Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರೈಲ್ವೆ ಪ್ರವಾಸೋದ್ಯಮ ನಿಗಮದಿಂದ ಕೊರಿಯಾ,...

ರೈಲ್ವೆ ಪ್ರವಾಸೋದ್ಯಮ ನಿಗಮದಿಂದ ಕೊರಿಯಾ, ಶ್ರೀಲಂಕಾ, ಅಯೋಧ್ಯೆ, ಕಾಶ್ಮೀರ ಸಹಿತ ವಿವಿಧ ಪ್ರವಾಸ ಪ್ಯಾಕೇಜ್

ವಾರ್ತಾಭಾರತಿವಾರ್ತಾಭಾರತಿ8 April 2025 6:27 PM IST
share
ರೈಲ್ವೆ ಪ್ರವಾಸೋದ್ಯಮ ನಿಗಮದಿಂದ ಕೊರಿಯಾ, ಶ್ರೀಲಂಕಾ, ಅಯೋಧ್ಯೆ, ಕಾಶ್ಮೀರ ಸಹಿತ ವಿವಿಧ ಪ್ರವಾಸ ಪ್ಯಾಕೇಜ್

ಮಂಗಳೂರು, ಎ.8: ಇಂಡಿಯನ್ ರೈಲ್ವೆ ಕ್ಯಾಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಷನ್ (ಐಆರ್‌ಸಿಟಿಸಿ) ಇದೀಗ ರೈಲ್ವೆ ಟಿಕೆಟ್ ಬುಕ್ಕಿಂಗ್ ವ್ಯವಸ್ಥೆ ಜತೆಗೆ ದೇಶ ವಿದೇಶಗಳ ವಿವಿಧೆಡೆಗೆ ಪ್ರವಾಸ ಪ್ಯಾಕೇಜ್ ಕೂಡಾ ಒದಗಿಸುತ್ತಿದೆ.

ಇದೀಗ ಐಆರ್‌ಸಿಟಿಸಿಯಿಂದ ದಕ್ಷಿಣ ಕೊರಿಯಾ, ಯುರೋಪ್, ನೇಪಾಳ, ಶ್ರೀಲಂಕಾ, ಊಟಿ, ಅಯೋಧ್ಯೆ, ಕಾಶ್ಮೀರ ಮುಂತಾದ ದೇಶ- ವಿದೇಶಗಳ ವಿಶೇಷ ಆಕರ್ಷಣೆಯ ಪ್ರವಾಸಿ ಸ್ಥಳಗಳಿಗೆ ಪ್ರವಾಸ ಪ್ಯಾಕೇಜ್ ವ್ಯವಸ್ಥೆ ಮಾಡಲಾಗಿದ್ದು, ದೇಶೀಯ ಮತ್ತು ಅಂತಾರಾಷ್ಟ್ರೀಯ ಪ್ರವಾಸೋದ್ಯಮವನ್ನು ಉತ್ತೇಜಿಸಲು ಐಆರ್‌ಸಿಟಿಸಿ ಯನ್ನು ಭಾರತೀಯ ರೈಲ್ವೆಯ ವಿಸ್ತೃತ ಅಂಗವಾಗಿ ಸ್ಥಾಪಿಸಲಾಗಿದೆ ಎಂದು

ಐಆರ್‌ಸಿಟಿಸಿ ಜಂಟಿ ಮಹಾ ಪ್ರಬಂಧಕ (ಪ್ರವಾಸೋದ್ಯಮ) ಸ್ಯಾಮ್ ಜೋಸೆಫ್ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಯೋಜನೆ ಕುರಿತು ಮಾಹಿತಿ ನೀಡಿದರು.

ಪ್ರವಾಸಿಗರನ್ನು ಆಕರ್ಷಿಸಲು ಮಂಗಳೂರು ಕೇಂದ್ರ ರೈಲ್ವೆ ನಿಲ್ದಾಣದಲ್ಲಿ ಐಆರ್‌ಸಿಟಿಸಿ ಪ್ರವಾಸೋದ್ಯಮ ಮಾಹಿತಿ ಮತ್ತು ಸೌಲಭ್ಯ ಕೇಂದ್ರ ಪ್ರಾರಂಭಿಸಲಾಗಿದೆ. ಈ ಕೇಂದ್ರವು ವಿವಿಧ ಐಆರ್‌ಸಿಟಿಸಿ ಪ್ರಯಾಣ ಪ್ಯಾಕೇಜ್‌ಗಳ ವಿವರ ಒದಗಿಸುತ್ತದೆ ಮತ್ತು ಪ್ರವಾಸ ಬುಕ್ಕಿಂಗ್ ನಡೆಸುವವರಿಗೆ ನೆರವಾಗುತ್ತದೆ.

