Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಅಡ್ಡೂರು: ವಕ್ಫ್ ತಿದ್ದುಪಡಿ ಮಸೂದೆ...

ಅಡ್ಡೂರು: ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಬದ್ರಿಯಾ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ9 March 2025 8:47 PM IST
share
ಅಡ್ಡೂರು: ವಕ್ಫ್ ತಿದ್ದುಪಡಿ ಮಸೂದೆ ವಿರುದ್ಧ ಬದ್ರಿಯಾ ಜುಮಾ ಮಸೀದಿ ವತಿಯಿಂದ ಪ್ರತಿಭಟನೆ

ಅಡ್ಡೂರು: ಕೇಂದ್ರ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ವಿವಾದಿತ ವಕ್ಫ್ ತಿದ್ದುಪಡಿ ಮಸೂದೆಯ ವಿರುದ್ಧ ಅಡ್ಡೂರು ಕೇಂದ್ರ ಬದ್ರಿಯಾ ಜುಮಾ ಮಸೀದಿ ವತಿಯಿಂದ ಅಡ್ಡೂರು ಜಂಕ್ಷನ್ ನಲ್ಲಿ ರವಿವಾರ ಪ್ರತಿಭಟನೆ ನಡೆಸಲಾಯಿತು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಬದ್ರಿಯಾ ಜುಮಾ ಮಸೀದಿ ಖತೀಬ್ ಸದಖತುಲ್ಲಾ ಫೈಝಿ, “ವಕ್ಫ್ ತಿದ್ದುಪಡಿ ಮಸೂದೆ ಸಂವಿಧಾನದ 26ನೇ ವಿಧಿಗೆ ವಿರುದ್ಧವಾಗಿದೆ. ಇದನ್ನು ತರಾತುರಿಯಲ್ಲಿ ಅಂಗೀರಕರಿಸಲಾಗಿದೆ. ಕೇಂದ್ರ ಸರಕಾರ ಬೆರಳೆಣಿಕೆಯ ಮೂಲಭೂತವಾದಿಗಳ ಹಿತಕ್ಕೆ ಮಣಿದು ಮಾರಕವಾದ ವಿಧೇಯಕಗಳನ್ನು ಜಾರಿಗೊಳಿಸುತ್ತಿದ್ದು, ಇದು ದೇಶ ವಿಭಜನೆಗೆ ಕಾರಣವಾಗುತ್ತಿವೆ. ಈ ಹಿಂದೆ ದೇಶದಲ್ಲಿ ಯಾವುದೇ ಮಸೂದು ಅಥವಾ ತಿದ್ದುಪಡಿ ತರುವಾಗ ಸಂವಿಧಾನದಡಿ ನ್ಯಾಯೋಚಿತ ವಾಗಿ ಲೋಕಸಭೆಯಲ್ಲಿ ಮಂಡಿಸಲಾಗುತ್ತಿತ್ತು. ಆದರೆ ಇತ್ತೀಚಿಗೆ ತರಾತುರಿಯಲ್ಲಿ ದ್ವೇಷದ ಮೂಲಕ ಮಸೂದೆಗಳಳನ್ನು ಜಾರಿಗೊಳಿಸುವ ಉದ್ದೇಶವೇನು? ಜನರನ್ನು ವಿಭಜಿಸುವ ತಂತ್ರವೇ? ಧಾರ್ಮಿಕ ಭಾವನೆಗಳನ್ನು ಪ್ರಚೋದಿಸುವ ಹುನ್ನಾರ ಅಡಗಿದೆಯೇ” ಎಂದು ಪ್ರಶ್ನಿಸಿದರು.

“ದೇಶದಲ್ಲಿ ಇಸ್ಲಾಂ ಶಾಂತಿಯ ಮಾರ್ಗದಲ್ಲಿ ಬೆಳೆಯುತ್ತಿದೆ. ಮುಸ್ಲಿಮರನ್ನು ಮಸೂದೆ, ದಬ್ಬಾಳಿಕೆಯ ಮೂಲಕ ನಿರ್ಣಾಮ ಮಾಡಲು ಯಾರಿಂದಲೂ ಸಾಧ್ಯವಿಲ್ಲ. ವಕ್ಫ್ ತಿದ್ದುಪಡಿ ವಿಧೇಯಕವನ್ನು ಜಾರಿಗೆ ತರಲು ಬಿಡುವುದಿಲ್ಲ” ಎಂದರು.

