Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಇಬ್ಬರನ್ನು ಚೂರಿಯಿಂದ ಇರಿದು ಕೊಲೆಗೈದ...

ಇಬ್ಬರನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣ: ಮೂವರಿಗೆ ಶಿಕ್ಷೆ

ವಾರ್ತಾಭಾರತಿವಾರ್ತಾಭಾರತಿ8 April 2025 10:46 PM IST
share
ಇಬ್ಬರನ್ನು ಚೂರಿಯಿಂದ ಇರಿದು ಕೊಲೆಗೈದ ಪ್ರಕರಣ: ಮೂವರಿಗೆ ಶಿಕ್ಷೆ

ಮಂಗಳೂರು, ಎ.8: ವಿದೇಶದಿಂದ ಅಕ್ರಮವಾಗಿ ಸಾಗಾಟ ಮಾಡಿದ ಚಿನ್ನದ ಗಟ್ಟಿ ಮಾರಾಟದಲ್ಲಿ ತಕರಾರು ನಡೆದು ಇಬ್ಬರನ್ನು ಉಪಾಯದಿಂದ ಕರೆಸಿ ಮಲಗಿದಲ್ಲಿಗೆ ಚೂರಿಯಿಂದ ಇರಿದು ಕೊಲೆಗೈದ ಪ್ರಕರಣದಲ್ಲಿ ಮೂವರ ವಿರುದ್ಧದ ಆರೋಪ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಸಾಬೀತಾಗಿದ್ದು, ಬುಧವಾರ ಶಿಕ್ಷೆಯ ಪ್ರಮಾಣ ಪ್ರಕಟವಾಗಲಿದೆ.

ಕಾಸರಗೋಡು ತಾಲೂಕು ಚೆರ್ಕಳ ಮುಹಮ್ಮದ್ ಮುಹಜೀರ್ ಸನಾಫ್ (34), ಕಾಸರಗೋಡು ಆಣಂಗೂರು ಟಿ.ವಿ.ಸ್ಟೇಷನ್ ರಸ್ತೆ ನಿವಾಸಿ ಎ.ಮುಹಮ್ಮದ್ ಇರ್ಷಾದ್ (35), ಎ.ಮುಹಮ್ಮದ್ ಸಫ್ವಾನ್ (35) ಶಿಕ್ಷೆಗೊಳಗಾದ ಅಪರಾಧಿಗಳು. ನಾಫೀರ್ ಹಾಗೂ ಪಹೀಮ್ ಕೊಲೆಯಾದವರು.

* ಪ್ರಕರಣದ ಹಿನ್ನೆಲೆ: ಮೃತ ನಾಫೀರ್ ವಿದೇಶದಿಂದ ಚಿನ್ನದ ಗಟ್ಟಿಗಳನ್ನು ತಂದಿದ್ದು, ಫಹೀಮ್ ಆತನ ಸ್ನೇಹಿತನಾಗಿದ್ದ. ಅಪರಾಧಿಗಳು ಮೃತ ನಾಫೀರ್ ನಲ್ಲಿದ್ದ ಚಿನ್ನವನ್ನು ಮಾರಾಟ ಮಾಡಿ ಬಂದ ಹಣದಲ್ಲಿ ನಾಫೀರ್ ಮತ್ತು ಪಹೀಮ್ ತಕರಾರು ಮಾಡಿದರೆಂಬ ದ್ವೇಷದಿಂದ ಕೊಲೆ ಮಾಡುವ ಸಂಚು ರೂಪಿಸಿ ದ್ದರು. 2014 ಮೇ 15ರಂದು ಕಾಸರಗೋಡು ಬೇಡಡ್ಕ ಗ್ರಾಮದಲ್ಲಿ 10 ಸೆಂಟ್ಸ್ ಜಾಗವನ್ನು ಚಿನ್ನ ಮಾರಾಟ ಮಾಡಿ ಬಂದ ಹಣದಿಂದ ಖರೀದಿಸಿ, ಅಪರಾಧಿ ಸಫ್ವಾನ್ ಹೆಸರಿಗೆ ನೋಂದಣಿ ಮಾಡಿಸಿದ್ದರು. ಆ ಜಾಗದಲ್ಲಿ ನಾಫೀರ್ ಮತ್ತು ಫಹೀಮ್ ಅವರನ್ನು ಕೊಲೆ ಮಾಡಿದ ಬಳಿಕ ಅವರಿಬ್ಬರ ಹೆಣಗಳನ್ನು ಮಣ್ಣಿನಡಿ ಹಾಕಲು ಹೊಂಡಗಳನ್ನು ತೋಡಿ ಸಂಚು ರೂಪಿಸಿದ್ದರು.

