Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ...

ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ: ಸಿಪಿಐಎಂ

ವಾರ್ತಾಭಾರತಿವಾರ್ತಾಭಾರತಿ3 May 2025 8:20 PM IST
share
ಕೋಮು ಶಕ್ತಿಗಳ ನಿಗ್ರಹದ ಕುರಿತು ಗೃಹ ಸಚಿವರ ಹೇಳಿಕೆಯಲ್ಲಿ ವಿಶ್ವಾಸಾರ್ಹತೆಯ ಕೊರತೆ: ಸಿಪಿಐಎಂ

ಮಂಗಳೂರು, ಮೇ 3: ಕರಾವಳಿ ಜಿಲ್ಲೆಯಲ್ಲಿ ಕೋಮುಶಕ್ತಿಗಳ ನಿಗ್ರಹಕ್ಕೆ ಸರಕಾರ ಕೈಗೊಳ್ಳುವ ಕ್ರಮಗಳ ಕುರಿತು ನೀಡಿರುವ ಹೇಳಿಕೆ ವಿಶ್ವಾಸಾರ್ಹತೆಯ ಕೊರತೆಯನ್ನು ಹೊಂದಿದೆ ಎಂದು ಸಿಪಿಐಎಂ ದ.ಕ. ಜಿಲ್ಲಾ ಸಮಿತಿ ಅಭಿಪ್ರಾಯಪಟ್ಟಿದೆ.

ಕೋಮು ಹಿಂಸಾಚಾರದ ಘಟನೆಗಳ ಹಿನ್ನಲೆಯಲ್ಲಿ ಜಿಲ್ಲೆಗೆ ಭೇಟಿ ನೀಡಿ, ಪೊಲೀಸ್ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಗೃಹ ಸಚಿವ ಜಿ ಪರಮೇಶ್ವರ್ ನಕ್ಸಲ್ ನಿಗ್ರಹ ದಳದ ಮಾದರಿಯಲ್ಲಿ ‘ ಆ್ಯಂಟಿ ಕಮ್ಯುನಲ್ ಪೋರ್ಸ್’ ಸ್ಥಾಪಿಸುವ ಹೇಳಿಕೆ ನೀಡಿದ್ದಾರೆ. ಆದರೆ ಪ್ರಾಯೋಗಿಕವಾಗಿ ಸಾಧ್ಯಗೊಳ್ಳುವುದು ಕಷ್ಟ ಸಾಧ್ಯ. ಇದು ನಕಾರಾತ್ಮಕ ಫಲಿತಾಂಶಕ್ಕೂ ಕಾರಣವಾಗುವ ಸಾಧ್ಯತೆ ಇದೆ ಎಂದು ಸಿಪಿಐಎಂ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕಾರ್ಯದರ್ಶಿ ಮುನೀರ್ ಕಾಟಿಪಳ್ಳ ತಿಳಿಸಿದ್ದಾರೆ.

ಕೋಮುವಾದ, ಕೋಮು ಶಕ್ತಿಗಳನ್ನು ನಿಗ್ರಸುವುದು ಪೊಲೀಸರಿಂದ ಮಾತ್ರ ಸಾಧ್ಯ ಆಗುವ ಸಂಗತಿ ಅಲ್ಲ. ಅದು ಬಹಳ ದೀರ್ಘಕಾಲದಿಂದ ಸಂಘಟನಾತ್ಮಕವಾಗಿ ಕಟ್ಟಿ ಬೆಳೆಸಿದ ಒಂದು ಸೈದ್ದಾಂತಿಕ ವ್ಯವಸ್ಥೆ. ಇದರ ವಿರುದ್ಧದ ಹೋರಾಟ ಅಂದರೆ, ಸಾಮಾಜಿಕ, ಸಾಂಸ್ಕೃತಿಕ, ರಾಜಕೀಯ ಕ್ಷೇತ್ರಗಳಲ್ಲಿ ಪರ್ಯಾಯ ಕಾರ್ಯಕ್ರಮಗಳನ್ನು ಇಟ್ಟು ಕೊಂಡು ದುಡಿಯುವುದು. ಕೋಮುವಾದಿ ಶಕ್ತಿಗಳ ಎದುರು ಸಣ್ಣ ಪುಟ್ಟ ಪ್ರತಿರೋಧಗಳಿಗೂ ಸಿದ್ದರಿಲ್ಲದ ಕಾಂಗ್ರೆಸ್ ಸರಕಾರ ಕೋಮುವಾದಿ ನಿಗ್ರಹ ಕಾರ್ಯಪಡೆ ಹೇಳಿಕೆಯನ್ನು ಕಾರ್ಯರೂಪಕ್ಕೆ ತರುವುದು ನಂಬಲು ಕಷ್ಟವಾಗುವ ಸಂಗತಿ ಎಂದರು.