ಸಾಮಾಜಿಕ ಕಾರ್ಯಕರ್ತ ಅಶ್ರಫ್ ನಡುಗುಡ್ಡೆ ಮಾತನಾಡಿ, “ದೇಶದಲ್ಲಿ ವಿಭಜನೆ ಆಡಳಿತ ನಡೆಸುವ ಉದ್ದೇಶದಿಂದ ಕೇಂದ್ರ ಬಿಜೆಪಿ ಸರಕಾರ ವಿವಾದಿತ ವಕ್ಪ್ ತಿದ್ದುಪಡಿ ಮಸೂದೆ ಜಾರಿಗೆ ತಂದಿದೆ. ಸಂಸತ್ತಿನ ಜಂಟಿ ಸಮಿತಿ (ಜೆಪಿಸಿ)ಯ ವರದಿಯು ಅಳವಡಿಸಿಕೊಂಡಿರುವ ಎಲ್ಲ ತಿದ್ದುಪಡಿಗಳು ಅವರಿಗೆ ಬೇಕಾಗುವ ರೀತಿಯಲ್ಲಿ ರಚಿಸಲಾಗಿದೆ. ಈ ಮಸೂದೆ ಕಾಯ್ದೆಯಾಗಿ ಜಾರಿಗೆ ಬಂದರೆ ವಕ್ಫ್ ಅನ್ನು ಘೋಷಿಸುವುದು ಇನ್ನು ಮುಂದೆ ಕಷ್ಟಕರವಾಗಲಿದೆ. ಎಲ್ಲಾ ವಕ್ಫ್ ಆಸ್ತಿಗಳನ್ನು ಆರು ತಿಂಗಳೊಳಗೆ ಡಿಜಿಟಲ್ ದಾಖಲೆ ಮಾಡಬೇಕು. ಇಲ್ಲದಿದ್ದರೆ ಅವುಗಳ ವಕ್ಫ್ ಸ್ಥಾನಮಾನ ಇರುವುದಿಲ್ಲ. ದಾಖಲೆಗಳಿಲ್ಲದ ಮೌಕಿಕ ಒಡಂಬಡಿಕೆಯ ಮೂಲಕ ವಕ್ಫ್ ಎಂದು ಘೋಷಿತವಾದ ವಕ್ಫ್ ಆಸ್ತಿಗಳು ಸರಕಾರದ ಸುಪರ್ದಿಯಲ್ಲಿದ್ದರೆ ಅಥವಾ ತಗಾದೆಯಲ್ಲಿದ್ದರೆ ವಕ್ಫ್ ಎಂದು ಪರಿಗಣಿಸಲಾಗುವುದಿಲ್ಲ. ಅಲ್ಲದೆ, ವಕ್ಫ್ ಆಸ್ತಿಯನ್ನು ಸರಕಾರ ಒತ್ತುವರಿ ಮಾಡಿದ್ದರೆ ಆ ತಗಾದೆಯನ್ನು ಸರಕಾರವೇ ನೇಮಿಸುವ ಜಿಲ್ಲಾಧಿಕಾರಿಗಿಂತ ಮೇಲ್ಪಟ್ಟ ‘ನಿಯೋಜಿತ ಅಧಿಕಾರಿ’ ಅದರ ಬಗ್ಗೆ ವಿಚಾರಣೆ ಮಾಡಿ ತೀರ್ಮಾನ ತೆಗೆಕೊಳ್ಳಬೇಕಾಗುತ್ತದೆ. ವಕ್ಫ್ ಆಸ್ತಿಗಳ ಸರ್ವೇಯನ್ನು ಸ್ವತಂತ್ರ ಸರ್ವೇ ಕಮಿಷನರ್ ಬದಲಿಗೆ ಜಿಲ್ಲಾಧಿಕಾರಿಯೇ ಮಾಡುವುದನ್ನು ಜೆಪಿಸಿಯು ಎತ್ತಿಹಿಡಿದಿದ್ದು, ಇವೆಲ್ಲವೂ ಏಕಪಕ್ಷೀಯವಾಗಿವೆ. ಕೇಂದ್ರ ಸರಕಾರ ದುರುದ್ದೇಶ ಪೂರಿತ ತಿದ್ದುಪಡಿಗಳನ್ನು ತರುವ ಮೂಲಕ ತನ್ನ ಉದ್ದೇಶವನ್ನು ಸಾಧಿಸಿಕೊಳ್ಳುವ ಪ್ರಯತ್ನವನ್ನು ಮಾಡುತ್ತಿದೆ ಎಂದು ವಿವರಿಸಿದರು.

ಈ ಸಂದರ್ಭ ಅಡ್ಡೂರು ಬಿಜೆಎಂ ಅಧ್ಯಕ್ಷ ಅಹ್ಮದ್ ಬಾವ ಅಂಗಡಿಮನೆ ಅಧ್ಯಕ್ಷತೆ ವಹಿಸಿದ್ದರು. ಉಪಾಧ್ಯಕ್ಷ ಎ.ಕೆ.ಅಶ್ರಫ್, ಜಂಕ್ಷನ್ ಮಸೀದಿ ಖತೀಬ್ ಜಾಫಿರ್ ಫೈಝಿ, ಅಬ್ದುಲ್ ಖಾದರ್ ನಡುಗುಡ್ಡೆ, ಇಸ್ಹಾಖ್, ಖಾಸಿಂ ಪ್ಯಾರ, ಡಿ.ಎಸ್.ರಫೀಕ್, ಎಂ.ಎಸ್.ಶೇಖಬ್ಬ, ಅಹ್ಮದ್ ಬಾವ ತೋಕೂರು ಮೊದಲಾದವರು ಉಪಸ್ಥಿತರಿದ್ದರು.

ಬಿಜೆಎಂ ಉಪಾಧ್ಯಕ್ಷ ಝೈನುದ್ದೀನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಅಸ್ತಾರ್ ಅಡ್ಡೂರು ಕಾರ್ಯಕ್ರಮ ನಿರೂಪಿಸಿದರು.








share
ವಾರ್ತಾಭಾರತಿ
ವಾರ್ತಾಭಾರತಿ
Next Story
X