Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶೋಷಿತರ ಬೆಳಕು - ಕುದ್ಮುಲ್ ರಂಗರಾವ್...

ಶೋಷಿತರ ಬೆಳಕು - ಕುದ್ಮುಲ್ ರಂಗರಾವ್ ಕೃತಿ ಬಿಡುಗಡೆ

ವಾರ್ತಾಭಾರತಿವಾರ್ತಾಭಾರತಿ30 Jan 2025 6:49 PM IST
share
ಶೋಷಿತರ ಬೆಳಕು - ಕುದ್ಮುಲ್ ರಂಗರಾವ್ ಕೃತಿ ಬಿಡುಗಡೆ

ಮಂಗಳೂರು, ಜ.30: ಡಾ. ಕೆ.ಪಿ.ಮಹಾಲಿಂಗು ಕಲ್ಕುಂದ ಅವರ 13ನೇ ಕೃತಿ ಶೋಷಿತರ ಬೆಳಕು ಕುದ್ಮುಲ್ ರಂಗರಾವ್ ಗುರುವಾರ ಅನಾವರಣಗೊಂಡಿತು.

ಕುದ್ಮುಲ್ ರಂಗರಾವ್ ಅವರ 97ನೇ ಪುಣ್ಯ ತಿಥಿ ದಿನದ ಅಂಗವಾಗಿ ಅಖಿಲ ಭಾರತ ಮುಂಡಾಲ ಯುವ ವೇದಿಕೆ-ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕುದ್ಮುಲ್ ರಂಗರಾವ್ ಎಜುಕೇಶನಲ್ ಟ್ರಸ್ಟ್ ಬಾಬುಗುಡ್ಡ, ಹಾಗೂ ಚಳವಳಿ ಪ್ರಕಾಶನ ನಂಜನಗೂಡು ಇವುಗಳ ಸಂಯುಕ್ತ ಆಶ್ರಯದಲ್ಲಿ ಬಾಬುಗುಡ್ಡೆಯಲ್ಲಿರುವ ಕುದ್ಮುಲ್ ರಂಗರಾವ್ ಸಮಾಧಿ ಸ್ಥಳದಲ್ಲಿ ನಡೆದ ಸಮಾರಂಭದಲ್ಲಿ ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ನೂತನ ಕೃತಿಯನ್ನು ಲೋಕಾರ್ಪಣೆಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ‘ಕುದ್ಮುಲ್ ರಂಗರಾವ್ ಸ್ವಾತಂತ್ರ್ಯ ಪೂರ್ವದಲ್ಲಿ ಮಹಾತ್ಮ ಗಾಂಧಿ ಅವರಿಗಿಂತ ಮೊದಲು ಮತ್ತು ಡಾ.ಅಂಬೇಡ್ಕರ್ ಸಾಮಾಜಿಕ ಹೋರಾಟಗಳನ್ನು ಮಾಡುವ ಮೊದಲೇ ಶೋಷಿತರ ಏಳಿಗೆಗಾಗಿ ದುಡಿದಿದ್ದಾರೆ. ಅಸ್ಪಶ್ಯತೆ ಆಚರಣೆ ವಿರುದ್ಧವಾಗಿ ಆನೇಕ ಕಾರ್ಯಕ್ರಮಗಳನ್ನು ಮಾಡಿದ್ದಾರೆ.ಅಸ್ಪಶ್ಯರಿಗಾಗಿ ಕುದ್ಮುಲ್ ರಂಗರಾವ್ 1892ರಲ್ಲಿ ಚಿಲಿಂಬಿಯಲ್ಲಿ ಶಾಲೆ ಪ್ರಾರಂಭಿಸಿ ಅಸ್ಪಶ್ಯರ ಜೀವನದಲ್ಲಿ ಹೊಸ ಬೆಳಕನ್ನು ಮೂಡಿಸಿದ್ದರು. ಅಸ್ಪಶ್ಯ ಹೆಣ್ಣು ಮಕ್ಕಳಿಆಗಗಿ ವಸತಿ ನಿಲಯ , ತರಬೇತಿ ಶಾಲೆ ಪ್ರಾರಂಭಿಸಿ ಅವರ ಹಿತಕ್ಕಾಗಿ ಶ್ರಮಿಸಿದ್ದರು. ಹೀಗಾಗಿಯೇ ಮಹಾತ್ಮ ಗಾಂಧಿ ಕುದ್ಮುಲ್ ರಂಗರಾವ್ ಅವರನ್ನು ‘ನನ್ನ ಗುರು’ ಎಂದು ಕರೆದರು. ಈಗ ಅವೆಲ್ಲವೂ ಇತಿಹಾಸ ಎಂದರು.

