ಉಪ್ಪಿನಂಗಡಿ| ಬಸ್ಗೆ ಲಾರಿ ಢಿಕ್ಕಿ: ಹಲವರಿಗೆ ಗಾಯ

ಉಪ್ಪಿನಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಶಾಲಾ ಮಕ್ಕಳ ಸಹಿತ ಬಸ್ಸಿನಲ್ಲಿದ್ದ ಆರು ಮಂದಿ ಗಾಯಗೊಂಡ ಘಟನೆ ಗುರುವಾರ ಬೆಳಗ್ಗೆ ಉಪ್ಪಿನಂಗಡಿ ಬಳಿಯ ರಾಷ್ಟ್ರೀಯ ಹೆದ್ದಾರಿಯ ಅಂಡರ್ಪಾಸ್ ಬಳಿ ಸಂಭವಿಸಿದೆ.
ಸುಬ್ರಹ್ಮಣ್ಯದಿಂದ ಮಂಗಳೂರಿಗೆ ಹೋಗುತ್ತಿದ್ದ ಬಸ್ ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿಯಿಂದ ತಿರುವು ಪಡೆದು ಬಸ್ನಿಲ್ದಾಣಕ್ಕೆಂದು ಅಂಡರ್ಪಾಸ್ನಿಂದ ತುಸು ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಹಾಸನ ಕಡೆಗೆ ಸರ್ವೀಸ್ ರಸ್ತೆ ಮೂಲಕ ಬರುತ್ತಿದ್ದ ಲಾರಿ ಬಸ್ಸಿನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದೆ. ಬಸ್ಸಿನಲ್ಲಿದ್ದ ಕೀರ್ತನ್ (20) , ಅಫ್ತಾರ್ಖಾನ್ (19) , ಫಾತಿಮಾ (19) , ಮುದಾಸ್ಸೀರ್ (20), ಅಜ್ಮಲ್ ಹುಸೇನ್ (19) , ಉನೈಸ್(19) ಎಂಬವರು ಗಾಯಗೊಂಡು ಪುತ್ತೂರಿನ ಆಸ್ಪತ್ರೆಗೆ ದಾಖಲುಗೊಂಡಿದ್ದಾರೆ. ಈ ಪೈಕಿ ಹಳೆನೇರೆಂಕಿ ನಿವಾಸಿ ಕೀರ್ತನ್ರವರು ಗಂಭೀರ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಣ್ಣಪುಟ್ಟ ಗಾಯಗೊಂಡವರು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೊಂಡಿದ್ದಾರೆ. ಈ ಬಗ್ಗೆ ಪುತ್ತೂರು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.