Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ:...

ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ: ಹಲವು ಬೇಡಿಕೆಗಳ ಈಡೇರಿಗೆ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ27 Feb 2025 8:44 PM IST
share
ವಿಟ್ಲ ಪಟ್ಟಣ ಪಂಚಾಯತ್ ಸಾಮಾನ್ಯ ಸಭೆ: ಹಲವು ಬೇಡಿಕೆಗಳ ಈಡೇರಿಗೆ ಒತ್ತಾಯ

ವಿಟ್ಲ: ವಿದ್ಯಾ ಸಂಸ್ಥೆ ನಿರ್ಮಾಣಕ್ಕೆ ಯೋಗ್ಯವಲ್ಲದ ಜಾಗದಲ್ಲಿ ಆಕ್ಷೇಪಗಳ ನಡುವೆ ಒಪ್ಪಿಗೆ ನೀಡುವ ಅವಶ್ಯಕತೆ ಏನು? ಪುರಸಭೆಯಲ್ಲಿ ಇಲ್ಲದ ಕಾನೂನು ಪಟ್ಟಣ ಪಂಚಾಯಿತಿಯಲ್ಲಿ ಯಾಕಿದೆ? ತೆರಿಗೆ ಹಾಕಿದ ತಕ್ಷಣ ಎಲ್ಲಾ ಅಭಿವೃದ್ಧಿಯನ್ನು ಮಾಡಲು ಸಾಧ್ಯವಾ? ದಿನಕ್ಕೆ ಮೂರು ಖಾತೆಯೂ ಆಗದಲ್ಲಿ 90ದಿನದೊಳಗೆ ಬಿ ಖಾತೆ, ಇ ಖಾತೆ ಮಾಡಲು ಸಾಧ್ಯವಾ? ವಾಣಿಜ್ಯ ಉದ್ದೇಶದ ಕಟ್ಟಡಗಳಿಂದ ಸರಿಯಾಗಿ ತೆರಿಗೆ ಸಂಗ್ರಹ ಕಾರ್ಯ ನಡೆಯಬೇಕು ಎಂದು ಪಟ್ಟಣ ಪಂಚಾಯಿತಿ ಸದಸ್ಯರು ಆಗ್ರಹಿಸಿದರು.

ವಿಟ್ಲ ಪಟ್ಟಣ ಪಂಚಾಯಿತ್ತಿ ಸಭಾಂಗಣದಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ ಸದಸ್ಯರು ಹಲವು ಬೇಡಿಕೆಗಳನ್ನು ಮುಂದಿಟ್ಟರು.

ದುಪ್ಪಟ್ಟು ತೆರಿಗೆ ವಿಧಿಸುವುದು, ದಾಖಲೆಗಾಗಿ ಅಲೆದಾಡಿಸುವುದರಿಂದ 5 ಸೆಂಟ್ಸ್ ಒಳಗೆ ಮನೆ ನಿರ್ಮಾಣ ಮಾಡುವ ಬಡವರಿಗೆ ಸಮಸ್ಯೆಯಾಗುತ್ತದೆ. ಖಾತೆ ಮಾಡುವುದಕ್ಕೆ ಇಬ್ಬರಿಗೆ ಚಾರ್ಜ್ ನೀಡಿದರೂ, ಇಲ್ಲಿಯವರೆಗೆ ಒಂದು ಖಾತೆಯೂ ಚಾಲೂ ಆಗಿಲ್ಲ. ದಿನದಲ್ಲಿ 5 ಖಾತೆಗಳು ಎಲ್ಲಾ ಟೇಬಲ್ ಗೆ ಹೋಗಿ ಫಲಾನುಭವಿಗೆ ದಾಖಲೆ ಸಿಗುವಂತಾಗಬೇಕು. ರಾಜ್ಯದಲ್ಲೇ ಸಿಬ್ಬಂದಿಯ ಕೊರತೆವಿದ್ದು, ಇರುವ ಸಿಬ್ಬಂದಿಯಲ್ಲಿ ಕೆಲಸ ನಿರ್ವಹಿಸಬೇಕು. ಟಪ್ಪಾಲ್ ಸ್ವೀಕೃತಿಗೆ ಸರಿಯಾದ ಮಾಹಿತಿ ಇರುವವರನ್ನೇ ನೇಮಕ ಮಾಡಬೇಕು ಎಂಬ ಬೇಡಿಕೆ ಬಂತು.

ಪಳಿಕೆಯಲ್ಲಿ ವಿದ್ಯಾಸಂಸ್ಥೆ ಕಟ್ಟಡದ ಬಗ್ಗೆ ಆಕ್ಷೇಪ ವ್ಯಕ್ತ ಪಡಿಸಿ ನಿರ್ಣಯ ಮಾಡಲಾಗಿದ್ದು, ಅದನ್ನು ಬರೆಯುವ ಸಂದರ್ಭ ತಿರುಚಲಾಗಿದೆ. ಆ ಜಾಗದ ಸಮೀಪದಲ್ಲಿ ಜನತಾ ಕಾಲೋನಿ, ವಿಟ್ಲ ಸ್ಮಶಾನ, ಪಟ್ಟಣ ಪಂಚಾಯಿತಿ ನಿವೇಶನವಿದೆ. ಮೂಲಭೂತ ಸೌಕರ್ಯ ಇಲ್ಲದಿದ್ದರೂ ಅನುಮತಿ ನೀಡಿರುವುದು ತಪ್ಪು. ಬೇಕಾದಷ್ಟು ಸ್ಥಳಾವಕಾಸ ಇರುವ ಕಡೆ ಅವರು ವಿದ್ಯಾಸಂಸ್ಥೆ ಮಾಡಲಿ ನಾವು ಸ್ವಾಗತಿಸುತ್ತೇವೆ. ಆದರೆ ಸದಸ್ಯರುಗಳ ಆಕ್ಷೇಪಣೆಗಳಿಗೆ ಬೆಲೆ ನೀಡದೆ ಅವರಿಗೆ ಪರವಾನಿಗೆ ನೀಡಿರುವುದರ ಬಗ್ಗೆ ವಿರೋಧ ವ್ಯಕ್ತವಾಯಿತು.

