ಭಾರತೀಯ ಸೇನೆಯ ಪರಾಕ್ರಮಕ್ಕೆ ಅಖಿಲ ಭಾರತ ಬ್ಯಾರಿ ಪರಿಷತ್ ಶ್ಲಾಘನೆ
ಮಂಗಳೂರು, ಮೇ 9: ಜಮ್ಮು-ಕಾಶ್ಮೀರದ ಪೆಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಕಾರವಾಗಿ ಭಾರತದ ಸೇನೆಯು ಬುಧವಾರ ನಸುಕಿನ ಜಾವ ಪಾಕಿಸ್ತಾನ ಹಾಗೂ ಪಾಕ್ ಅಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ಗುರಿಯಾಗಿಸಿ ನಡೆಸಿದ ದಾಳಿಯನ್ನು ಅಖಿಲ ಭಾರತ ಬ್ಯಾರಿ ಪರಿಷತ್ ಅಧ್ಯಕ್ಷ ಯು. ಎಚ್.ಖಾಲಿದ್ ಉಜಿರೆ ರವರು ಅಭಿನಂದಿಸಿದರು.
ಈ ಸಂದರ್ಭದಲ್ಲಿ ಭಾರತದ ಸೇನೆ ಹಾಗೂ ಭಾರತ ಸರ್ಕಾರದೊಂದಿಗೆ ಮುಸ್ಲಿಂ ಸಮುದಾಯ ಸದಾ ತಮ್ಮ್ಮೊಂದಿಗೆ ನಿಲ್ಲುತ್ತದೆ ಎಂದು ಅವರು ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.
Next Story