Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪಠ್ಯ ಪುಸ್ತಕ, ಪುಸ್ತಕ ರವಾನೆಗೆ ʼಜ್ಞಾನ...

ಪಠ್ಯ ಪುಸ್ತಕ, ಪುಸ್ತಕ ರವಾನೆಗೆ ʼಜ್ಞಾನ ಅಂಚೆʼ ಆರಂಭ

ವಾರ್ತಾಭಾರತಿವಾರ್ತಾಭಾರತಿ1 May 2025 6:42 PM IST
share
ಪಠ್ಯ ಪುಸ್ತಕ, ಪುಸ್ತಕ ರವಾನೆಗೆ ʼಜ್ಞಾನ ಅಂಚೆʼ ಆರಂಭ

ಮಂಗಳೂರು: ಪಠ್ಯಪುಸ್ತಕ, ಗೈಡ್ ಮತ್ತು ಸಾಹಿತ್ಯ ಕೃತಿಗಳ ರವಾನೆಗಾಗಿಯೇ ಮೀಸಲಿರಿಸಿದ ಭಾರತೀಯ ಅಂಚೆ ಇಲಾಖೆಯ ಜ್ಞಾನ ಅಂಚೆ ಸೇವೆಯು ಮೇ 1ರಿಂದ ಆರಂಭಗೊಂಡಿದೆ. ಜ್ಞಾನ ಅಂಚೆ ಸೇವೆಯನ್ನು ಗುರುವಾರ ಮಂಗಳೂರು ಪ್ರಧಾನ ಅಂಚೆ ಕಚೇರಿಯಲ್ಲಿ ಉದ್ಘಾಟಿಸಲಾಯಿತು.

ಈ ಸೇವೆ ಯನ್ನು ಗ್ರಾಹಕರು ಮಂಗಳೂರು ಮತ್ತು ಕುಲಶೇಖರ ಪ್ರದಾನ ಅಂಚೆ ಕಚೇರಿ ಹಾಗೂ ಎಲ್ಲಾ ಉಪ ಅಂಚೆ ಕಚೇರಿಗಳಲ್ಲಿ ಪಡೆಯಬಹುದು.

ಈ ಮೊದಲು ಪಠ್ಯ ಪುಸ್ತಕ, ಗೈಡ್ ಮತ್ತು ಸಾಹಿತ್ಯ ಕೃತಿಗಳನ್ನು ಭಾರತೀಯ ಅಂಚೆಯ ಬುಕ್ ಪ್ಯಾಕೆಟ್ ಮತ್ತು ಬುಕ್ ಪೋಸ್ಟ್‌ಗಳ ಮೂಲಕ ಕಳುಹಿಸಬೇಕಿತ್ತು. ಭಾರತೀಯ ಅಂಚೆ ಕಾಯ್ದೆಗೆ 2023ರಲ್ಲಿ ತಿದ್ದುಪಡಿ ತರುವ ಮೂಲಕ ಬುಕ್ ಪ್ಯಾಕೆಟ್ ಸೇವೆಯನ್ನು 2024ರ ಜೂನ್‌ನಲ್ಲಿ ರದ್ದುಪಡಿಸಲಾಗಿತ್ತು. ಬುಕ್ ಪೋಸ್ಟ್ ಸೇವೆಯ ಹೆಸರನ್ನು ಬದಲಿಸಿ ದರವನ್ನು ಏರಿಕೆ ಮಾಡಲಾಗಿತ್ತು.