ಮಂಗಳೂರಿನಿಂದ ವಾರಣಾಸಿ, ಅಯೋಧ್ಯೆ, ಪ್ರಯಾಗ್ ರಾಜ್ ಏರ್ ಟೂರ್ ಪ್ಯಾಕೇಜ್ ಇದೆ. ಅಯೋಧ್ಯೆ ದರ್ಶನದೊಂದಿಗೆ ವಾರಣಾಸಿ ಎಂಬ ವಿಶೇಷ ವಿಮಾನ ಪ್ಯಾಕೇಜ್ ಅನ್ನು ನೀಡುತ್ತಿದೆ. ಈ ವಿಶೇಷ ಪ್ರವಾಸವು ಮಂಗಳೂರು ವಿಮಾನ ನಿಲ್ದಾಣದಿಂದ ಮೇ 16 ರಂದು ಹೊರಡಲಿದೆ. ತೀರ್ಥಯಾತ್ರೆಯು ಭಾರತದ ಅತ್ಯಂತ ಪವಿತ್ರ ನಗರವಾದ ವಾರಣಾಸಿಯಲ್ಲಿ ಪ್ರಾರಂಭವಾಗುತ್ತದೆ. ಈ ಪ್ರಯಾಣವು ಗಂಗಾ, ಯಮುನಾ ಮತ್ತು ಸರಸ್ವತಿ ನದಿಗಳು ಸಂಗಮವಾಗುವ ಪವಿತ್ರ ತ್ರಿವೇಣಿ ಸಂಗಮದ ನೆಲೆಯಾದ ಪ್ರಯಾಗ್‌ರಾಜ್‌ಗೆ ಮುಂದುವರಿಯುತ್ತದೆ. ಈ ಪ್ರವಾಸವು ಭಗವಾನ್ ಶ್ರೀ ರಾಮನ ಜನ್ಮಸ್ಥಳವೆಂದು ಪೂಜಿಸಲ್ಪಡುವ ಸರಯೂ ನದಿಯ ದಡದಲ್ಲಿರುವ ಪ್ರಾಚೀನ ನಗರವಾದ ಅಯೋಧ್ಯೆಗೆ ಭೇಟಿ ನೀಡುವುದನ್ನೂ ಒಳಗೊಂಡಿದೆ. ಈ ಪ್ಯಾಕೇಜ್ ಪ್ರತಿ ವ್ಯಕ್ತಿಗೆ 36,700 ರೂ. ಆಗಿರುತ್ತದೆ.

ವಿಶೇಷ 6 ದಿನಗಳ ವಿಮಾನ ಪ್ರಯಾಣದೊಂದಿಗೆ ಭೂಮಿಯ ಮೇಲಿನ ಸ್ವರ್ಗ ಎಂದು ಕರೆಯಲಾಗುವ ಕಾಶ್ಮೀರದ ಉಸಿರುಗಟ್ಟಿಸುವ ಸೌಂದರ್ಯವನ್ನು ಅನುಭವಿಸಿ ಎಂದು ಐಆರ್‌ಸಿಟಿಸಿ ಆಹ್ವಾನ ನೀಡುತ್ತದೆ. ಈ ಪ್ರವಾಸವು ಆ. 25 ರಂದು ಆರಂಭಗೊಳ್ಳಲಿದೆ. ಪ್ರಯಾಣ ವೆಚ್ಚ ಪ್ರತಿ ವ್ಯಕ್ತಿಗೆ 51,700 ರೂ. ರಿಂದ ಪ್ರಾರಂಭವಾಗುತ್ತವೆ.

ಪ್ರಸ್ತಾವಿತ ದೇಶೀಯ ವಿಮಾನ ಪ್ಯಾಕೇಜ್‌ಗಳಲ್ಲಿ ರೌಂಡ್-ಟ್ರಿಪ್ ವಿಮಾನ ದರ, ಸ್ಥಳೀಯ ಸಾರಿಗೆ, ಊಟದೊಂದಿಗೆ ಹೋಟೆಲ್ ವಸತಿ, ಪ್ರವಾಸ ಸಂಯೋಜಕರ ಸೇವೆ ಮತ್ತು ಪ್ರಯಾಣ ವಿಮೆ ಸೇರಿವೆ.

