Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಯೆನೆಪೋಯ ವೈದ್ಯಕೀಯ ಕಾಲೇಜು...

ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ‘ವರ್ಟಿಗೋ ಮತ್ತು ಬ್ಯಾಲೆನ್ಸ್ ಕ್ಲಿನಿಕ್’ ಉದ್ಘಾಟನೆ

ವಾರ್ತಾಭಾರತಿವಾರ್ತಾಭಾರತಿ25 April 2025 5:27 PM IST
share
ಯೆನೆಪೋಯ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ‘ವರ್ಟಿಗೋ ಮತ್ತು ಬ್ಯಾಲೆನ್ಸ್ ಕ್ಲಿನಿಕ್’ ಉದ್ಘಾಟನೆ

ಮಂಗಳೂರು: ಯೆನೆಪೋಯ ವೈದ್ಯಕೀಯ ಮಹಾವಿದ್ಯಾಲಯದ ಆಸ್ಪತ್ರೆಯ ಕಿವಿ, ಮೂಗು, ಗಂಟಲು ವಿಭಾಗವು ತನ್ನ ಅತ್ಯಾಧುನಿಕ ವರ್ಟಿಗೋ ಮತ್ತು ಬ್ಯಾಲೆನ್ಸ್ ಕ್ಲಿನಿಕ್ ಅನ್ನು ಉದ್ಘಾಟಿಸುವ ಮೂಲಕ ಮಹತ್ವದ ಮೈಲಿಗಲ್ಲನ್ನು ಸಾಧಿಸಿತು.

ಈ ಕ್ಲಿನಿಕ್ ಅನ್ನು ಬೆಂಗಳೂರಿನ ಈಕ್ವಿಡರ್ ಮೆಡ್‌ಟೆಕ್‌ನ ಸಂಸ್ಥಾಪಕ ಡಾ. ಶ್ರೀನಿವಾಸ್ ದೊರಸಾಲ ಮತ್ತು ಯೆನೆಪೋಯ ವಿಶ್ವವಿದ್ಯಾಲಯದ ಕುಲಪತಿ ಡಾ. ಎಂ. ವಿಜಯಕುಮಾರ್ ಅವರು ಉದ್ಘಾಟಿಸಿದರು.

ಇ.ಎನ್‌.ಟಿ ವಿಭಾಗದ ಪ್ರಾಧ್ಯಾಪಕಿ, ವರ್ಟಿಗೋ ಮತ್ತು ಸಮತೋಲನ ಚಿಕಿತ್ಸಾ ತಜ್ಞೆ ಹಾಗು ಸಂಗೀತ ಚಿಕಿತ್ಸಕಿ ಡಾ. ವಿಜಯಲಕ್ಷ್ಮಿ ಸುಬ್ರಮಣ್ಯಂ ಅವರು ಕ್ಲಿನಿಕ್ನ ಸೌಲಭ್ಯಗಳ ಅವಲೋಕನವನ್ನು ಪ್ರಸ್ತುತಪಡಿಸಿ ದರು ಮತ್ತು ವೆಸ್ಟಿಬುಲರ್ ಸೈನ್ಸ್ ಕ್ಷೇತ್ರದಲ್ಲಿ ರೋಗಿಗಳ ಆರೈಕೆ ಮತ್ತು ಶೈಕ್ಷಣಿಕ ಉತ್ಕೃಷ್ಟತೆಯನ್ನು ಹೆಚ್ಚಿಸುವಲ್ಲಿ ಅದರ ಪಾತ್ರವನ್ನು ಒತ್ತಿ ಹೇಳಿದರು.