ಬುಕ್ ಪ್ಯಾಕೆಟ್ ಮತ್ತು ಬುಕ್ ಪೋಸ್ಟ್ ಸೇವೆಗಳ ರದ್ದತಿಯಿಂದ ಪಠ್ಯಪುಸ್ತಕ, ಸಾಹಿತ್ಯ ಕೃತಿಗಳ ರವಾನೆ ದುಬಾರಿ ಬಾಬತ್ತಾಗಿ ಬದಲಾಗಿತ್ತು. ಈ ಬಗ್ಗೆ ಪ್ರಕಾಶಕರು, ಪ್ರಕಾಶಕರ ಸಂಘಗಳು ಆಕ್ಷೇಪ ವ್ಯಕ್ತಪಡಿಸಿ ದ್ದವು. ಕನ್ನಡ ಅಭಿವೃದ್ಧಿ ಪ್ರಾಧಿಕಾರವು ಅಂಚೆ ಇಲಾಖೆಗೆ ಪತ್ರ ಬರೆದಿತ್ತು. ಈಗ ಭಾರತೀಯ ಅಂಚೆ ಕಾಯ್ದೆಗೆ ಮತ್ತೆ ತಿದ್ದುಪಡಿ ತಂದಿರುವ ಕೇಂದ್ರ ಸರಕಾರವು, ಜ್ಞಾನ ಅಂಚೆ ಸೇವೆ ಆರಂಭಕ್ಕೆ ಮುಂದಾಗಿದೆ. ಪಠ್ಯಪುಸ್ತಕ, ಸಾಹಿತ್ಯ ಕೃತಿಗಳಿಗಷ್ಟೇ ಈ ಸೇವೆ ಮೀಸಲಾಗಿದೆ. ಬಿಲ್ ಬುಕ್‌ಗಳು, ಆಹ್ವಾನ ಪತ್ರಿಕೆಗಳು, ಕರಪತ್ರಗಳು, ನಿಯತಕಾಲಿಕೆಗಳಿಗೆ ಈ ಸೇವೆ ಲಭ್ಯವಿಲ್ಲ.

ಈ ಸೇವೆಯಡಿ ಪುಸ್ತಕಗಳನ್ನು ಕಳುಹಿಸುವವರು ಅದರ ಮೇಲೆ ಜ್ಞಾನ ಅಂಚೆ ಎಂದು ಕಡ್ಡಾಯವಾಗಿ ನಮೂದಿಸಿರಬೇಕು. ಅಲ್ಲದೆ ಕಳುಹಿಸುವವರು ಮತ್ತು ಪಡೆಯುವವರ ಜತೆಗೆ ಪ್ರಕಾಶಕರ ಹೆಸರು ಹಾಗೂ ವಿಳಾಸ ಇರಬೇಕು. ಯಾವುದೇ ವಾಣಿಜ್ಯ ಉದ್ದೇಶದ ಕರಪತ್ರ ಮತ್ತು ಬರಹ ಇರಬಾರದು. ಕನಿಷ್ಠ 300 ಗ್ರಾಂನಿಂದ ಗರಿಷ್ಠ 5 ಕೆ.ಜಿ.ವರೆಗಿನ ಪಾರ್ಸಲ್‌ಗಳನ್ನು ಮಾತ್ರ ಜ್ಞಾನ ಅಂಚೆ ಎಂದು ಪರಿಗಣಿಸಲಾಗು ತ್ತದೆ ಎಂದು ಅಂಚೆ ಇಲಾಖೆ ಷರತ್ತು ವಿಧಿಸಿದೆ. ಈ ಷರತ್ತುಗಳನ್ನು ಉಲ್ಲಂಘಿಸುವ ಪಾರ್ಸಲ್‌ಗಳನ್ನು, ಭಾರತೀಯ ಅಂಚೆ ಪಾರ್ಸಲ್ ಎಂದು ಪರಿಗಣಿಸಲಾಗುತ್ತದೆ. ಅಂತಹ ಪಾರ್ಸಲ್‌ಗಳಿಗೆ ಜ್ಞಾನ ಅಂಚೆ ಶುಲ್ಕ ಮತ್ತು ಭಾರತೀಯ ಅಂಚೆ ಪಾರ್ಸಲ್ ಶುಲ್ಕದ ನಡುವಣ ವ್ಯತ್ಯಾಸದ ಎರಡು ಪಟ್ಟು ದಂಡ ವಿಧಿಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X