Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೆಲವೇ ವರ್ಷಗಳಲ್ಲಿ ಭಾರತ ಅಭಿವೃದ್ಧಿ...

ಕೆಲವೇ ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ರೂಪುಗೊಳ್ಳಲಿದೆ: ಪ್ರೊ.ಎಂ.ಎಸ್.ಮೂಡಿತ್ತಾಯ

ಪಿ.ಎ. ಶಿಕ್ಷಣ ಸಂಸ್ಥೆಯಲ್ಲಿ ಪದವಿ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ1 Feb 2025 6:09 PM IST
share
ಕೆಲವೇ ವರ್ಷಗಳಲ್ಲಿ ಭಾರತ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಿ ರೂಪುಗೊಳ್ಳಲಿದೆ: ಪ್ರೊ.ಎಂ.ಎಸ್.ಮೂಡಿತ್ತಾಯ

ಕೊಣಾಜೆ: ಭಾರತವು ಯುವ ರಾಷ್ಟ್ರವಾಗಿದ್ದು, ಮುಂದಿನ ಹದಿನೈದು ಅಥವಾ ಇಪ್ಪತ್ತು ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರಗಳ ಸಾಲಿನಲ್ಲಿ ಸೇರುತ್ತದೆ. ಇಂದಿನ ಆಧುನಿಕ ಸ್ಪರ್ಧಾತ್ಮಕ ಕಾಲಘಟ್ಟದಲ್ಲಿ ನಮ್ಮಲ್ಲಿರುವ ಕೌಶಲ ಮತ್ತು ಚಾಣ ಕ್ಯತೆ, ಪರಿಶ್ರಮದಿಂದ ಯಾವುದೇ ಕ್ಷೇತ್ರದಲ್ಲೂ ಯಶಸ್ಸು ಸಾಧಿಸಲು ಸಾಧ್ಯ ಎಂದು ನಿಟ್ಟೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ಎಂ.ಎಸ್.ಮೂಡಿತ್ತಾಯ ಅಭಿಪ್ರಾಯಪಟ್ಟರು.

ಅವರು ಶನಿವಾರ ನಡುಪದವು ಪಿ.ಎ. ಎಜ್ಯುಕೇಷನಲ್ ಟ್ರಸ್ಟ್ ಅಧೀನದ ಪಿ.ಎ. ಕಾಲೇಜ್ ಆಫ್ ಫಾರ್ಮಸಿ, ಸೆಂಟರ್ ಫಾರ್ ಮೆನೇಜ್ ಮೆಂಟ್ ಸ್ಟಡೀಸ್ ಮತ್ತು ರಿಸರ್ಚ್ ಹಾಗೂ ಫಿಸಿಯೋಥೆರಪಿ ಕಾಲೇಜಿನಲ್ಲಿ ಶನಿವಾರ ನಡೆದ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದರು.

ಕಲಿಕೆ ಎಂಬುದು ಪದವಿಗಾಗಿ ಮಾತ್ರವಲ್ಲ. ಜೀವನದುದ್ದಕ್ಕೂ ಹೊಸತನ್ನು ಕಲಿಯುವ ಮೂಲಕ ಜ್ಞಾನ ವೃದ್ಧಿಸುವ ಕಾರ್ಯ ವಾಗಬೇಕು. ಹೆತ್ತವರ ಸಹಕಾರದಿಂದ ಈ‌ ಹಂತಕ್ಕೆ ಬಂದಿದ್ದು ಅವರ ಪರಿಶ್ರಮ, ನಿರೀಕ್ಷೆಗಳನ್ನು ಎಂದಿಗೂ ಹುಸಿಯಾಗಿ ಸಬೇಡಿ ಎಂದು ತಿಳಿಸಿದರು. ‌

