Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ನವೋದಯ ಸ್ವಸಹಾಯ ಗುಂಪುಗಳ ಸಮಾವೇಶಕ್ಕೆ...

ನವೋದಯ ಸ್ವಸಹಾಯ ಗುಂಪುಗಳ ಸಮಾವೇಶಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಪ್ರತಿನಿಧಿಗಳ ನಿರೀಕ್ಷೆ: ರಾಜೇಂದ್ರ ಕುಮಾರ್

ವಾರ್ತಾಭಾರತಿವಾರ್ತಾಭಾರತಿ9 May 2025 7:49 PM IST
share
ನವೋದಯ ಸ್ವಸಹಾಯ ಗುಂಪುಗಳ ಸಮಾವೇಶಕ್ಕೆ ಒಂದೂವರೆ ಲಕ್ಷಕ್ಕೂ ಅಧಿಕ ಪ್ರತಿನಿಧಿಗಳ ನಿರೀಕ್ಷೆ: ರಾಜೇಂದ್ರ ಕುಮಾರ್

ಮಂಗಳೂರು: ನವೋದಯ ಸ್ವಸಹಾಯ ಗುಂಪುಗಳ ಸಮಾವೇಶ "ರಜತ ಸಂಭ್ರಮ” ಶನಿವಾರ ವಿಶೇಷ ಸಿಧ್ಧತೆ ಯೊಂದಿಗೆ ಮಾದರಿಯಾಗಿ ನಡೆಯಲಿದೆ ಸುಮಾರು ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಪ್ರತಿನಿಧಿಗಳು ಭಾಗವಹಿಸುವ ನಿರೀಕ್ಷೆ ಇದೆ ಎಂದು ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ಇದರ ಸಂಸ್ಥಾ ಪಕರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಈ ಸಮಾವೇಶ ದೇಶಕ್ಕೆ ಮಾದರಿಯಾಗುವ ಸಮಾವೇಶ ಆಗಲಿದೆ. ಈ ಅರ್ಥಪೂರ್ಣ ರಜತ ಸಂಭ್ರಮ ವನ್ನು ಕರ್ನಾಟಕ ಸರಕಾರದ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ನವೋದಯ ಸ್ವಸಹಾಯ ಗುಂಪುಗಳ ಸಮಾವೇಶ "ರಜತ ಸಂಭ್ರಮ” ನೆನಪಿಗಾಗಿ ವಿಶಿಷ್ಟ ರೀತಿಯ ಲಾಂಛನವನ್ನು ಕರ್ನಾಟಕದ ಮಾನ್ಯ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಬಿಡುಗಡೆ ಗೊಳಿಸಲಿರುವರು ನವೋದಯ ರಜತ ಸಂಭ್ರಮದ ನವೋದಯ ಸ್ವ-ಸಹಾಯ ಗುಂಪುಗಳ ಸದಸ್ಯರು ಗಳಿಗೆ ಸವಲತ್ತು ವಿತರಣೆಯನ್ನು ಮಹಾರಾಷ್ಟ್ರ ಸರಕಾರದ ಮಾನ್ಯ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಇವರು ನೆರವೇರಿಸಲಿದ್ದು, ರಜತ ಸಂಭ್ರಮದ 'ಸಂತೃಪ್ತಿ' ಸ್ಮರಣ ಸಂಚಿಕೆಯ ಬಿಡುಗಡೆ ಯನ್ನು ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇವರು ನೆರವೇರಿಸಲಿರುವರು.

ರಜತ ಸಂಭ್ರಮ ಆಚರಣೆಯ ಸಂದರ್ಭ ಸಹಕಾರಿ ಧ್ವಜಾರೋಹಣವನ್ನು ಕರ್ನಾಟಕ ವಿಧಾನಸಭೆಯ ಮಾನ್ಯ ಸಭಾಧ್ಯಕ್ಷರು ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರದ ಶಾಸಕಯು.ಟಿ. ಖಾದರ್ ಫರೀದ್ ನೆರವೇರಿಸಲಿರುವರು. ಅತ್ಯುತ್ತಮ ನವೋದಯ ಗುಂಪುಗಳಿಗೆ ಪ್ರಶಸ್ತಿ ಪ್ರದಾನವನ್ನು ಕೇಂದ್ರ ಸರಕಾರದ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹು ದಾದ ಇಂಧನ ಖಾತೆಯ ಮಾನ್ಯ ಸಚಿವ ಪ್ರಲ್ಲಾದ್ ವಿ. ಜೋಶಿ ಇವರು ನೆರವೇರಿಸಲಿರುವರು.

