Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜನಗಣತಿ ವೇಳೆ ತುಳುವನ್ನು ಮಾತೃಭಾಷೆಯಾಗಿ...

ಜನಗಣತಿ ವೇಳೆ ತುಳುವನ್ನು ಮಾತೃಭಾಷೆಯಾಗಿ ದಾಖಲಿಸುವ ನಿಟ್ಟಿನಲ್ಲಿ ಚಳವಳಿ ಅಗತ್ಯ: ಡಾ. ಪುರುಷೋತ್ತಮ ಬಿಳಿಮಲೆ

ವಾರ್ತಾಭಾರತಿವಾರ್ತಾಭಾರತಿ15 March 2025 6:27 PM IST
share
ಜನಗಣತಿ ವೇಳೆ ತುಳುವನ್ನು ಮಾತೃಭಾಷೆಯಾಗಿ ದಾಖಲಿಸುವ ನಿಟ್ಟಿನಲ್ಲಿ ಚಳವಳಿ ಅಗತ್ಯ: ಡಾ. ಪುರುಷೋತ್ತಮ ಬಿಳಿಮಲೆ

ಮಂಗಳೂರು,ಮಾ.15: ಪ್ರತಿಯೊಂದು ಭಾಷಾ ಅಕಾಡೆಮಿಗಳಿಗೆ ಅಧ್ಯಕ್ಷರುಗಳಿಗೆ ತಮ್ಮ ಭಾಷೆಗಳನ್ನು ಆಡುವ ಜನಸಂಖ್ಯೆಯ ಬಗ್ಗೆ ಸ್ಪಷ್ಟ ಮಾಹಿತಿ ಇರಬೇಕಾಗಿದೆ. ಈ ನಿಟ್ಟಿನಲ್ಲಿ ಜನಗಣತಿ ವೇಳೆ ಮಾತೃ ಭಾಷೆಯಾಗಿ ತುಳುವನ್ನು ದಾಖಲಿಸುವ ನಿಟ್ಟಿನಲ್ಲಿ ಚಳವಳಿ ಅಗತ್ಯ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಖಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಅಭಿಪ್ರಾಯಪಟ್ಟಿದ್ದಾರೆ.

ನಗರದ ತುಳು ಭವನದಲ್ಲಿ ಶನಿವಾರ ನಡೆದ ಕರ್ನಾಟಕ ತುಳು ಅಕಾಡೆಮಿಯ ಗೌರವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಧಾನ ಭಾಷಣ ಮಾಡಿದರು.

ನಾವು ಜನಗಣತಿಯನ್ನು ಗಂಭೀರವಾಗಿ ಪರಿಗಣಿಸದ ಕಾರಣ ನಮಗೆ ಕೆಲವು ಕಾಣಿಸಿಕೊಳ್ಳುತ್ತದೆ. ಯೋಜನೆ ರೂಪಿಸಲು ಜನಗಣತಿ ಅಗತ್ಯ ಎಂದರು. ಮುಂದಿನ 30 ವರ್ಷಗಳಲ್ಲಿ ಜಗತ್ತಿನಲ್ಲಿ ಶೇ 90ರಷ್ಟು ಭಾಷೆಗಳು ಕಡಿಮೆಯಾಗಿ ಈಗ ಶೇ 6ರಷ್ಟು ಮಂದಿ ಮಾತನಾಡುವ 6 ಭಾಷೆಗಳು ಮಾತ್ರ ಉಳಿಯಬಹುದು ಎಂದು ಆತಂಕ ವ್ಯಕ್ತಪಡಿಸಿದರು.

ಊರಿನ ಹೆಸರುಗಳನ್ನು ಉಳಿಸುವ ಜವಾಬ್ದಾರಿ ನಮ್ಮದಾಗಿದೆ. ದೇಶಕ್ಕೆ ಸ್ವಾತಂತ್ರ್ಯ ದೊರೆತ ಬಳಿಕ ತುಳು ಅಸ್ಮಿತೆಯ ಹುಡುಕಾಟ ನಡೆಸಿರುವ ವಿದ್ವಾಂಸರನ್ನು ತುಳು ಅಕಾಡೆಮಿ ಗುರುತಿಸಿ ಗೌರವಿಸುತ್ತಿ ರುವುದು ಶ್ಲಾಘನೀಯ ಎಂದರು.

ಪ್ರುಸ್ತುತ ಕಾಲಘಟ್ಟದಲ್ಲಿ ತುಳುವಿನ ಅಸ್ಮಿತೆ ಬೆಳೆಯುತ್ತದಾ ? ಅಥವಾ ಪೆಟ್ಟು ಬಿದ್ದಿದಾ ? ಎನ್ನುವ ಬಗ್ಗೆ ಸಂಶೋಧನೆ ನಡೆಬೇಕಾಗಿದೆ ಎಂದರು.

ಡಾ. ಚಿನ್ನಪ್ಪ ಗೌಡ ಅವರಂತಹವರು ತುಳು ನಾಡಿನ ಚರಿತ್ರೆ ಕಟ್ಟಿದವರು ಎಮದು ಬಣ್ಣಿಸಿದರು.

ಪ್ರಶಸ್ತಿ ವ್ಯಕ್ತಿಗೆ ಯೋಗ್ಯತೆಯ ಮಾನದಂಡವಲ್ಲ. ಆದು ಬರುತ್ತದೆ ಹೋಗುತ್ತದೆ. ಆದರೆ ಅವರು ಮಾಡಿರುವ ಕೆಲಸ ಶಾಸ್ವತವಾಗಿ ಉಳಿಯುತ್ತದೆ ಎಂದರು.