ಆಕ್ಷೇಪಣೆ ಇದ್ದರೂ ಒಪ್ಪಿಗೆ ನೀಡಿರುವ ಉದ್ದೇಶ ಏನು...? ಕೊಟ್ಟಿದ್ದು ಯಾಕೆ...? ಇದರಲ್ಲಿ ಅಕ್ರಮ ನಡೆದಿದೆ. ಯಾರು ಆ ಕೃತ್ರಿಮ ಮಾಡಿದ್ದಾರೋ ಅವರ ವಿರುದ್ಧ ತನಿಖೆಗೆ ಲೋಕಾಯುಕ್ತ ಬರೆಯಬೇಕು. ಮೇಲಾಧಿಕಾರಿಗಳ ಗಮನಕ್ಕೆ ತರಬೇಕು. ಪತ್ರಿಕಾ ಪ್ರಕಟಣೆ ನೀಡಿ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಿ, ಆಕ್ಷೇಪಣೆಗಳು ಬಂದ ಮೇಲೆಯೂ ಅದಕ್ಕೆ ಪರವಾನಿಗೆ ನೀಡಿರುವುದು ಅಪರಾಧ. ತೆರಿಗೆಯನ್ನು ಕಟ್ಟುನಿಟ್ಟಿನಲ್ಲಿ ಸಂಗ್ರಹ ಮಾಡಿದರೆ, ಅಭಿವೃದ್ಧಿ ಕಾರ್ಯಕ್ಕೆ ಬೇಕಾದ ಅನುದಾನಕ್ಕೆ ಸಮಸ್ಯೆಯಾಗುವುದಿಲ್ಲ. ಸಾಮಾನ್ಯ ಸಭೆಯಲ್ಲಿ ಕೈಗೊಂಡ ನಿರ್ಣಯಕ್ಕೆ ಒಂದು ತಿಂಗಳು ಆದರೂ ಕ್ರಮ ಆಗದಿದ್ದರೆ, ಸಭೆಯ ಉದ್ದೇಶವೇನು? ಎಂದು ಅಭಿಪ್ರಾಯ ಕೇಳಿ ಬಂತು. ವಿಟ್ಲದ ಚರ್ಚ್ ಬಳಿ ವಾಚಾನಾಲಯಕ್ಕೆ ಅನುಮತಿ ಪಡೆದು ಅಲ್ಲಿ ಮುಸ್ಲಿಮರ ಪ್ರಾರ್ಥನೆ, ಅಝಾನ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಸದಸ್ಯರು ಆರೋಪಿಸಿದರು. ಈ ಸಂದರ್ಭ ಬಿಜೆಪಿ ಮತ್ತು ಕಾಂಗ್ರೆಸ್ ಸದಸ್ಯರ ನಡುವೆ ಭಾರೀ ವಾಗ್ವಾದ ನಡೆಯಿತು. ಬಳಿಕ ಈ ಬಗ್ಗೆ ಅಲ್ಲಿಯ ಸಂಬಂಧಪಟ್ಟವರಲ್ಲಿ ವಿಚಾರಿಸಿ, ನೋಟಿಸ್ ನೀಡಲಾಗುವುದು ಎಂದು ರ್ನಿಣಯಿಸಲಾಯಿತು.

ಸಭೆಯ ಅಧ್ಯಕ್ಷತೆಯನ್ನು ಪಟ್ಟಣ ಪಂಚಾಯಿತಿ ಅಧ್ಯಕ್ಷ ಕರುಣಾಕರ ನಾಯ್ತೊಟ್ಟು ವಹಿಸಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ರವಿಪ್ರಕಾಶ್, ಸದಸ್ಯರಾದ ವಿಕೆಎಂ ಅಶ್ರಫ್, ಅರುಣ್ ಎಂ ವಿಟ್ಲ, ಹಸೈನಾರ್ ನೆಲ್ಲಿಗುಡ್ಡೆ, ಅಶೋಕ್ ಕುಮಾರ್ ಶೆಟ್ಟಿ, ಹರೀಶ್ ಸಿ.ಎಚ್, ಡೀಕಯ್ಯ, ಜಯಂತ ಸಿ.ಎಚ್, ಕೃಷ್ಣ, ವಸಂತ, ರಕ್ಷಿತ, ಶಾಕೀರ, ಸುನೀತ, ವಿಜಯಲಕ್ಷ್ಮೀ, ಪದ್ಮಿನಿ, ಲತಾವೇಣಿ, ನಾಮನಿರ್ದೇಶಕ ಸದಸ್ಯ ಮಹಮ್ಮದ್ ಇಕ್ಬಾಲ್ ಹಾನೆಸ್ಟ್, ಶ್ರೀನಿವಾಸ ಶೆಟ್ಟಿ ಕೊಲ್ಯ, ಸುನೀತಾ ಕೋಟ್ಯಾನ್, ಮುಖ್ಯಾಧಿಕಾರಿ ಕರುಣಾಕರ, ಸಮುದಾಯ ಸಂಘಟನಾದಿಕಾರಿ ಶ್ರೀಶೈಲ ಸಂಕನ ಗೌಡ ಮತ್ತಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X