ಪ್ರತಿ ಗುರುವಾರ ಮಂಗಳೂರಿನಿಂದ ಹೊರಡುವ ಊಟಿಗೆ ಐಆರ್‌ಸಿಟಿಸಿ 5 ದಿನಗಳ ರೈಲು ಪ್ರವಾಸ ಪ್ಯಾಕೇಜ್ ಅನ್ನು ನೀಡುತ್ತಿದೆ. ಈ ಪ್ರವಾಸವು ಪ್ರಯಾಣಿಕರಿಗೆ ಊಟಿ ಮತ್ತು ಸುತ್ತಮುತ್ತಲಿನ ಪ್ರಮುಖ ಪ್ರವಾಸಿ ಆಕರ್ಷಣೆಗಳನ್ನು ಅನ್ವೇಷಿಸುವ ಅವಕಾಶವನ್ನು ಒದಗಿಸುತ್ತದೆ. ಈ ಪ್ಯಾಕೇಜ್ ರೌಂಡ್ ಟ್ರಿಪ್ ರೈಲು ಟಿಕೆಟ್, ಸ್ಥಳೀಯ ಸಾರಿಗೆ, ಹೋಟೆಲ್ ವಸತಿ ಮತ್ತು ಪ್ರಯಾಣ ವಿಮೆ ಒಳಗೊಂಡಿದೆ. ಬೆಲೆ ಪ್ರತಿ ವ್ಯಕ್ತಿಗೆ 8,545 ರೂ.ನಿಂದ ಪ್ರಾರಂಭವಾಗುತ್ತದೆ.

ಅಂತಾರಾಷ್ಟ್ರೀಯ ಪ್ಯಾಕೇಜು

ಬೆಂಗಳೂರುನಿಂದ ಮೇ 3 ರಂದು ಎಂಟು ದಿನಗಳ ದಕ್ಷಿಣ ಕೊರಿಯಾ ಪ್ರವಾಸ ಆರಂಭಗೊಳ್ಳಲಿದೆ. ಪ್ರತೀ ವ್ಯಕ್ತಿಗೆ 2,19,000 ವೆಚ್ಚ ಬೀಳಲಿದೆ. ಬೆಂಗಳೂರುನಿಂದ ಮೇ 19 ರಂದು ಹೊರಡುವ 13 ದಿನ ಗಳ ಯುರೋಪ್ ಪ್ರವಾಸ ಪ್ಯಾಕೇಜ್ ಪ್ರಕಟಿಸಲಾಗಿದೆ. ಪ್ರತೀ ವ್ಯಕ್ತಿಗೆ ನಿದಿಪಡಿಸಿದ ದರ 3,78,500 ರಿಂದ ಪ್ರಾರಂಭವಾಗುತ್ತದೆ.

ಕೇರಳ ರಾಜ್ಯದ ಕೊಚ್ಚಿಯಿಂದ ಮೇ 22 ರಂದು ಹೊರಡುವ 6 ದಿನಗಳ ನೆಪಾಳ ಏರ್ ಟೂರ್ ಪ್ಯಾಕೇಜ್ ಪ್ರತಿಯೊಬ್ಬ ವ್ಯಕ್ತಿಗೆ 60,500 ರೂ. ವಿನಿಂದ ಆರಂಭವಾಗುತ್ತದೆ. ಕೊಚ್ಚಿಯಿಂದ ಮೇ 27 ರಂದು ಹೊರ ಡುವ 7 ದಿನಗಳ ಶ್ರೀಲಂಕಾ ಏರ್ ಟೂರ್ ಪ್ಯಾಕೇಜ್‌ನಲ್ಲಿ ಪ್ರತಿಯೊಬ್ಬ ವ್ಯಕ್ತಿಗೆ 61,900 ರೂ ನಿಗದಿಪಡಿಸಲಾಗಿದೆ.

ರಜೆಯ ಪ್ರಯಾಣ ರಿಯಾಯಿತಿ (ಎಲ್ಟಿಸಿ) ಸೌಲಭ್ಯವು ಕೇಂದ್ರ ಮತ್ತು ರಾಜ್ಯ ಸರ್ಕಾರಿ ಕಚೇರಿಗಳ ಉದ್ಯೋಗಿಗಳಿಗೆ ಮತ್ತು ಸಾರ್ವಜನಿಕ ವಲಯದ ಸಂಸ್ಥೆಗಳಿಗೆ ಎಲ್ಲಾ ದೇಶೀಯ ಪ್ರವಾಸ ಪ್ಯಾಕೇಜ್‌ಗಳಿಗೆ ಲಭ್ಯವಿದೆ.

ಹೆಚ್ಚಿನ ಮಾಹಿತಿಗೆ ಐಆರ್‌ಸಿಟಿಸಿ ಜಾಲತಾಣ www.irctctourism.com ಅಥವಾ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ- 8287932064 / 8287932042 ಸಂಪರ್ಕಿಸುವಂತೆ ಸೂಚಿಸಲಾಗಿದೆ.

ಸುದ್ದಿಗೋಷ್ಠಿಯಲ್ಲಿ ನಿಗಮದ ಸೀನಿಯರ್ ಎಕ್ಸಿಕ್ಯೂಟಿವ್ ವಿನೋದ್ ನಾಯರ್, ಮಂಗಳೂರು ಸೆಂಟ್ರಲ್ ನಿಲ್ದಾಣದ ರಾಜನ್ ನಂಬಿಯಾರ್, ಮೈಸೂರು ರೈಲ್ವೆ ನಿಲ್ದಾಣದ ಇಮ್ರಾನ್ ಅಹ್ಮದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X