Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಸುರತ್ಕಲ್: ಕುಡಿಯುವ ನೀರಿನ ಸಮಸ್ಯೆ...

ಸುರತ್ಕಲ್: ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ22 April 2025 11:28 PM IST
share
ಸುರತ್ಕಲ್: ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಒತ್ತಾಯ

ಸುರತ್ಕಲ್‌: ಇಲ್ಲಿನ ಮಧ್ಯ ಗಿರಿಜನ ಕಾಲನಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಮನಪಾ 2ತಿಂಗಳ ಹಿಂದೆ ಬೋರ್‌ ವೆಲ್‌ ಕೊರೆಸಿದ್ದರೂ ವಿದ್ಯುತ್‌ ಸಂಪರ್ಕ ಕಲ್ಪಿಸದೇ ಗಿರಿಜನರನ್ನು ನಿರ್ಲಕ್ಷಿಸು‌ ತ್ತಿದೆ ಎಂದು ಗ್ರಾಮದ ಗಿರಿಜನರು ದೂರಿದ್ದಾರೆ.

ಕುಡಿಯಲು ನೀರು ನೀಡುವಂತೆ ಆಗ್ರಹಿಸಿ ಗಿರಿಜನರು ಮಂಗಳೂರು ಮನಪಾದ ಆಯುಕ್ತರ ಕಚೇರಿಗೆ ಭೇಟಿ ನೀಡಿ ಪ್ರತಿಭಟನೆ ಮಾಡಿದ್ದೆವು. ಲೋಕಾಯುಕ್ತಕ್ಕೆ ದೂರು ನೀಡಿದ್ದೆವು, ಆದರೂ ಈ ವರೆಗೂ ಯಾವುದೇ ಪ್ರಯೋಜನೆವಾಗಿಲ್ಲ. ಈಗಲೂ 3ದಿನಗಳಿಗೆ ಒಂದು ಬಾರಿ ನೀರು ಬರುತ್ತಿದೆ ಎಂದು ಮನಪಾಕ್ಕೆ ಹಲವು ಬಾರಿ ದೂರು ನೀಡಲಾಗಿತ್ತು. ಹಾಗಾಗಿ ಕಾಲನಿ ನಿವಾಸಿಗಳ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಬಾವಿ ತೋಡಲಾಗಿತ್ತು. ಆದರೆ, ಬಾವಿಯ ಪಕ್ಕದಲ್ಲೇ ಚರಂಡಿ ಇರುವುದರಿಂದ ಅದರ ನೀರು ಬಾವಿಗೆ ಸೇರಿ ಕುಡಿಯಲು ಅಯೋಗ್ಯವಾಗಿದೆ. ಈ ಹಿನ್ನೆಯಲ್ಲಿ ಕಾಲನಿ ನಿವಾಸಿಗಳು ವಾರ್ತಾಭಾರತಿಗೆ ದೂರು ನೀಡಿದ್ದರು. ಅದರಂತೆ ಪತ್ರಿಕೆ ಮಧ್ಯಕೊರಗ ಸಮದಾಯಕ್ಕೆ ನೀರಿನ ಸಮಸ್ಯೆಯ ಕುರಿತು ವಿಸ್ತೃತ ವರದಿಯನ್ನು ಪ್ರಕಟಿಸಿತ್ತು.

ವರದಿಗೆ ಎಚ್ಚೆತ್ತುಕೊಂಡ ಸ್ಥಳೀಯ ಕಾರ್ಪೊರೇಟರ್‌ ಮತ್ತು ಮನಪಾ ವಲಯ1 ಸುರತ್ಕಲ್‌ ನ ಅಧಿಕಾರಿಗಳು ಗಿರಿಜನ ಕಾಲನಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪರಿಹಾರ ಕಲ್ಪಿಸುವ ಭರವಸೆ ನೀಡಿ ದ್ದರು. ಅದರಂತೆ ಕಳೆದ ಎರಡು ತಿಳಗಳ ಹಿಂದೆ ಹೊಸದಾಗಿ ಬೋರ್‌ ವೆಲ್‌ ಕೊರೆಸಲಾಗಿತ್ತು. ಆದರೆ ಅದಕ್ಕೆ ಇನ್ನೂ ಮೋಟರ್‌ ಸಿಕ್ಕಿಸುವುದಾಗಲೀ, ವಿದ್ಯುತ್‌ ಸಂಪರ್ಕ ಕಲ್ಪುಸುವುದಾಗಲೀ ಮನಪಾ ಮಾಡಿಲ್ಲ ಎಂದು ಕಾಲನಿ ಜನರು ದೂರಿದ್ದಾರೆ.