ಸಂಸ್ಥೆಯ ಆಡಳಿತ ವಿಭಾಗದ ಟ್ರಸ್ಟಿ ಅಬ್ದುಲ್ಲಾ ಇಬ್ರಾಹಿಂ ಅಧ್ಯಕ್ಷತೆ ವಹಿಸಿ ಮಾತನಾಡಿ, ಇಂದು ಮೂರು ವಿಷಯಗಳಲ್ಲಿ ಪದವಿ ಪಡೆದವರು ದೇಶದ ಭವಿಷ್ಯ ಬದಲಾಯಿಸುವ ಅವಕಾಶ ಹೊಂದಿದ್ದಾರೆ. ಯಾವುದೇ ಕ್ಷೇತ್ರದಲ್ಲಿದ್ದರೂ ಮಾನವೀಯ ಮೌಲ್ಯಗಳು ನಮ್ಮಲ್ಲಿದ್ದಲ್ಲಿ ಜೀವನದಲ್ಲಿ ಯಶಸ್ಸು ಗಳಿಸಲು ಸಾಧ್ಯ. ಪಿ‌.ಎ‌.ಎಜ್ಯುಕೇಶನ್ ಟ್ರಸ್ಟ್ ಇಂದು ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಬದಲಾವಣೆಗಳೊಂದಿಗೆ ವಿದ್ಯಾರ್ಥಿಗಳಿಗೆ ಅನೇಕ ಅವಕಾಶಗಳನ್ನು ಒದಗಿಸುತ್ತಿದೆ ಎಂದರು.

ಬೆಂಗಳೂರು ಐಟಿಸಿ ಇನ್ಫೋಟೆಕ್ ಉಪಾಧ್ಯಕ್ಷ ಅನಿಲ್ ಕುಮಾರ್ ಪ್ರಭಾಕರನ್, ಮುಂಬೈ ನಾನಾವತಿ ಆಸ್ಪತ್ರೆಯ ಸ್ಪೋರ್ಟ್ಸ್ ಮೆಡಿಸಿನ್ ಮತ್ತು ರಿಹ್ಯಾಬಿಲಿಟಿ ಸೆಂಟರ್ ಮುಖ್ಯಸ್ಥ ಡಾ.ಅಲೀ ಇರಾನಿ, ಸಂಸ್ಥೆಯ ಟ್ರಸ್ಟಿ ಮುಹಮ್ಮದ್ ಅಮೀನ್ ಇಬ್ರಾಹಿಂ, ಹಣಕಾಸು ವ್ಯವಹಾರಗಳ ನಿರ್ದೇಶಕ ಅಹ್ಮದ್ ಕುಟ್ಟಿ, ಪಿಎಸಿಟಿ ಎಜಿಎಂ ಸರ್ಫುದ್ದೀನ್,‌ ಪಿಎಸಿಇ ಪ್ರಾಂಶುಪಾಲ ಡಾ.ರಮೀಸ್ ಎಂ.ಕೆ., ಉಪಪ್ರಾಶುಪಾಲೆ ಡಾ.ಶರ್ಮಿಳಾ ಕುಮಾರಿ, ಫಿಸಿಯೋಥೆರಪಿ ಕಾಲೇಜಿನ ಪ್ರಾಂಶುಪಾಲ ಡಾ.ಸತೀಶ್, ಪಿಎಇಟಿ ಡೀನ್ ಡಾ.ಸಯ್ಯದ್ ಅಮೀನ್ ಅಹ್ಮದ್, ಡಾ.ಸಲೀಂ ಅಮೀನ್, ಮಹಮ್ಮದ್ ಮುಬೀನ್ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಪಿಎಸಿಎ ಪ್ರಾಂಶುಪಾಲ ಡಾ.ಸಲೀಮುಲ್ಲಾ ಖಾನ್ ಸ್ವಾಗತಿಸಿದರು. ಪಿಎಐಪಿ ಪ್ರಾಂಶುಪಾಲ ಡಾ.ಸಜೀಶ್ ರಘುನಾಥನ್ ವಂದಿಸಿದರು‌. ಉಪನ್ಯಾಸಕರಾದ ಪ್ರೊ.ಶಮಾ ಅಬ್ಬಾಸ್, ಪ್ರೊ. ನಜಾಫತ್ ಹಾಗೂ ಪ್ರೊ.ಅರ್ಚ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭ ಎಂಬಿಎ , ಬಿ ಮತ್ತು ಡಿ.ಫಾರ್ಮಾ ಹಾಗೂ ಫಿಸಿಯೋಥೆರಪಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣಪತ್ರ ನೀಡಲಾಯಿತು ಹಾಗೂ ಸಾಧಕ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.



share
ವಾರ್ತಾಭಾರತಿ
ವಾರ್ತಾಭಾರತಿ
Next Story
X