Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ಸಾಹಿತ್ಯ ಹಬ್ಬ ಉದ್ಘಾಟನೆ|...

ಮಂಗಳೂರು ಸಾಹಿತ್ಯ ಹಬ್ಬ ಉದ್ಘಾಟನೆ| ಸಾಹಿತ್ಯ ಉತ್ಸವ ಹೊಸ ತಿಳಿವುಗಳಿಗೆ ಪ್ರೇರಣೆಯಾಗಲಿ: ಡಾ.ಎಸ್.ಎಲ್. ಭೈರಪ್ಪ

ವಾರ್ತಾಭಾರತಿವಾರ್ತಾಭಾರತಿ11 Jan 2025 6:07 PM IST
share

ಮಂಗಳೂರು, ಜ.೧೧: ಸಾಹಿತ್ಯ ಉತ್ಸವದ ಕಾರ್ಯಗಳು ಯಾಂತ್ರಿಕವಾಗಿರದೆ ಹೊಸ ತಿಳಿವುಗಳಿಗೆ ಪ್ರೇರಣೆ ನೀಡುವ ಜತೆಗೆ, ಯುವ ಮನಸ್ಸುಗಳನ್ನು ರಾಷ್ಟ್ರ ಹಿತ ಚಿಂತನೆಗೆ ಹಚ್ಚುವಂತಾಗಲಿ ಎಂದು ಹಿರಿಯ ಸಾಹಿತಿ ಡಾ.ಎಸ್.ಎಲ್. ಭೈರಪ್ಪ ಅಭಿಪ್ರಾಯಿಸಿದ್ದಾರೆ.

ಭಾರತ್ ಫೌಂಡೇಶನ್ ವತಿಯಿಂದ ನಗರದ ಟಿಎಂಎ ಪೈ ಇಂಟರ್‌ನ್ಯಾಷನಲ್ ಸಭಾಂಗಣದಲ್ಲಿ ಆಯೋಜಿಸಲಾಗಿರುವ ಎರಡು ದಿನಗಳ ಮಂಗಳೂರು ಸಾಹಿತ್ಯ ಹಬ್ಬವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು.

ವರ್ಷಕ್ಕೊಮ್ಮೆ ದೇಶದ ಮೂಲೆಗಳಿಂದ ಸಾಧಕರು, ಪ್ರತಿಭಾನ್ವಿತರು, ಸಾಹಿತಿಗಳು, ಕಲಾವಿದರಿಗೆ ವೇದಿಕೆ ಕಲ್ಪಿಸಿ ಸಾಹಿತ್ಯ ಹಬ್ಬ ಮಾಡುವುದು ಸಾಹಸದ ಕೆಲಸ. ಆದರೆ ಇಲ್ಲಿ ಚರ್ಚಿಸುವ ವಿಷಯಗಳು ತಲುಪಬೇಕಾದವರಿಗೆ ತಲುಪುತ್ತಿ ದೆಯೇ, ನಿರೀಕ್ಷೆಗಳು ಈಡೇರುತ್ತಿವೆಯೇ ಎಂಬುದು ಮುಖ್ಯವಾಗಿರುತ್ತದೆ. ಹಾಗಾಗಿ ಸಾಹಿತ್ಯ ಉತ್ಸವಗಳು ಯಾಂತ್ರಿಕ ವಾದರೆ ಹೊಸ ವಿಚಾರ ಮಾತನಾಡಲು ಸಾಧ್ಯವಾಗದು. ಸಮಾಜಕ್ಕೆ ಹೊಸತನ ನೀಡಲಾಗದು. ಹಾಗಾಗಿ ಈ ಉತ್ಸವ ತನ್ನ ಗುರಿಯನ್ನು ತಲುಪುವ ಹೊಣೆಗಾರಿಕೆ ಆಯೋಜಕರ ಮೇಲಿದ್ದು, ಅದನ್ನು ಈಡೇರಿಸುವ ಭರವಸೆ ತಮಗಿದೆ ಎಂದರು.

ಮಂಗಳೂರಿನಲ್ಲಿ ಯಾವುದೇ ಕೆಲಸದಲ್ಲೂ ಶಿಸ್ತು ಪ್ರಮುಖ. ಭಾಷಣ ಮಾಡುವಾಗ ಮಾತುಗಳು ಎಲ್ಲೋ ಹೋಗಿ ಬಿಡುತ್ತವೆ. ಅದಕ್ಕಾಗಿ ಬರೆದುಕೊಂಡು ಬಂದು ಓದುವಂತೆ ಆಯೋಜಕರು ತಿಳಿಸಿದ್ದಾರೆ ಎಂದು ಹೇಳುತ್ತಾ ತಮ್ಮ ಭಾಷಣದ ಮಾತುಗಳನ್ನು ಅವರು ಓದಿದರು.

2017ಲ್ಲಿ ಈ ಉತ್ಸವದಲ್ಲಿ ಭಾಗವಹಿಸಿದ್ದೆ. ಇಲ್ಲಿ ಏನೇ ಮಾಡಿದರೂ ಅಚ್ಚುಕಟ್ಟು ದೂರದೃಷ್ಟಿ ಇರುತ್ತದೆ. ಹಾಗಾಗಿಯೇ ಇಲ್ಲಿನವರು ಹೊಟೇಲ್ ಉದ್ಯಮ, ಶೈಕ್ಷಣಿಕವಾಗಿ, ವೈದ್ಯಕೀಯ ಕ್ಷೇತ್ರದಲ್ಲಿ ದೇಶಕ್ಕೆ ಮಾದರಿ. ಈ ಭೂಮಿ ಅನೇಕ ವೈದ್ಯರು ಶಿಕ್ಷಕರ ಜತೆ ಶಿವರಾಮ ಕಾರಂತ, ಪಂಜೆ ಮಂಗೇಶರಾಯರು, ಗೋವಿಂದ ಪೈ, ವ್ಯಾಸರಾಯ ಬಲ್ಲಾಳ, ಸೇಡಿಯಾಪು ಕೃಷ್ಣಭಟ್, ಯಶವಂತ ಚಿತ್ತಾಲರಂತಹ ಖ್ಯಾತ ಸಾಹಿತಿಗಳನ್ನು ನೀಡಿದೆ. ಶಿವರಾಮ ಕಾರಂತರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಹಿಂತಿರುಗಿಸಿದ್ದನ್ನು ಮರೆಯಾಲಾದೀತೇ ಎಂದು ಡಾ.ಭೈರಪ್ಪ ಹೇಳಿದರು.

ಮಿಥಿಕ್ ಸೊಸೈಟಿಯ ಗೌರವ ಕಾರ್ಯದರ್ಶಿ ಡಾ. ರವಿ ಸಮನ್ವಯಕಾರರಾಗಿ ಭಾಗವಹಿಸಿದ್ದರು.

ಭಾರತ್ ಫೌಂಡೇಶನ್‌ನ ಟ್ರಸ್ಟಿ ಸುನಿಲ್ ಕುಲಕರ್ಣಿ ಸ್ವಾಗತಿಸಿದರು. ಉದ್ಘಾಟನಾ ಸಮಾರಂಭದ ಆರಂಭದಲ್ಲಿ ಇತ್ತೀಚೆಗೆ ನಿಧನರಾದ ಸಾಹಿತಿ ನಾ. ಡಿಸೋಜಾರಿಗೆ ವೀಡಿಯೋ ನುಡಿಚಿತ್ರ ಮೂಲಕ ನಮನ ಸಲ್ಲಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X