ಮನಪಾ ಅಧಿಕಾರಿಗಳಿಗೆ ಗಿರಿಜನರು ಎಂದರೆ ಇಷ್ಟೊಂದು ತಾತ್ಸಾರ ಭಾವನೆ ಏಕೆ ಎಂದು ಪ್ರಶ್ನೆ ಮಾಡುತ್ತಿರುವ ಗಿರಿಜನ ಕಾಲನಿ ನಿವಾಸಿಗಳು, ಕೊರೆಸಲಾಗಿರುವ ಬೋರ್‌ ವೆಲ್‌ ಗೆ ವಿದ್ಯುತ್‌ ಸಂಪರ್ಕ ಕಲ್ಪಿಸಿ, ಮೋಟಾರು ಹಾಕಿ ಕುಡಿಯುವ ನೀರು ನೀಡಲು ಮನಪಾ ಅಧಿಕಾರಿಗಳು ಮಂದಾಗಬೇಕು. ಇಲ್ಲವಾದಲ್ಲಿ ನಿವಾಸಿಗಳೆಲ್ಲಾ ಖಾಲಿಕೊಡಗಳೊಂದಿಗೆ ಮನಪಾ ಸುರತ್ಕಲ್‌ ವಲಯ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ.

"ಗಿರಿಜನ ಕಾಲನಿಯಲ್ಲಿ ಬೋರ್‌ ವೆಲ್‌ ಕೊರೆಸಿರುವ ಸಂಬಂಧ ಮಹಾನಗರ ಪಾಲಿಕೆಯಿಂದ ಎಲ್ಲಾ ಕೆಲಸಗಳನ್ನು ಪೂರ್ಣ ಮಾಡಿ ದಾಖಲೆ ಪತ್ರಗಳನ್ನು ಮೆಸ್ಕಾಂಗೆ ರವಾನಿಸಲಾಗಿದೆ. ಸದ್ಯ ಅದರ ಸ್ಥಿತಿಗತಿ ತಿಳಿದಿಲ್ಲ. ನಾಳೆಯೇ ಮೆಸ್ಕಾಂ ಅಧಿಖಾರಿಗಳನ್ನು ಸಂಪರ್ಕಿಸಿ ವಿದ್ಯುತ್‌ ಸಂಪರ್ಕ ಕಲ್ಪಿಸಲು ಸೂಚನೆ ನೀಡಲಾಗುವುದು".

- ಕಾರ್ತಿಕ್‌ ಶೆಟ್ಟಿ, ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ ಮನಪಾ ಸುರತ್ಕಲ್‌ ವಲಯ

"ಕುಡಿಯುವ ನೀರಿಲ್ಲದೆ ತುಂಬಾ ಸಮಸ್ಯೆಯಾಗುತ್ತಿದೆ. ಮೂರುದಿನಕ್ದಿಕೊಂದು ಬಾರಿ ಒಂದು ಗಂಟೆ ನೀರು ಬಿಡುತ್ತಾರೆ. ಕಾಲನಿಯಲ್ಲಿ 32 ಮನೆಗಳಿಗಳಿದ್ದು, ಪ್ರತೀ ಮನೆಗೆ 8-9 ಕೊಡ ನೀರು ಸಿಗುತ್ತದೆ. ಸದ್ಯ ಖಾಸಗಿಯವರ ಬಾವಿಯಿಂದ ನೀರು ಸೇದಿ ತರಬೇಕಿದೆ. ಬೋರ್‌ ವೆಲ್‌ ಗೆ ವಿದ್ಯುತ್‌ ಸಂಪರ್ಕ ಕಲ್ಪಿಸುವ ವರೆಗಾದರೂ ಪ್ರತೀದಿನ ಒಂದು ಗಂಟೆಯಾದರೂ ನೀರು ಬಿಟ್ಟರೆ ಉತ್ತಮ".

- ಜಯಾ, ಕಾಲನಿ ನಿವಾಸಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X