Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಜನಮನ
      • ರಂಗದೊಳಗಿಂದ
      • ಶಂಬೂಕ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಉಪ್ಪಿನಂಗಡಿ: ಕಟ್ಟಿಗೆ ಕೊಂಡೊಯ್ಯುವ...

ಉಪ್ಪಿನಂಗಡಿ: ಕಟ್ಟಿಗೆ ಕೊಂಡೊಯ್ಯುವ ವಿಷಯದಲ್ಲಿ ಯುವಕನ ಕೊಲೆ

ಚಿಕ್ಕಪ್ಪನ ಮಗನಿಂದಲೇ ನಡೆಯಿತು ಕೃತ್ಯ

ವಾರ್ತಾಭಾರತಿವಾರ್ತಾಭಾರತಿ10 May 2025 9:12 PM IST
share
ಉಪ್ಪಿನಂಗಡಿ: ಕಟ್ಟಿಗೆ ಕೊಂಡೊಯ್ಯುವ ವಿಷಯದಲ್ಲಿ ಯುವಕನ ಕೊಲೆ

ಉಪ್ಪಿನಂಗಡಿ: ಕಟ್ಟಿಗೆ ಕೊಂಡೊಯ್ಯುವ ವಿಷಯದಲ್ಲಿ ಜಗಳ ನಡೆದು ತನ್ನ ದೊಡ್ಡಪ್ಪನ ಮಗನನ್ನೇ ದೊಣ್ಣೆಯಿಂದ ಹೊಡೆದು ಹತ್ಯೆಗೈದ ಘಟನೆ ನೆಲ್ಯಾಡಿ ಗ್ರಾಮದ ಮಾದೇರಿ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.

ಮಾದೇರಿ ನಿವಾಸಿ ಗಂಗಪ್ಪ ಗೌಡ ಅವರ ಪುತ್ರ ಶರತ್ ಕುಮಾರ್ (37) ಮೃತ ಯುವಕ. ಮೃತ ಯುವಕನ ಚಿಕ್ಕಪ್ಪ ದಿ.ಜನಾರ್ದನ ಗೌಡರ ಮಗ ಹರಿಪ್ರಸಾದ್ ಕೊಲೆ ಆರೋಪಿ.

