Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನಿರಂಜನ ಕೃತಿಗಳಲ್ಲಿ ಮಾರ್ಕ್ಸ್‌ವಾದ,...

ನಿರಂಜನ ಕೃತಿಗಳಲ್ಲಿ ಮಾರ್ಕ್ಸ್‌ವಾದ, ಗಾಂಧಿ ತತ್ವ , ನೆಹರೂ ಚಿಂತನೆಗಳು ಅಂತರ್ಗತ: ಡಾ.ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ22 Feb 2025 10:22 PM IST
share
ನಿರಂಜನ ಕೃತಿಗಳಲ್ಲಿ ಮಾರ್ಕ್ಸ್‌ವಾದ, ಗಾಂಧಿ ತತ್ವ , ನೆಹರೂ ಚಿಂತನೆಗಳು ಅಂತರ್ಗತ: ಡಾ.ಪುರುಷೋತ್ತಮ ಬಿಳಿಮಲೆ

ಮಂಗಳೂರು, ಫೆ.22: ನಿರಂಜನ ಸೇರಿದಂತೆ ಏಳೆಂಟು ಹೆಸರುಗಳಿಂದ ಸಾಹಿತ್ಯ ಲೋಕದಲ್ಲಿ ಪರಿಚಿತರಾಗಿದ್ದ ಕುಲ್ಕುಂದ ಶಿವರಾಯರು ಅವರದ್ದು ಸೈದ್ಧಾಂತಿಕ ವಿಚಿತ್ರವಾಗಿತ್ತು. ಒಂದು ರೀತಿಯಲ್ಲಿ ಅದೊಂದು ಮಿಶ್ರಣವಾಗಿತ್ತು. ನಿರಂಜನ ಸೇರಿ ದಂತೆ ಪ್ರಗತಿಶೀಲ ಕಾಲಘಟ್ಟದ ಸಾಹಿತಿಗಳು ಮಾರ್ಕ್ಸ್‌ವಾದಿಗಳಾಗಿದ್ದರು. ಹೀಗಾಗಿ ನಿರಂಜನ ಕೃತಿಗಳಲ್ಲಿ ಮಾರ್ಕ್ಸ್‌ ವಾದ, ಗಾಂಧಿ ತತ್ವ ಮತ್ತು ನೆಹರೂ ಚಿಂತನೆಗಳು ಅಂತರ್ಗತವಾಗಿವೆ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ.

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಆಶ್ರಯದಲ್ಲಿ ಶನಿವಾರ ತುಳು ಭವನದಲ್ಲಿ ಆಯೋಜಿಸಲಾದ ಸಾಹಿತಿ ನಿರಂಜನ 100 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಿರಂಜನರ ಹುಟ್ಟೂರು ಸುಬ್ರಹ್ಮಣ್ಯದ ಸಮೀಪದ ಕುಲ್ಕುಂದದಲ್ಲಿ. ಆದರೆ ವೈಯುಕ್ತಿಕವಾಗಿ ಭಾವಜೀವಿ. ಆದರೆ ಅವರ ಒಟ್ಟು ಸಾಹಿತ್ಯದಲ್ಲಿ ಜಮೀನ್ದಾರರು, ಪ್ರಭುತ್ವ, ವಸಾಹತುಗಳ ವಿರುದ್ಧ ಧ್ವನಿ ಎತ್ತಿರುವುದು ಗಮನಾರ್ಹ. ಅವರ ಆಶಯ ಗಳು ಮತ್ತೆ ಮುನ್ನೆಲೆಗೆ ಬರಬೇಕಾಗಿದೆ’ ಎಂದು ಅವರು ಹೇಳಿದರು.

ಪ್ರಗತಿಶೀಲ ಸಾಹಿತ್ಯ ಪ್ರಕಾರದಲ್ಲಿ ಚದುರಂಗ ಹಾಗೂ ನಿರಂಜನರು ಗಟ್ಟಿಯಾಗಿ ನೆಲೆವೂರಿದ್ದಾರೆ. 62 ಸೃಜನಶೀಲ ಹಾಗೂ 20 ಸಂಪಾದಿತ ಸೇರಿದಂತೆ ಒಟ್ಟು 82 ಕೃತಿಗಳನ್ನು ನಿರಂಜನರು ರಚಿಸಿದ್ದಾರೆ ಎಂದು ಅವರು ವಿವರಿಸಿದರು.