ಕುದ್ಮುಲ್ ರಂಗರಾವ್ ಸಮಾಧಿ ಸ್ಥಳವನ್ನು ಉತ್ತಮ ಸ್ಮಾರಕವಾಗಿ, ಥೀಮ್ ಪಾರ್ಕ್ ಆಗಿ ಸರಕಾರ ನಿರ್ಮಿಸಬೇಕು. ಕುದ್ಮುಲ್‌ರ ಧ್ಯೇಯ , ಆದರ್ಶಗಳು ಅಜರಾಮರವಾಗಿ ಉಳಿಯಬೇಕು ಎಂದು ಹೇಳಿದರು.

ಮೈಸೂರಿನ ಡಾ.ಕೆ.ಪಿ. ಮಾಹಲಿಂಗು ಕಲ್ಕುಂದ ಅವರ 13ನೇ ಕೃತಿ ‘ಶೋಷಿತರ ಬೆಳಕು’ ಕುದ್ಮುಲ್ ರಂಗರಾವ್ ಉತ್ತಮವಾಗಿ ಮೂಡಿ ಬಂದಿದೆ. ಮೈಸೂರಿನ ವ್ಯಕ್ತಿ ದಕ್ಷಿಣ ಕನ್ನಡದ ಸಾಮಾಜಿಕ ಹೋರಾಟಗಾರ ಕುದ್ಮುಲ್ ರಂಗರಾವ್ ಬಗ್ಗೆ ಕೃತಿ ರಚಿಸಿರುವುದು ನಾವೆಲ್ಲರೂ ಹೆಮ್ಮೆ ಪಡುವ ವಿಚಾರವಾಗಿದೆ ಎಂದು ಹೇಳಿದರು.

ಲೇಖಕರಾದ ಅಣ್ಣು , ಬಾಬುಗುಡ್ಡ ಕುದ್ಮುಲ್ ರಂಗರಾವ್ ಎಜುಕೇಷನಲ್ ಟ್ರಸ್ಟ್‌ನ ಅಧ್ಯಕ್ಷ ಬಿ.ಆರ್. ಹೃದಯನಾಥ್, ಅಖಿಲ ಭಾರತ ಮುಂಡಾಲ ಯುವ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಪ್ರದೀಪ್ ಕಾಪಿಕಾಡ್ , ಮಂಗಳುರು ವಿವಿ ಸಿಂಡಿಕೇಟ್ ಸದಸ್ಯ ರಘುರಾಜ್ ಕದ್ರಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್‌ನಾಯಕ್ ಇಂದಾಜೆ, ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಉಪಕರಣ ಕೇಂದ್ರದ ಮುಖ್ಯಸ್ಥ ಎ.ಜಿ. ವಿವೇಕಾನಂದ, ಕರಾಮುವಿ ಮಂಗಳೂರು ಪ್ರಾದೇಶಿಕ ಕೇಂದ್ರ ಪ್ರಾದೇಶಿಕ ನಿರ್ದೇಶಕರು ಡಾ. ಬಿ. ಬಸವರಾಜು, ಮಂಗಳೂರಿನ ಪರಿಶಿಷ್ಠಜಾತಿ ಪರಿಶಿಷ್ಠ ವರ್ಗಗಳ ಅಧ್ಯಯನ ಮತ್ತು ಅಭಿವೃದ್ದಿ ಟ್ರಸ್ಟ್‌ನ ಮೋಹನಾಂಗಯ್ಯ ಸ್ವಾಮಿ , ಕುದ್ಮುಲ್ ರಂಗರಾವ್ ಸ್ಮಾರಕ ಸೇವಾ ಸಂಸ್ಥೆಯ ಗೌರವಾಧ್ಯಕ್ಷ ದೇವೇಂದ್ರ. ಕೆ , ಆಕೃತಿ ಪಬ್ಲಿಕೇಶನ್ಸ್‌ನ ಕಲ್ಲೂರು ನಾಗೇಶ್, ಚಿಂತಕ ಭೂಪೇಶ್ ಪಾಲನ್ , ಉಡುಪಿಯ ಉಪನ್ಯಾಸಕ ಕೆ.ಕೃಷ್ಣಾನಂದ ಮತ್ತಿತರರು ಭಾಗವಹಿಸಿದ್ದರು. ಸಚಿನ್ ಪರ್ಕಳ ಸ್ವಾಗತಿಸಿದರು. ಡಾ. ಕೆ.ಪಿ.ಮಹಾಲಿಂಗು ಕಲ್ಕುಂದ ವಂದಿಸಿದರು.

ಕುದ್ಮುಲ್ ರಂಗರಾವ್ ಸಮಾಧಿಗೆ ಪುಷ್ಪನಮನ: ಕುದ್ಮುಲ್ ರಂಗರಾವ್ ಪುಣ್ಯತಿಥಿಯ ಅಂಗವಾಗಿ ಅವರ ಸಮಾಧಿಗೆ ಭೇಟಿ ನೀಡಿದ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಮನೋಜ್ ಕುಮಾರ್, ಉಪಮೇಯರ್ ಭಾನುಮತಿ ಮತ್ತಿತರರು ಪುಷ್ಪಾರ್ಜನೆ ಮಾಡಿ , ಗೌರವ ಸಲ್ಲಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X