ಕ್ರ್ಯಾನಿಯೊಕ್ಯುಲೋಗ್ರಫಿ (COG/VNG), ಫಂಕ್ಷನಲ್ ಹೆಡ್ ಇಂಪಲ್ಸ್ ಟೆಸ್ಟ್ (fHIT), ಸ್ಟೆಬಿಲೋಮೆಟ್ರಿ (Stabilometry) ಮತ್ತು ಕ್ರಾನಿಯೊಕಾರ್ಪೋಗ್ರಫಿ (CCG) ಸೇರಿದಂತೆ ರೋಗನಿರ್ಣಯ ಮತ್ತು ರೋಗಿಗಳ ಪುನಸ್ಚೇತನ ಅತ್ಯಾಧುನಿಕ ಮೌಲ್ಯಮಾಪನದ ಉಪಕರಣಗಳು ಇಲ್ಲಿ ಲಭ್ಯವಿದೆ. ಇದಲ್ಲದೆ ಇಲ್ಲಿ ವರ್ಚುಯಲ್ ರಿಯಾಲಿಟಿ ಆಧಾರಿತ ವೆಸ್ಟಿಬ್ಯುಲಾರ್ ಪುನಸ್ಚೇತನ ಚಿಕಿತ್ಸೆಯು ಕೂಡ ಲಭ್ಯವಿದೆ. ಈ ಸೌಲಭ್ಯವು ಮೀಸಲಾದ ಫಾಲ್ ರಿಸ್ಕ್ ಅಸೆಸ್‌ಮೆಂಟ್ ಮತ್ತು ಫಾಲ್ ಪ್ರಿವೆನ್ಶನ್ ಕ್ಲಿನಿಕ್ ಅನ್ನು ಸಹ ಹೊಂದಿದೆ, ಇದು ವಯಸ್ಸಾದವರ ಆರೈಕೆ ಮತ್ತು ನರರೋಗಶಾಸ್ತ್ರದ ಅಭ್ಯಾಸದಲ್ಲಿನ ಅತ್ಯಂತ ಮಹತ್ವದ ಕಾಳಜಿಯನ್ನು ವಹಿಸುತ್ತದೆ.

ತರಬೇತಿ ಪಡೆದ ವರ್ಟಿಗೋ ಮತ್ತು ಸಮತೋಲನ ತಜ್ಞರ ತಂಡದೊಂದಿಗೆ, ವಿಭಾಗವು ಈ ನಿರ್ದಿಷ್ಟ ಕ್ಷೇತ್ರದಲ್ಲಿ ಶೈಕ್ಷಣಿಕ ತರಬೇತಿಯಲ್ಲಿ ಮುಂಚೂಣಿಯಲ್ಲಿದೆ. ತಲೆತಿರುಗುವಿಕೆ ಮತ್ತು ಸಮತೋಲನ ಅಸ್ವಸ್ಥತೆಗಳಲ್ಲಿ ತನ್ನ ಸರ್ಟಿಫಿಕೇಟ್ ಕೋರ್ಸ್‌ಗಳ ಮೂಲಕ, ವಿಭಾಗವು ಭಾರತ ಮತ್ತು ವಿದೇಶಗಳಿಂದ 1,000 ಕ್ಕೂ ಹೆಚ್ಚು ವೈದ್ಯರಿಗೆ ತರಬೇತಿ ನೀಡಿದೆ - ಇದು ದೇಶದ ಯಾವುದೇ ವಿಶ್ವವಿದ್ಯಾಲಯಕ್ಕೆ ಹೋಲಿಸಲಾಗದ ಏಕೈಕ ಸಾಧನೆಯಾಗಿದೆ.

ಈ ಸಂದರ್ಭದಲ್ಲಿ ಯೆನೆಪೊಯ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ರಾದ ಡಾ. ಗಂಗಾಧರ ಸೋಮಯಾಜಿ, ಯೆನೆಪೊಯ ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲ ರಾದ ಡಾ. ಎಂ.ಎಸ್. ಮೂಸಬ್ಬ, ಇ.ಎನ್‌.ಟಿ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥ ಡಾ. ಸಾಯಿಮನೋಹರ್‌ ಉಪಸ್ಥಿತರಿದ್ದರು.

ಈ ಸಂದರ್ಭ ಸ್ಮರಣಾರ್ಥವಾಗಿ, ವಿಭಾಗವು ವೆಸ್ಟಿಬುಲರ್ ಸೈನ್ಸಸ್ ಮತ್ತು ಸರ್ಜರಿಯಲ್ಲಿನ ಪ್ರಗತಿಗಳ ಕುರಿತು ವೈದ್ಯಕೀಯ ಶಿಕ್ಷಣ (ಅಒಇ) ಕಾರ್ಯಕ್ರಮವನ್ನು ಆಯೋಜಿಸಿತು. ಪ್ರಖ್ಯಾತ ಇ.ಎನ್‌.ಟಿ ತಜ್ಞರು, ಏಷ್ಯನ್ ಇಎನ್‌ಟಿ ಆಸ್ಪತ್ರೆ’ ವಿಶಾಖಪಟ್ಟಣದ ನಿರ್ದೇಶಕ ಡಾ. ಪ್ರದೀಪ್ ವುಂಡವಳ್ಳಿ ಮತ್ತು ಯೆನೆಪೊಯ ವಿಶ್ವವಿದ್ಯಾಲಯದಲ್ಲಿ ಸಹಾಯಕ ಅಧ್ಯಾಪಕರಾಗಿ ಸೇವೆ ಸಲ್ಲಿಸುತ್ತಿರುವ ಡಾ. ಶ್ರೀನಿವಾಸ್ ದೊರಸಾಲ ಅವರು ಈ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X