ವಿಚಾರಶೀಲತೆ ಅವರಲ್ಲಿ ಪ್ರಕರವಾಗಿತ್ತು. ಈ ಕಾರಣದಿಂದಾಗಿ ಅವರು ಪದ್ಯ ಬರೆಯಲಿಲ್ಲ. ಆದರೆ ಅವರ ಬದುಕು ಪದ್ಯದ ಹಾಗೆ ಇತ್ತು. ಮಹಿಳಾ ಪರ ಲೇಖನಗಳು ಹೆಚ್ಚು ಬರೆದಿದ್ದ ನಿರಂಜನರು ಪ್ರೇಮ ಪತ್ರದಲ್ಲೂ ಸಾಮಾಜಿಕ ಬದ್ಧತೆಯನ್ನು ತಿಳಿಸಿದ್ದರು. ಅವರ ಎಲ್ಲ ಕಥೆಗಳು ಮಹಿಳಾ ಪ್ರಧಾನವಾಗಿದ್ದು ಮಹಿಳೆಯೇ ಅವುಗಳ ಕೇಂದ್ರಬಿಂದು ಆಗಿದ್ದವು ಎಂದು ಡಾ.ಪುರುಷೋತ್ತಮ ಬಿಳಿಮಲೆ ಬಣ್ಣಿಸಿದರು.

‘ನಿರಂಜನ ಅವರ ಪ್ರೇಮಪತ್ರಗಳು ಕೂಡ ಸಾಮಾನ್ಯ ವಿಷಯಗಳನ್ನು ಒಳಗೊಂಡು ಪೇಲವವಾಗಿರಲಿಲ್ಲ. ಸಮಕಾಲೀನ ವಿಷಯಗಳಿಗೆ ಕನ್ನಡಿ ಹಿಡಿದಂತೆ ಇತ್ತು. ಅವರು ಕಾವ್ಯ ರಚನೆಯಲ್ಲಿ ತೊಡಗಿಸಿಕೊಳ್ಳದ ಕೊರತೆಯನ್ನು ಪ್ರೇಮಪತ್ರಗಳು ನಿವಾರಿಸಿವೆ ಎಂದರು.

ಅಧ್ಯಕ್ಷತೆ ವಹಿಸಿದ್ದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ ಗಟ್ಟಿ ಹೊಸ ತಲೆಮಾರಿನ ವಿದ್ಯಾರ್ಥಿಗಳಿಗೆ ನಿರಂಜನರ ಬದುಕು-ಬರಹವನ್ನು ಪರಿಚಯಿಸುವ ಉದ್ದೇಶದಿಂದ ನಿರಂಜನ 100 ಕಾರ್ಯಕ್ರಮ ಆಯೋಜಿಸಲಾಗಿದೆ. ನಿರಂಜನರ ಸಾಹಿತ್ಯ ನಮ್ಮಿಂದ ಕಣ್ಣರೆಯಾಗಿದಂತಿದೆ. ಅವುಗಳನ್ನು ಹುಡುಕಿ ಪುನರ್ ಮುದ್ರಣ ಮಾಡುವ ಪ್ರಯತ್ನ ಮಾಡಬೇಕಾಗಿದೆ ಎಂದರು.

ಕರಾವಳಿ ಲೇಖಕಿಯರ ಹಾಗೂ ವಾಚಕಿಯರ ಸಂಘದ ಅಧ್ಯಕ್ಷೆ ಶಕುಂತಳಾ ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು.

ಅಕಾಡೆಮಿಯ ಸದಸ್ಯ ಉದ್ಯಾವರ ನಾಗೇಶ್ ಸ್ವಾಗತಿಸಿದರು. ರಿಜಿಸ್ಟ್ರಾರ್ ಪೂರ್ಣಿಮಾ ವಂದಿಸಿದರು. ಸದಸ್ಯೆ ಅಕ್ಷತಾ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X