Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು ವಿವಿ - ಕಣಚೂರು ಶಿಕ್ಷಣ ಸಂಸ್ಥೆ...

ಮಂಗಳೂರು ವಿವಿ - ಕಣಚೂರು ಶಿಕ್ಷಣ ಸಂಸ್ಥೆ ನಡುವೆ ಶೈಕ್ಷಣಿಕ ಒಪ್ಪಂದ‌

ವಾರ್ತಾಭಾರತಿವಾರ್ತಾಭಾರತಿ24 Jan 2025 5:35 PM IST
share
ಮಂಗಳೂರು ವಿವಿ - ಕಣಚೂರು ಶಿಕ್ಷಣ ಸಂಸ್ಥೆ ನಡುವೆ ಶೈಕ್ಷಣಿಕ ಒಪ್ಪಂದ‌

ಕೊಣಾಜೆ: ಮಂಗಳೂರು ವಿಶ್ವವಿದ್ಯಾನಿಲಯ ಹಾಗೂ ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆಯ ನಡುವೆ ಶೈಕ್ಷಣಿಕ ಹಾಗೂ ಸಂಶೋಧನೆ ವಿಷಯಕ್ಕೆ ಪೂರಕವಾಗಿ ಒಡಂಬಡಿಕೆಯು ಶುಕ್ರವಾರ ಮಂಗಳೂರು ವಿವಿಯ ಸಿಂಡಿಕೇಟ್ ಸಭಾಂಗಣದಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಪಿ.ಎಲ್.ಧರ್ಮ ಅವರು ಮಾತನಾಡಿ, ಕಣಚೂರು ವೈದ್ಯಕೀಯ ಶಿಕ್ಷಣ ಸಂಸ್ಥೆ ಹಾಗೂ ಮಂಗಳೂರು ವಿವಿ ನಡುವೆ ನಡೆದ ಶೈಕ್ಷಣಿಕ, ಸಂಶೋಧನೆ ವಿಷಯಕ್ಕೆ ಸಂಬಂಧಿಸಿ ದಂತೆ ನಡೆದ ಒಡಂಬಡಿಕೆಯು ಒಂದು ಮಹತ್ವದ ಹೆಜ್ಜೆಯಾಗಿದ್ದು, ಆರೋಗ್ಯ, ಶೈಕ್ಷಣಿಕ ಕ್ಷೇತ್ರದ ಹೊಸ ಸಾಧ್ಯತೆಗಳನ್ನು ಕಂಡುಕೊಳ್ಳುವಲ್ಲಿ ಮಾತ್ರವಲ್ಲದೆ ಈ ಒಪ್ಪಂದವು ಸಾಮಾಜಿಕ ಸಂಬಂಧಗಳನ್ನು ವಿಸ್ತರಿಸುವಲ್ಲಿ ಸಹಕಾರಿಯಾಗಲಿದೆ ಎಂದರು.

ಕಣಚೂರು ವೈದ್ಯಕೀಯ ಮತ್ತು ಸಂಶೋಧನಾ ಕೇಂದ್ರದ ನಿರ್ದೇಶಕರಾದ ಅಬ್ದುಲ್ ರಹಿಮಾನ್ ಅವರು ಮಾತನಾಡಿ, ಮಂಗಳೂರು ವಿವಿ ಮತ್ತು ಕಣಚೂರು ಸಂಸ್ಥೆಯು ಸಮೀಪದಲ್ಲೇ ಇದ್ದು ಇದೀಗ ಒಡಂಬಡಿಕೆಯ ಮೂಲಕ ಶೈಕ್ಷಣಿಕವಾಗಿ ಮತ್ತಷ್ಟು ಹತ್ತಿರವಾಗಿದ್ದೇವೆ. ಈ ಒಡಂಬಡಿಕೆಯಿಂದ ಎರಡು ಶಿಕ್ಷಣ ಸಂಸ್ಥೆಗಳಿಗೆ ಮಾತ್ರವಲ್ಲ,‌ ಇಡೀ ಸಮಾಜಕ್ಕೆ, ಜಗತ್ತಿಗೇ ಶೈಕ್ಷಣಿಕ, ಸಂಶೋಧನೆಯ ಪ್ರಯೋಜನ ಸಿಗುವಂತಾಗಲಿ ಎಂದರು.

ಮಂಗಳೂರು ವಿವಿ ಕುಲಸಚಿವ ರಾಜು ಮೊಗವೀರ ಅವರು ಮಾತನಾಡಿ, ಮಂಗಳೂರು ವಿಶ್ವವಿದ್ಯಾಲಯವು ಸಂಶೋಧನೆಗೆ ಹೆಚ್ಚಿನ ಒತ್ತು ನೀಡಿ ಮುನ್ನಡೆಯುತ್ತಿದೆ. ಶೈಕ್ಷಣಿಕ , ಸಂಶೋಧನೆಯ ಕ್ಷೇತ್ರದ ಒಡಂಬಡಿಕೆಯಿಂದ ಅಧ್ಯಯನ ವ್ಯಾಪ್ತಿ ಇನ್ನಷ್ಟು ವಿಸ್ತಾರಗೊಳ್ಳಲಿದೆ ಎಂದರು.

ಈ ಸಂದರ್ಭದಲ್ಲಿ ಕಣಚೂರು ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್, ಕಣಚೂರು ಮೆಡಿಕಲ್ ಕಾಲೇಜಿನ ಡೀನ್ ಡಾ.ಶಹನಾಝ್ ಮನ್ನಿಪ್ಪಾಡಿ, ‌‌ಪರೀಕ್ಷಾಂಗ ಕುಲಸಚಿವ ಪ್ರೊ. ದೇವೇಂದ್ರಪ್ಪ, ಹಣಕಾಸು ಅಧಿಕಾರಿ ಪ್ರೊ.ವೈ.ಸಂಗಪ್ಪ, ಐಕ್ಯೂಎಸಿ‌ ಸಂಯೋಜಕಕಿ ಡಾ.ಮೋನಿಕಾ ಸದಾನಂದ, ಕಲಾ ನಿಕಾಯದ ಡೀನ್ ಡಾ.ಪರಿಣಿತ, ಕಾಲೇಜು ಅಭಿವೃದ್ಧಿ ಸಮಿತಿಯ ನಿರ್ದೇಶಕ ಡಾ.ಗಣೇಶ್ ಸಂಜೀವ, ಪ್ರಾಧ್ಯಾಪಕ ಡಾ.ನರಂಸಿಂಹಯ್ಯ, ಪ್ರಾಧ್ಯಾಪಕ ಡಾ‌.ಮಂಜಯ್ಯ, ವೀಣಾ‌ ಮೊದಲಾದವರು ಉಪಸ್ಥಿತರಿದ್ದರು.

ಪ್ರಾಧ್ಯಾಪಕರಾದ ಪ್ರೊ.ಜಯರಾಜ್ ಅಮೀನ್ ಅವರು ವಂದಿಸಿದರು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X