ಅಪರಾಧಿಗಳು 2014 ಮೇ 15ರಂದು ಅತ್ತಾವರದಲ್ಲಿ ಬಾಡಿಗೆ ಮನೆ ಮಾಡಿದ್ದರು. ಮರುದಿನ ನಾಫೀರ್ ಮತ್ತು ಫಹೀಮ್ ಅವರನ್ನು ಕಾರಿನಲ್ಲಿ ಅತ್ತಾವರದಲ್ಲಿದ್ದ ಬಾಡಿಗೆ ಮನೆಗೆ ಕರೆದುಕೊಂಡು ಹೋಗಿ ಒಡನಾಡಿಗಳಂತೆ ನಡೆದುಕೊಂಡು ವಾಸವಿದ್ದರು. ಅವರನ್ನು ಕೊಲೆ ಮಾಡಲು ಚೂರಿ ಖರೀದಿಸಿದ್ದರು. 2014 ಜು.1ರಂದು ಬೆಳಗ್ಗೆ ಕೊಠಡಿಯಲ್ಲಿ ಗಾಢ ನಿದ್ರೆಯಲ್ಲಿದ್ದ ಫಹೀಮ್ ಮತ್ತು ನಫೀರ್ ಅವರನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದರು. ಬಳಿಕ ಇಬ್ಬರ ಮೃತದೇಹಗಳನ್ನು ಕಾರಿನಲ್ಲಿ ಸಾಗಿಸಿ ಮೊದಲೇ ಜಾಗ ಖರೀದಿಸಿ ಹೊಂಡ ತೋಡಿ ಸಿದ್ದಪಡಿಸಿದ್ದ ಸ್ಥಳದಲ್ಲಿ ಹೂತು ಹಾಕಿ ಸಾಕ್ಷ ನಾಶ ಮಾಡಲು ಯತ್ನಿಸಿದ್ದರು. ನಫೀರ್ ಮತ್ತು ಫಹೀಮ್ ಮಲಗಿದ್ದ ಕೋಣೆಗಳನ್ನು ಸ್ವಚ್ಛಗೊಳಿಸಿ, ರಕ್ತ ಸಿಕ್ತ ಹಾಸಿಗೆ, ಬಟ್ಟೆಗಳನ್ನು ಕಾರಿನಲ್ಲಿ ತುಂಬಿಸಿ ಕಾಸರಗೋಡು ಚಂದ್ರಗಿರಿ ನದಿಗೆ ಹಾಕಿ ಸಾಕ್ಷ ನಾಶ ಮಾಡಿದ್ದರು. ಜು.6ರಂದು ಉಳಿದ ಬಟ್ಟೆಗಳನ್ನು ಕಪ್ಪು ಬಣ್ಣದ ಗಾರ್ಬೇಜ್ ಚೀಲದಲ್ಲಿ ತುಂಬಿಸಿ ಕಾರಿನಲ್ಲಿ ಕೊಂಡೊ ಯ್ಯುತ್ತಿದ್ದಾಗ ಆಗಿನ ಇನ್‌ಸ್ಪೆಕ್ಟರ್ ವೆಲೆಂಟೈನ್ ಡಿಸೋಜ ಅವರಿಗೆ ಮಹಾಕಾಳಿ ಪಡ್ಪು ಬಳಿ ಸಿಕ್ಕಿ ಬಿದ್ದಿದ್ದರು. ಬಳಿಕ ದಕ್ಷಿಣ ಠಾಣೆಯ ಠಾಣಾಧಿಕಾರಿಯಾಗಿದ್ದ ದಿನಕರ್ ಶೆಟ್ಟಿ ಅವರ ಎದುರು ಹಾಜರುಪಡಿಸಿದ್ದರು. ಶವ ಹೂತ ಸ್ಥಳವಾದ ಕಾಸರಗೋಡಿನ ಬೇಡಡ್ಕ ಗ್ರಾಮದ ಶಂಕರಂಕಾಡು ಎಂಬಲ್ಲಿಗೆ ಅಪರಾಧಿಗಳೊಂದಿಗೆ ತೆರಳಿ ಕಾಸರಗೋಡು ತಹಶೀಲ್ದಾರರ ಸಮಕ್ಷಮ ಶವವನ್ನು ಹೂತ ಸ್ಥಳದಿಂದ ತೆಗೆದು ಶವಪರೀಕ್ಷೆ ನಡೆಸಿ ನಫೀರ್‌ನಿಗೆ ಸಂಬಂಧಪಟ್ಟ ಚಿನ್ನದ ಗಟ್ಟಿಗಳನ್ನು ಮಾರಾಟ ಮಾಡಿದ್ದ ವ್ಯಾಪಾರಿಯಿಂದ ಸುಮಾರು 2.500 ಕಿ.ಗ್ರಾಂ ಮತ್ತು ಅಪರಾಧಿಯ ಮನೆಯಿಂದ 200 ಗ್ರಾಂ ಚಿನ್ನದ ಗಟ್ಟಿಗಳನ್ನು ವಶಪಡಿಸಿಕೊಂಡು ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯ ಫೋರೆನ್ಸಿಕ್ ವಿಭಾಗದ ವೈದ್ಯ ಡಾ.ಮಹಾಬಲ ಶೆಟ್ಟಿ ಅವರು ಶವ ಹೂತ ಸ್ಥಳಕ್ಕೆ ತಂಡದೊಂದಿಗೆ ತೆರಳಿ ಶವಪರೀಕ್ಷೆ ನಡೆಸಿ ವರದಿ ನೀಡಿದ್ದರು.

ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ಕೈಗೆತ್ತಿಕೊಂಡು 47 ಸಾಕ್ಷಿದಾರರನ್ನು ವಿಚಾರಣೆಗೊಳಪಡಿಸಿ ಒಟ್ಟು 97 ದಾಖಲೆಗಳನ್ನು ಗುರುತಿಸಲಾಗಿದೆ.

ನ್ಯಾಯಾಧೀಶರಾದ ಮಲ್ಲಿಕಾರ್ಜುನ ಸ್ವಾಮಿ ಎಚ್.ಎಸ್. ಅವರು ತೀರ್ಪು ಪ್ರಕಟಿಸಿದ್ದಾರೆ. ಸರ್ಕಾರದ ಪರ ನಿವೃತ್ತ ಸರ್ಕಾರಿ ಅಭಿಯೋಜಕ ರಾಜು ಪೂಜಾರಿ 14 ಸಾಕ್ಷಿದಾರರ ವಿಚಾರಣೆ ಮಾಡಿದ್ದು, ಸರ್ಕಾರಿ ಅಭಿಯೋಜಕರಾದ ಜುಡಿತ್ ಓಲ್ಗಾ ಮಾರ್ಗರೇಟ್ ಕ್ರಾಸ್ತಾ ಅವರು ಉಳಿದ ಸಾಕ್ಷಿ ವಿಚಾರಣೆ ನಡೆಸಿ, ಸರಕಾರದ ಪರ ವಾದ ನಡೆಸಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X