ಹಿಂದೆ ಕೇಂದ್ರದಲ್ಲಿ ಅಟಲ್ ಬಿಹಾರಿ ವಾಜೇಪೇಯಿ ಪ್ರಧಾನಿಯಾಗಿದ್ದಾಗ 4 ಭಾಷೆಗಳನ್ನು 8ನೇ ಪರಿಚ್ಚೇದಕ್ಕೆ ಸೇರಿಸಲಾಗಿತ್ತು. ಪಟ್ಟಿಯಲ್ಲಿದ್ದ ತುಳುವಿಗೆ ಈ ಸ್ಥಾನಮಾನ ಕೈ ತಪ್ಪಿತ್ತು. ಈಗ ಸುಮಾರು 99ಭಾಷೆಗಳು 8ನೇ ಪರಿಚ್ಚೇದಕ್ಕೆ ಸೇರ್ಪಡೆಗೊಳಿಸಲು ಉತ್ಸುಕವಾಗಿದೆ. ಇದರಿಂದಾಗಿ ತುಳುವಿಗೆ ಕಠಿಣ ಸವಾಲು ಎದುರಾಗಿದೆ ಎಂದು ಹೇಳಿದರು.

2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ಡಾ. ರಘಪತಿ ಕೆಮ್ತೂರು (ಸಂಶೋಧನೆ ಹಾಗೂ ಸಾಹಿತ್ಯ ),ರತ್ನಮಾಲ ಪುರಂದರ ( ತುಳು ನಾಟಕ ಸಿನಿಮಾ ) , ಪ್ರಭಾಕರ ಶೇರಿಗಾರ ಉಡುಪಿ ( ಜಾನಪದ ಕ್ಷೇತ್ರದ ಪ್ರಶಸ್ತಿ), 2023ನೇ ಸಾಲಿನ ಪ್ರಶಸ್ತಿ ಸಿಮಂತೂರು ಚಂದ್ರಹಾಸ ಸುವರ್ಣ ಮುಂಬೈ(ತುಳು ಸಾಹಿತ್ಯ ಕ್ಷೇತ್ರದ ಪ್ರಶಸ್ತಿ), ನೆಕ್ಕಿದ ಪುಣಿ ಗೋಪಾಲಕೃಷ್ಣ ಬೆಂಗಳೂರು (ತುಳು ನಾಟಕ) , ಲಕ್ಷ್ಮಣ ಕಾಂತ ಕಣಂತೂರು (ಜಾನಪದ), 2024ನೇ ಸಾಲಿನ ಸಾಹಿತ್ಯ ಕ್ಷೇತ್ರದ ಪ್ರಶಸ್ತಿ ಯಶವಂತ ಬೋಳೂರು ( ತುಳು ಸಾಹಿತ್ಯ), ಸರೋಜಿನಿ ಎಸ್. ಶೆಟ್ಟಿ(ತುಳು ನಾಟಕ, ಸಿನಿಮಾ ), ಬೆಳ್ತಂಗಡಿಯ ಬಿ.ಕೆ. ದೇವರಾವ್ (ಕೃಷಿ ಜನಪದ ), ಪುಸ್ತಕ ಪ್ರಶಸ್ತಿ ಪುರಸ್ಕೃತರಾದ ರಾಜೇಶ್ ಶೆಟ್ಟಿ ದೋಟ, ರಾಜಶ್ರೀ ಟಿ ರೈ ಪೆರ್ಲ, ರಘ ಇಡ್ಕಿದು, ಕುಶಾಲಾಕ್ಷಿ ವಿ ಕುಲಾಲ್ , ದತ್ತಿನಿಧಿ ಪುಸ್ತಕ ಪ್ರಶಸ್ತಿ ಪುರಸ್ಕೃತರಾದ ಡಾ.ಕಬ್ಬಿನಾಲೆ ವಸಂತ ಭಾರದ್ವಾಜ್, ಯಶೋದ ಮೋಹನ್, ಡಾ.ಚಿನ್ನಪ್ಪ ಗೌಡ, ಡಾ.ವಿ.ಕೆ.ಯಾದವ್ ಮತ್ತು ರಘನಾಥ ವರ್ಕಾಡಿ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಮೂಡಬಿದ್ರೆ ಶಾಸಕ ಉಮನಾಥ ಎ ಕೋಟ್ಯಾನ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ತಾರಾನಾಥ ಗಟ್ಟಿ ಕಾಪಿಕಾಡ್ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಶುಭ ಹಾರೈಸಿದರು.

ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಡಿಎಸ್ ಗಟ್ಟಿ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಉಮರ್ ಯು ಎಚ್, ತುಳು ಸಂಶೋಧಕಿ ಡಾ. ಇಂದಿರಾ ಹೆಗ್ಡೆ, ರಿಜಿಸ್ಟ್ರಾರ್ ಪೂರ್ಣಿಮಾ , ಡಾ.ಅಮರಶ್ರೀ ಅಮರನಾಥ ಶೆಟ್ಟಿ ಉಪಸ್ಥಿತರಿದ್ದರು.

ಸದಸ್ಯ ಸಂಚಾಲಕರಾದ ಉದ್ಯಾವರ ನಾಗೇಶ್ ಕುಮಾರ್ ಸ್ವಾಗತಿಸಿದರು. ಕುಂಬ್ರ ದುರ್ಗಾಪ್ರಸಾದ್ ರೈ, ಅಕ್ಷಯ ಆರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X