Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ...

ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣೆ

ವಾರ್ತಾಭಾರತಿವಾರ್ತಾಭಾರತಿ27 April 2025 8:39 PM IST
share
ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣೆ

ಮಂಗಳೂರು, ಎ.27: ಚರಾ ಎಂಬ ನಾಮದಲ್ಲಿ ಬರೆಯುತ್ತಿದ್ದ ರಾಮಚಂದ್ರ ಉಚ್ಚಿಲರ ಲೇಖನಗಳು ವಿಡಂಬನಾತ್ಮಕವಾಗಿದ್ದು ಓದುಗರನ್ನು ಬಡಿದೆಬ್ಬಿಸುವ ಕೆಲಸ ಮಾಡುತ್ತಿದ್ದವು ಎಂದು ಹಿರಿಯ ವೈದ್ಯ ಮತ್ತು ಸಾಹಿತಿ ಡಾ. ರಮಾನಂದ ಬನಾರಿ ಹೇಳಿದ್ದಾರೆ.

ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣ ಸಮಿತಿ, ಗುರು ಶಿಷ್ಯ ಒಕ್ಕೂಟ ಮತ್ತು ಚ.ರಾ. ಪ್ರಕಾಶನದ ಆಶ್ರಯದಲ್ಲಿ ಸೋಮೇಶ್ವರ ಉಚ್ಚಿಲದ ಬೋವಿ ಹಿರಿಯ ಪ್ರಾಥಮಿಕ ಶಾಲೆಯ ವಜ್ರ ಮಹೋತ್ಸವ ಸ್ಮಾರಕ ಕಟ್ಟಡ ಸಭಾಗೃಹದಲ್ಲಿ ನಡೆದ ವಿದ್ವಾನ್ ರಾಮಚಂದ್ರ ಉಚ್ಚಿಲ್ ಜನ್ಮ ಶತಮಾನೋತ್ಸವ ಸಂಸ್ಮರಣೆ, ತಾಳಮದ್ದಳೆ ಮತ್ತು ಕೃತಿ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಮುಂಬೈಯ ಮರ್ಕೆಂಟೈಲ್ ಬ್ಯಾಂಕ್‌ನಲ್ಲಿ ಉದ್ಯೋಗಕ್ಕೆ ನಿಷ್ಠರಾಗಿದ್ದು ಪತ್ರಿಕಾ ಅಂಕಣಕಾರರಾಗಿ, ರಾತ್ರಿ ಶಾಲೆಯ ಅಧ್ಯಾಪಕರಾಗಿ ಅಪಾರ ಶಿಷ್ಯ ಸಂಪತ್ತನ್ನು ಹೊಂದಿದ್ದ ಉಚ್ಚಿಲರು ತಮ್ಮ ಜ್ಞಾನ ಶಕ್ತಿ, ಸ್ಮರಣ ಶಕ್ತಿ ಮತ್ತು ಇಚ್ಛಾಶಕ್ತಿಗೆ ಹೆಸರಾಗಿದ್ದರು. ಅವರ ಬದುಕು - ಬರಹಗಳನ್ನು ದಾಖಲೀಕರಿಸಿದ ಪುತ್ರಿ ಡಾ. ವಾಣಿ ಉಚ್ಚಿಲ್ಕರ್ ಅವರದು ಶ್ರೇಷ್ಠ ಕಾರ್ಯ’ ಎಂದು ಡಾ. ಬನಾರಿ ನುಡಿದರು.

ಹಿರಿಯ ಸಾಹಿತಿ, ಸಂಶೋಧಕ ಹಾಗೂ ಮುಂಬೈ ವಿಶ್ವವಿದ್ಯಾನಿಲಯ ಕನ್ನಡ ವಿಭಾಗದ ಮುಖ್ಯಸ್ಥ ಡಾ. ತಾಳ್ತಜೆ ವಸಂತಕುಮಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ವಿದ್ವಾಂಸ ಮತ್ತು ಯಕ್ಷಗಾನ ಅರ್ಥಧಾರಿ ಡಾ.ಎಂ.ಪ್ರಭಾಕರ ಜೋಶಿ ಸಂಸ್ಮರಣ ಭಾಷಣ ಮಾಡಿದರು.

ದಿ.ರಾಮಚಂದ್ರ ಉಚ್ಚಿಲರ ನೆನಪಿನ 4 ಸಂಪುಟಗಳ ಸಹಿತ 8 ಕೃತಿ ಸಂಚಯಗಳನ್ನು ಬಿಡುಗಡೆಗೊಳಿಲಾ ಯಿತು. ಈ ಸಂದರ್ಭ ಡಾ.ವಾಣಿ ಎನ್.ಉಚ್ಙಿಲ್ಕರ್‌ರ ’ಭಾವ ತರಂಗ’ ಕವನ ಸಂಕಲನ, ’ಜ್ಞಾನ ದರ್ಶನ’ ಪ್ರಬಂಧ ಸಂಗ್ರಹ, ’ನನ್ನ ಚೇತನ’ ಸಂಸ್ಮರಣ ಲೇಖನಗಳು ಹಾಗೂ ನವೀನ್ ಎನ್.ಉಚ್ಚಿಲ್ಕರ್ ಮತ್ತು ನವನೀತ ಎನ್.ಉಚ್ಚಿಲ್ಕರ್ ಸಂಪಾದಿಸಿದ ’ಎಲೆಮರೆಯ ಬರಹಗಾರ ದಿವಂಗತ ನಾರಾಯಣ ಕೆ. ಉಚ್ಚಿಲ್ಕರ್’ ಕೃತಿಗಳನ್ನು ಡಾ. ತಾಳ್ತಜೆ ವಸಂತ ಕುಮಾರ್ ಬಿಡುಗಡೆಗೊಳಿಸಿದರು.

ಅಡ್ಕ ಭಗವತಿ ಕ್ಷೇತ್ರದ ಮೂಲ್ಯಚ್ಚ ರವೀಂದ್ರನಾಥ ಆರ್.ಉಚ್ಚಿಲ್, ಕಾರ್ಯಕಾರಿ ಸಮಿತಿಯ ಚಿದಾನಂದ ಆರ್. ಉಚ್ಚಿಲ್, ರಾಜಶೇಖರ ಆರ್. ಉಚ್ಚಿಲ್, ನವನೀತ ಎನ್. ಉಚ್ಚಿಲ್ಕರ್, ವಾಸುದೇವ ಉಚ್ಚಿಲ್, ನಿಧೀಶ್ ಉಪಸ್ಥಿತರಿದ್ದರು.

ಚರಾ ಜನ್ಮ ಶತಮಾನೋತ್ಸವ ಸಲಹಾ ಸಮಿತಿಯ ಸದಸ್ಯ ಪ್ರೊ. ಭಾಸ್ಕರ ರೈ ಕುಕ್ಕುವಳ್ಳಿ ಸ್ವಾಗತಿಸಿ ದರು. ಗ್ರಂಥ ಸಂಪಾದಕಿ ಹಾಗೂ ಚರಾ ಪ್ರಕಾಶನದ ಕಾರ್ಯದರ್ಶಿ ಡಾ.ವಾಣಿ ಎನ್.ಉಚ್ಚಿಲ್ಕರ್ ಕೃತಿ ಪರಿಚಯ ನೀಡಿದರು. ಕಲಾ ಗಂಗೋತ್ರಿಯ ಕೆ.ಸದಾಶಿವ ಮಾಸ್ಟರ್ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X