷ್ಣ ಶೆಟ್ಟಿ, ಏಡಿನ್ ಪ್ರಿನ್ಸನ್ ಡಿಸೋಜ ಕ್ರೀಡೆ , ಮಹಮ್ಮದ್ ಹಝೀಮ್ ದಿವ್ಯಶ್ರೀ ಜಿ ಎಚ್, ದೀಕ್ಷಿತಾ , ರಿತಿಶಾ ಕೆ ಜೆ ಇವರನ್ನು ಸನ್ಮಾನಿಸ ಲಾಯಿತು. ಇದೇ ಸಂದರ್ಭದಲ್ಲಿ ಉಳ್ಳಾಲ ಕಸಾಪ ವತಿಯಿಂದ ಸಮ್ಮೇಳನದ ಸಂಚಾಲಕರಾದ ತ್ಯಾಗಂ ಹರೇಕಳ ಹಾಗೂ ಸಾಹಿತ್ಯ ಪರಿಷತ್ ನ ಡಾ.ಧನಂಜಯ ಕುಂಬ್ಳೆ ಅವರನ್ನು ಗೌರವಿಸಲಾಯಿತು.

ರವೀಂದ್ರ ರೈ ಕಲ್ಲಿಮಾರ್ ಸ್ವಾಗತಿಸಿದರು. ಸಮ್ಮೇಳನದ ಸಂಯೋಜಕ ತ್ಯಾಗಂ ಹರೇಕಳ ನಿರೂಪಿಸಿದರು. ಶಾಲಾ ಮುಖ್ಯ ಶಿಕ್ಷಕಿ ಉಷಾಲತಾ ವಂದಿಸಿದರು.

ಸಮ್ಮೇಳನದಲ್ಲಿ ತೋನ್ಸೆ ಪುಷ್ಕಳ ಕುಮಾರ್ ನೇತೃತ್ವದಲ್ಲಿ ವಿದ್ಯಾರ್ಥಿ ಕಾವ್ಯ ವಾಚನ ಗೀತ ಗಾಯನ ಗೋಷ್ಠಿ, ಡಾ.ಭಾಸ್ಕರ್ ರೈ ಕುಕ್ಕುವಳ್ಳಿ ಅಧ್ಯಕ್ಷತೆಯಲ್ಲಿ ನಮ್ಮ ಅಬ್ಬಕ್ಕ ನಾನು ಕಂಡಂತೆ ಎಂಬ ಸಂವಾದಗೋಷ್ಠಿ, ಮಂಗಳೂರಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ, ಮಂಗಳೂರು ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ ಹರೀಶ್, ಉಳ್ಳಾಲ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಸಂತ್ ಎನ್ ಕೊಣಾಜೆ ಇವರೊಂದಿಗೆ ವಿದ್ಯಾರ್ಥಿಗಳು ಶಿಕ್ಷಣ ಮತ್ತು ಮಾಧ್ಯಮ ಕುರಿತ ಸಂವಾದ ನಡೆಸಿದರು.

ಕನ್ನಡ ಶಾಲೆಗಳನ್ನು ಉಳಿಸಿ: ಫಾತಿಮತ್ ರಫೀದ

ಸಾಹಿತ್ಯ ಸಮ್ಮೇಳನಾಧ್ಯಕ್ಷೆ ಹರೇಕಳ ರಾಮಕೃಷ್ಣ ಅನುದಾನಿತ ಪ್ರೌಢಶಾಲೆಯ ಒಂಬತ್ತನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ರಫೀದ ಮಾತನಾಡಿ ಹಿಂದೆ ಅನುದಾನಿತ, ಸರಕಾರಿ ಶಾಲೆಗಳಲ್ಲಿ ಎಸೆಂಬ್ಲಿಯಲ್ಲಿ ವಿದ್ಯಾರ್ಥಿಗಳು ಭಾಷಣ ಮಾಡುವ, ಸುದ್ದಿ ಓದುವ, ಕವಿತಾ ವಾಚನ ಮಾಡುವ ಕ್ರಮ ಇತ್ತು ಇದು ಇಂದು ವಿರಳವಾಗುತ್ತಿದೆ. ಕನ್ನಡ ಶಾಲೆಗಳು ಕಡಿಮೆಯಾಗುತ್ತಿವೆ. ಕನ್ನಡ ಶಾಲೆಗಳನ್ನು ಉಳಿಸಿ ಬೆಳೆಸ ಬೇಕಿದೆ. ಸರಕಾರ ಕನ್ನಡ ಶಾಲೆಗಳಿಗೆ ವಿಶೇಷ ಸೌಲಭ್ಯ ಗಳನ್ನು ಒದಗಿಸಿ ರಕ್ಷಿಸಬೇಕು ಎಂದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X