ಶರತ್ ಕುಮಾರ್ ತಂದೆ, ತಾಯಿ ಹಾಗೂ ಸಹೋದರ ಉಪ್ಪಿನಂಗಡಿಯಲ್ಲಿ ವಾಸ್ತವ್ಯವಿದ್ದು ಮಾದೇರಿ ಯಲ್ಲಿ ಶರತ್‍ ಕುಮಾರ್ ಒಬ್ಬರೇ ವಾಸ್ತವ್ಯವಿದ್ದರು. ಶರತ್ ಕುಮಾರ್ ಹಾಗೂ ಅವರ ಚಿಕ್ಕಪ್ಪ ದಿ.ಜನಾರ್ದನ ಗೌಡರವರ ಮನೆ ಅಕ್ಕಪಕ್ಕದಲ್ಲೇ ಇದ್ದು, ಶರತ್‍ ಕುಮಾರ್ ಹಾಗೂ ದಿ.ಜನಾರ್ದನ ಗೌಡರ ಮಕ್ಕಳ ಮಧ್ಯೆ ಕೆಲವು ದಿನಗಳಿಂದ ಕ್ಷುಲ್ಲಕ ಕಾರಣಕ್ಕೆ ಪರಸ್ಪರ ಗಲಾಟೆಯಾಗುತ್ತಿತ್ತು. ಮೇ 8 ರಂದು ಶರತ್‍ ಕುಮಾರ್ ಅವರ ಜಾಗದಲ್ಲಿ ಹಾಕಿದ್ದ ಕಟ್ಟಿಗೆಯನ್ನು ಜನಾರ್ದನ ಗೌಡರವರ ಮನೆಯವರು ಅವರ ಮನೆಗೆ ಕೊಂಡು ಹೋಗುತ್ತಿದ್ದಾಗ ಕಟ್ಟಿಗೆಯನ್ನು ಕೊಂಡು ಹೋಗದಂತೆ ಶರತ್‍ಕುಮಾರ್ ತಿಳಿಸಿದ್ದು ಈ ವೇಳೆ ಜನಾರ್ದನ ಗೌಡರವರ ಮನೆಯವರಿಗೂ ಶರತ್‍ಕುಮಾರ್ ನಡುವೆ ಗಲಾಟೆ ನಡೆದಿದೆ. ಅದು ಮತ್ತೆ ಮುಂದುವರಿದು ಮೇ 9ರಂದು ರಾತ್ರಿ ಶರತ್ ಕುಮಾರ್ ಮಾದೇರಿಯಲ್ಲಿರುವ ಚಿಕ್ಕಪ್ಪನ ಮನೆಗೆ ತೆರಳಿದ್ದು, ಅವರ ಅಂಗಳದಲ್ಲಿ ನಿಂತು ಚಿಕ್ಕಪ್ಪನ ಮಗ ಸತೀಶನಿಗೆ ಬೈಯುತ್ತಿದ್ದ. ಈ ಸಂದರ್ಭ ತೋಟಕ್ಕೆ ಹೋಗಿದ್ದ ಹರಿಪ್ರಸಾದ್ ಎಂಬಾತನು ಬಂದು ಆತನ ಕೈಯಲ್ಲಿದ್ದ ಮರದ ದೊಣ್ಣೆಯಿಂದ ಶರತ್ ಕುಮಾರ್‍ನ ತಲೆಗೆ ಹಲ್ಲೆ ನಡೆಸಿದ್ದ. ಈ ವೇಳೆ ಶರತ್ ಕುಮಾರ್ ಅಂಗಳದಲ್ಲಿ ಕುಸಿದು ಬಿದ್ದಾಗ ಹರಿಪ್ರಸಾದ್ ಮತ್ತೆ ಶರತ್‍ ಕುಮಾರ್‍ನ ತಲೆಗೆ ಬಲವಾಗಿ ಹಲ್ಲೆ ನಡೆಸಿ ಕೊಲೆ ನಡೆಸಿದ್ದಾನೆ. ಈ ಬಗ್ಗೆ ಮೃತನ ಸಹೋದರ ಚರಣ್ ಕುಮಾರ್ ನೀಡಿದ ದೂರಿನಂತೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್. ಅವರು ಭೇಟಿ ನೀಡಿ ಪರಿಶೀಲಿಸಿದ್ದು, ಪೊಲೀಸರಿಗೆ ತನಿಖೆಯ ಬಗ್ಗೆ ಸೂಕ್ತ ಮಾರ್ಗದರ್ಶನ ನೀಡಿದರು. ಈ ಸಂದರ್ಭ ಪುತ್ತೂರು ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ರವಿ ಬಿ.ಎಸ್., ಉಪ್ಪಿನಂಗಡಿ ಪೊಲೀಸ್ ಉಪನಿರೀಕ್ಷಕ ಅವಿನಾಶ್ ಗೌಡ ಅವರೂ ಘಟನಾ ಸ್ಥಳದಲ್ಲಿದ್ದರು.

ಕೊಲೆ ಕೃತ್ಯದ ಮಾಹಿತಿ ತಿಳಿಯುತ್ತಿದ್ದಂತೆ ನೆಲ್ಯಾಡಿ ಹೊರಠಾಣೆ ಪೊಲೀಸರು ಹಾಗೂ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೇ 10ರ ಬೆಳಗ್ಗಿನ ತನಕವೂ ಶರತ್‍ ಕುಮಾರ್ ಮೃತದೇಹ ಆರೋಪಿ ಹರಿಪ್ರಸಾದ್‍ರವರ ಮನೆಯ ಮೆಟ್ಟಿಲಿನ ಬಳಿಯಲ್ಲಿಯೇ ಬಿದ್ದಿತ್ತು. ಮೃತದೇಹದ ಪಕ್ಕ ಚಾಕುವೊಂದು ಕಾಣಿಸಿಕೊಂಡಿತ್ತು. ಬೆಳಿಗ್ಗೆ 10 ಗಂಟೆಯ ಸುಮಾರಿಗೆ ಸ್ಥಳಕ್ಕೆ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಆ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯಲಾಯಿತು. ಕೊಲೆ ಪ್ರಕರಣದ ಆರೋಪಿ ಹರಿಪ್ರಸಾದ್‍ನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ತನಿಖೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X