Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಜ್ಯ ಇಎಸ್‌ಐ ಸೊಸೈಟಿ ರಚಿಸಲು ಕಾರ್ಮಿಕ...

ರಾಜ್ಯ ಇಎಸ್‌ಐ ಸೊಸೈಟಿ ರಚಿಸಲು ಕಾರ್ಮಿಕ ಸಚಿರಿಗೆ ಸಂಸದ ಬ್ರಿಜೇಶ್ ಚೌಟ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ12 Feb 2025 10:26 PM IST
share
ರಾಜ್ಯ ಇಎಸ್‌ಐ ಸೊಸೈಟಿ ರಚಿಸಲು ಕಾರ್ಮಿಕ ಸಚಿರಿಗೆ ಸಂಸದ ಬ್ರಿಜೇಶ್ ಚೌಟ ಆಗ್ರಹ

ಮಂಗಳೂರು: ಮಂಗಳೂರಿನ ಕಾರ್ಮಿಕ ರಾಜ್ಯ ವಿಮಾ (ಇಎಸ್‌ಐ) ಆಸ್ಪತ್ರೆಯ ಸುಧಾರಣೆಗೆ ರಾಜ್ಯ ಸರಕಾರ ಶೀಘ್ರ ರಾಜ್ಯ ಇಎಸ್‌ಐ ಸೊಸೈಟಿಯನ್ನು ರಚಿಸಬೇಕು ಎಂದು ಸಂಸದ ಬ್ರಿಜೇಶ್ ಚೌಟ ಕಾರ್ಮಿಕ ಸಚಿವ ಸಂತೋಷ್ ಲಾಡ್‌ಗೆ ಆಗ್ರಹಿಸಿದ್ದಾರೆ.

ಈ ಬಗ್ಗೆ ಸಚಿವರಿಗೆ ಪತ್ರ ಬರೆದಿರುವ ಸಂಸದರು, ರಾಜ್ಯ ಇಎಸ್‌ಐ ಸೊಸೈಟಿ ರಚನೆಯಿಂದ ಇಎಸ್‌ಐ ಆಸ್ಪತ್ರೆಗಳಲ್ಲಿ ಮೂಲಸೌಕರ್ಯದ ತ್ವರಿತ ಸುಧಾರಣೆ, ವೈದ್ಯಕೀಯ ಉಪಕರಣಗಳ ಖರೀದಿ, ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅನುಕೂಲವಾಗಲಿದೆ. ಅನುಭವಿ ತಜ್ಞ ವೈದ್ಯರು ಮತ್ತು ನುರಿತ ಸಿಬ್ಬಂದಿ ನೇಮಕ ಮಾಡಲು ಇದು ಸಹಾಯಕವಾಗಲಿದೆ ಎಂದು ತಿಳಿಸಿದ್ದಾರೆ.

ಮಂಗಳೂರು ಇಎಸ್‌ಐ ಆಸ್ಪತ್ರೆಯ ಸಮಸ್ಯೆಗಳ ಕುರಿತು ಚರ್ಚಿಸಲು ತಾನು ಇತ್ತೀಚೆಗೆ ಹೊಸದಿಲ್ಲಿಯಲ್ಲಿ ನೌಕರರ ರಾಜ್ಯ ವಿಮಾ ನಿಗಮದ ಮಹಾನಿರ್ದೇಶಕ ಅಶೋಕ್ ಕುಮಾರ್ ಸಿಂಗ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದ ವೇಳೆ ಇಎಸ್‌ಐಸಿಗೆ ಸಂಬಂಧಿಸಿದ ರಾಜ್ಯದ ಎಲ್ಲಾ ಕಾರ್ಯಚಟುವಟಿಕೆ ಸುಗಮಗೊಳಿಸಲು ಮತ್ತು ಕೇಂದ್ರದಿಂದ ಅನುದಾನ ಬಿಡುಗಡೆಯನ್ನು ಸಮರ್ಥವಾಗಿ ನಿರ್ವಹಿಸಲು ರಾಜ್ಯ ಸರಕಾರವು ಪ್ರತ್ಯೇಕ ಸೊಸೈಟಿ ರಚಿಸಬೇಕು. ಅದು ರಾಜ್ಯದಲ್ಲಿನ ಎಲ್ಲಾ ಇಎಸ್‌ಐಸಿಗೆ ಸಂಬಂಧಿಸಿದ ವಿಷಯಗಳಿಗೆ ಮತ್ತು ಕೇಂದ್ರದ ಫಂಡ್ ವಿತರಣೆಗೆ ಆಡಳಿತ ಮಂಡಳಿಯಾಗಿದೆ. ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಕಾರ್ಯದರ್ಶಿಗಳು ಈ ಸೊಸೈಟಿಯ ಮುಖ್ಯಸ್ಥರಾಗಿರುತ್ತಾರೆಂದು ಡಿಜಿ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಶೀಘ್ರವಾಗಿ ರಾಜ್ಯ ಇಎಸ್‌ಐ ಸೊಸೈಟಿ ರಚನೆ ಸಂಬಂಧ ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕೆಂದು ಸಂಸದರು ಕಾರ್ಮಿಕ ಸಚಿವರನ್ನು ಒತ್ತಾಯಿಸಿದ್ದಾರೆ.

ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು ಕರ್ನಾಟಕದ ಮುಖ್ಯ ಕಾರ್ಯದರ್ಶಿ ಮತ್ತು ಕಾರ್ಮಿಕ ಕಾರ್ಯದರ್ಶಿಗಳನ್ನು ಸಂಪರ್ಕಿಸಿ ರಾಜ್ಯ ಇಎಸ್‌ಐ ಸೊಸೈಟಿ ರಚನೆ ಕುರಿತು ಈಗಾಗಲೇ ಮನವಿ ಸಲ್ಲಿಸಿದೆ. ಈ ಸೊಸೈಟಿ ರಚನೆಯಿಂದ ಜಿಲ್ಲೆಯ ಶ್ರಮಿಕ ವರ್ಗಕ್ಕೆ ಅನುಕೂಲ ಕಲ್ಪಿಸಲು ಹಾಗೂ ಇಎಸ್‌ಐ ಆಸ್ಪತ್ರೆಗೆ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಅಭಿವೃದ್ದಿಗೆ ದೊಡ್ಡ ರೀತಿಯಲ್ಲಿ ಸಹಕಾರಿಯಾಗಲಿದೆ.ಆದ್ದರಿಂದ ಸೊಸೈಟಿ ರಚನೆ ಕುರಿತು ತ್ವರಿತಗತಿಯಲ್ಲಿ ಕ್ರಮ ಕೈಗೊಳ್ಳಲು ಮತ್ತು ಸಚಿವಾಲಯದ ಮಾರ್ಗಸೂಚಿಗಳ ಪ್ರಕಾರ ರಾಜ್ಯ ಇಎಸ್‌ಐ ಸೊಸೈಟಿ ರಚಿಸಲು ಮುಖ್ಯ ಕಾರ್ಯದರ್ಶಿ/ಕಾರ್ಮಿಕ ಕಾರ್ಯದರ್ಶಿಗಳಿಗೆ ತಾವು ನಿರ್ದೇಶನ ನೀಡಬೇಕು ಎಂದು ಬ್ರಿಜೇಶ್ ಚೌಟ ಆಗ್ರಹಿಸಿದ್ದಾರೆ.

ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ್ದ ಸಂಸದ ಬ್ರಿಜೇಶ ಚೌಟ

ಜನವರಿ ಮೊದಲ ವಾರದಲ್ಲಿ ಸಂಸದ ಬ್ರಿಜೇಶ್ ಚೌಟ ಇಎಸ್‌ಐ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದಾಗ ಕಾರ್ಮಿಕರಿಗೆ ವೈದ್ಯಕೀಯ ಸೇವೆಗಳು ಸಮರ್ಪಕವಾಗಿ ಸಿಗದಿರುವ ವಿಚಾರ ಹಾಗೂ ಅಲ್ಲಿನ ಅವ್ಯವಸ್ಥೆ ಬೆಳಕಿಗೆ ಬಂದಿತ್ತು. 100 ಹಾಸಿಗೆಗಳ ಸಾಮರ್ಥ್ಯವಿರುವ ಈ ಆಸ್ಪತ್ರೆಯಲ್ಲಿ ಬರೀ 70 ಮಾತ್ರ ಉಪಯೋಗಕ್ಕೆ ಯೋಗ್ಯವಾಗಿತ್ತು. ಇಲ್ಲಿ 28 ವೈದ್ಯರು ಸೇವೆಗೆ ಅಗತ್ಯವಿದ್ದು, 5 ವೈದ್ಯರು ಮಾತ್ರ ಕಾರ್ಯನಿರ್ವಹಿಸುತ್ತಿದ್ದಾರೆ. ಶ್ರಮಿಕ ವರ್ಗಕ್ಕೆ ಕೇವಲ ಜನರಲ್ ಟ್ರೀಟ್‌ಮೆಂಟ್ ದೊರಕುತ್ತಿದ್ದು ತೀರಾ ಅಗತ್ಯವಾಗಿರುವ ಪ್ರಸೂತಿ, ಮಕ್ಕಳ, ಆರ್ಥೋ ಇತ್ಯಾದಿ ತಜ್ಞ ವೈದ್ಯರ ಹಾಗೂ ನುರಿತ ಸಿಬ್ಬಂದಿ ವರ್ಗದ ಕೊರತೆ ಕಂಡು ಬಂದ ಹಿನ್ನಲೆ ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ ಇತ್ತೀಚೆಗೆ ದೆಹಲಿಯಲ್ಲಿ ಡಿಜಿ ಅವರನ್ನು ಸಂಸದರು ಭೇಟಿಯಾಗಿ ಗಮನಕ್ಕೆ ತಂದಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X