ನವೋದಯ ಗ್ರಾಮ ವಿಕಾಸ ಚಾರಿಟೆಬಲ್ ಟ್ರಸ್ಟ್ ವತಿಯಿಂದ 'ನವೋದಯ 'ರಜತ ಸಂಭ್ರಮ' ಸಮಾರಂಭ ವನ್ನು ಆಯೋಜಿಸಲಾಗಿದ್ದು ಮೇ10 ಪೂರ್ವಾಹ್ನ 10.30ಕ್ಕೆ ಮಂಗಳೂರಿನ ಬಂಗ್ರ ಕೂಳೂರುನಲ್ಲಿರುವ ಗೋಲ್ಡ್ ಫಿಂಚ್ ಸಿಟಿ ಯಲ್ಲಿ ಅದ್ದೂರಿಯಲ್ಲಿ ಹಾಗೂ ಚಾರಿತ್ರಿಕ ರೀತಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ. ಈ ಚಾರಿತ್ರಿಕ ಸಮಾವೇಶದಲ್ಲಿ ಸುಮಾರು 1.5 ಲಕ್ಷಕ್ಕೂ ಮಿಕ್ಕಿ ಮಹಿಳೆಯರು ನೀಲಿ ಬಣ್ಣದ ಸಮವಸ್ತ್ರದಲ್ಲಿ ಭಾಗವಹಿಸಲಿದ್ದಾರೆ ಎಂದು ಡಾ| ಎಂ. ಎನ್. ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಸಮಾವೇಶದ ಸಂಘಟಕ ಎಸ್ ಸಿಡಿಸಿಸಿ ಬ್ಯಾಂಕ್ ನ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಮಾತನಾಡುತ್ತಾ, 2000ನೇ ಇಸವಿಯ ಜನವರಿ 29ರಂದು ಆರಂಭ ಗೊಂಡ ನವೋದಯ ಸ್ವ ಸಹಾಯ ಗುಂಪುಗಳು ಮಹಿಳಾ ಸಶಕ್ತತೆ,ಆರ್ಥಿಕ ಸ್ವಾವಲಂಬನೆಯ ನಿಟ್ಟಿನಲ್ಲಿ ರಾಜ್ಯದಲ್ಲಿ ಕ್ರಾಂತಿಕಾರಿ ಹೆಜ್ಜೆಯಾಗಿದೆ. ಸಂಸ್ಥಾಪಕ ರಾಜೇಂದ್ರ ಕುಮಾರ್ ಅವರ ಕನಸಿನಂತೆ ಅಭೂತ ಪೂರ್ವ ರಜತ ಸಂಭ್ರಮ ನಡೆಯಲಿದೆ. ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ನಿ.. ಬೆಂಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿ. ಮಂಗಳೂರು ಇದರ ಅಧ್ಯಕ್ಷರು ಹಾಗೂ ನವೋದಯ ಗ್ರಾಮ ವಿಕಾಸ ಟ್ರಸ್ಟ್(ರಿ.) ಮಂಗಳೂರು ಇದರ ಸಂಸ್ಥಾಪಕರಾದ ಡಾ| ಎಂ. ಎನ್. ರಾಜೇಂದ್ರ ಕುಮಾರ್ ಸಮಾರಂಭದ ಅಧ್ಯಕ್ಷತೆ ವಹಿಸಲಿರುವರು ಎಂದವರು ತಿಳಿಸಿದ್ದಾರೆ.

ಡಾ. ಡಿ. ವೀರೇಂದ್ರ ಹೆಗ್ಗಡೆ ಹಾಗೂ ಉಡುಪಿ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಆಶೀರ್ವಚನ ನೀಡಲಿರುವರು. ಸಮಾರಂಭದಲ್ಲಿ ಸಚಿವರಾದ ಕೆ. ಎನ್. ರಾಜಣ್ಣ, ಮಾಜಿ ಮುಖ್ಯ ಮಂತ್ರಿ ಎಂ. ವೀರಪ್ಪ ಮೊಯ್ಲಿ, ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳರ್, ರಾಜ್ಯದ ಮಾನ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ನಿರ್ದೇಶ ನಾಲಯ, ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ. ಹಾಗೂ ರಾಜ್ಯದ ಮಾನ್ಯ ಅಬಕಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಅವರು ಭಾಗವಹಿಸಲಿದ್ದಾರೆ ಎಂದು ರಾಜೇಂದ್ರ ಕುಮಾರ್ ತಿಳಿಸಿದ್ದಾರೆ.

ಈ ಸಂದರ್ಭ ಎಸ್ ಸಿ ಡಿಸಿಸಿ ಬ್ಯಾಂಕಿನ ನಿರ್ದೇಶಕ ಶಶಿಕುಮಾರ್ ರೈ ಬಿ.ದೇವಿ ಪ್ರಸಾದ್ ಶೆಟ್ಟಿ ಬೆಳಪು ಮೊದಲಾದವರು ಉಪಸ್ಥಿತರಿದ್ದರು.




share
ವಾರ್ತಾಭಾರತಿ
ವಾರ್ತಾಭಾರತಿ
Next Story
X