ಇದೇ ಗೃಹ ಸಚಿವರು ವರ್ಷದ ಹಿಂದೆ ರಚಿಸಿದ ಆ್ಯಂಟಿ ಮೋರಲ್ ಪೊಲೀಸ್‌ಂಗ್ ಕಾರ್ಯಾಚರಣೆಗೆ ಇಳಿಯುವ ಮುನ್ನವೆ ಅಸ್ಥಿತ್ವ ಕಳೆದು ಕೊಂಡಿರುವ ಅನುಭವ ಇರುವಾಗ ಸಚಿವರ ಮಾತು ಜನತೆಯಲ್ಲಿ ವಿಶ್ವಾಸ ಮೂಡಿಸುತ್ತಿಲ್ಲ, ಕ್ರಿಮಿನಲ್ ಹಿನ್ನ್ನೆಲೆಯ ದ್ವೇಷ ಭಾಷಣಕಾರರು, ರೌಡಿಗಳ ಮೇಲೆ ಕ್ರಮ ಕೈಗೊಳ್ಳಲು ಸತತವಾಗಿ ಹಿಂಜರಿದ ಸರಕಾರ ಈಗ ಏಕಾಏಕಿ ದ್ವೇಷ ಭಾಷಣ ಮಾಡುವವರನ್ನು ಮುಲಾಜಿಲ್ಲದೆ ಹೆಡೆಮುರಿ ಕಟ್ಟುತ್ತೇವೆ ಎಂಬ ಮಾತು ಉತ್ತರ ಕುಮಾರನ ಪೌರುಷ ರೀತಿ ಕಾಣಿಸುತ್ತದೆ ಎಂದು ಸಿಪಿಐಎಂ ಹೇಳಿದೆ.

ಕೋಮುವಾದ ಅಳವಾಗಿ ಬೇರೂರಿರುವ ಕರಾವಳಿ ಜಿಲ್ಲೆಗಳ ಕುರಿತು ರಾಜ್ಯ ಸರಕಾರ ಅಧಿಕಾರಕ್ಕೆ ಬಂದ ತಕ್ಷಣವೆ ಕೆಲವು ಕ್ರಮಗಳನ್ನು ತೆಗೆದುಕೊಳ್ಳಬೇಕಿತ್ತು. ಪೊಲೀಸ್ ಇಲಾಖೆ ಮಾತ್ರವಲ್ಲದೆ, ಶಿಕ್ಷಣ, ಸೇರಿ ದಂತೆ ಎಲ್ಲಾ ಇಲಖೆಗಳಿಗೆ ಪ್ರಜ್ಞಾಪೂರ್ವಕ ನೇಮಕಾತಿ, ವಿಶೇಷ ಕಾರ್ಯಕ್ರಮಗಳನ್ನು ಯೋಜಿಸ ಬೇಕಿತ್ತು. ಆ ಕುರಿತು ಸಿಪಿಐಎಂ ಪಕ್ಷ ಹಾಗೂ ವಿವಿಧ ಜನ ಚಳವಳಿಗಳು ರಾಜ್ಯ ಸರಕಾರದ ಗಮನ ಸೆಳೆದಿತ್ತು. ಆದರೆ, ಈ ಕುರಿತು ಸಣ್ಣ ಕ್ರಮಗಳನ್ನೂ ಕೈಗೊಳ್ಳದೆ ಆನೆ ನಡೆದದ್ದೆ ದಾರಿ ಎಂಬಂತೆ ವರ್ತಿಸಿದ ಕಾಂಗ್ರೆಸ್ ಸರಕಾರ ಹಾಗೂ ಅದರ ನಾಯಕತ್ವ ಈಗ ಖೆಡ್ಡಾಕ್ಕೆ ಉರುಳಿದೆ ಎಂದು ಸಿಪಿಐಎಂ ತಿಳಿಸಿದೆ. ಇಂತಹ ಸಂದರ್ಭದಲ್ಲಿ ಉಸ್ತುವಾರಿ ಹಾಗೂ ಗೃಹ ಸಚಿವರ ವೀರಾವೇಶದ ಮಾತುಗಳು ಯಾರಲ್ಲೂ ವಿಶ್ವಾಸ ಮೂಡಿಸುತ್ತಿಲ್ಲ ಎಂದು ಸಿಪಿಐಂ ದ.ಕ. ಜಿಲ್ಲಾ ಸಮಿತಿ ಹೇಳಿಕೆಯಲ್ಲಿ ತಿಳಿಸಿದೆ.

ಕುಡುಪು ಮಾಬ್ ಲಿಂಚಿಂಗ್ ಪ್ರಕರಣದ ಎಸ್‌ಐಟಿ ತನಿಖೆ, ತಪ್ಪಿತಸ್ಥ ಪೊಲೀಸ್ ಕಮಿಷನರ್ ಮೇಲಿನ ಕ್ರಮಗಳನ್ನು ಜರುಗಿಸುವ ಕುರಿತು ಗೃಹ ಸಚಿವರು ಏನನ್ನೂ ಹೇಳದೆ, ತಿಪ್ಪೆ ಸಾರಿಸುವ ಮಾತುಗಳನ್ನಷ್ಟೆ ಆಡಿದ್ದಾರೆ ಎಂದು ಸಿಪಿಐಎಂ ನಿರಾಶೆ ವ್ಯಕ್ತಪಡಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X