Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ದೇರಳಕಟ್ಟೆ: ನಿಟ್ಟೆ ಗ್ಲಾಸ್ ಹೌಸ್ ನಲ್ಲಿ...

ದೇರಳಕಟ್ಟೆ: ನಿಟ್ಟೆ ಗ್ಲಾಸ್ ಹೌಸ್ ನಲ್ಲಿ ಭಾರತೀಯ ಸೈನಿಕರಿಗೆ ಕೃತಜ್ಞತೆ ಸಭೆ

ವಾರ್ತಾಭಾರತಿವಾರ್ತಾಭಾರತಿ13 May 2025 5:25 PM IST
share
ದೇರಳಕಟ್ಟೆ: ನಿಟ್ಟೆ ಗ್ಲಾಸ್ ಹೌಸ್ ನಲ್ಲಿ ಭಾರತೀಯ ಸೈನಿಕರಿಗೆ ಕೃತಜ್ಞತೆ ಸಭೆ

ಕೊಣಾಜೆ: ಪಾಕ್ ಉಗ್ರರು ಪಹಲ್ಗಾಮ್ ನಲ್ಲಿ ನಡೆಸಿದ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೈನಿಕರು ತೋರಿದ ಸಾಹಸಕ್ಕೆ ದೇರಳಕಟ್ಟೆಯ ನಿಟ್ಟೆ ವಿವಿ ವತಿಯಿಂದ ಕ್ಷೇಮ ಆಸ್ಪತ್ರೆ ಕ್ಯಾಂಪಸ್ ನ ಗ್ಲಾಸ್ ಹೌಸ್ ನಲ್ಲಿ ಮಂಗಳವಾರ ಕೃತಜ್ಞತೆ ಸಭೆ ನಡೆಯಿತು.

ಕಾರ್ಯಕ್ರಮದಲ್ಲಿ ಪಾಲ್ಗೊಂಡ ಕುಲಾಧಿಪತಿ ಎನ್. ವಿನಯ್ ಹೆಗ್ಡೆ ಮಾತನಾಡಿ ಭಾರತೀಯ ಸೇನೆಯ ಸಾಹಸಮಯ ಹೋರಾಟ ಶತ್ರು ರಾಷ್ಟ್ರವನ್ನು ಹೆಡೆಮುರಿ ಕಟ್ಟುವ ಮೂಲಕ ಸರಿಯಾದ ಪಾಠ ಕಲಿಸಿದ್ದು ಪ್ರಧಾನ ಮಂತ್ರಿ ಎಚ್ಚರಿಸಿದಂತೆ ಸದ್ಯಕ್ಕೆ ವಿರಾಮ ಅಷ್ಟೇ, ಯುದ್ಧ ನಿಲ್ಲದು, ಪಾಕ್ ಭಾರತದ ಮುಂದೆ ಕದನ ವಿರಾಮ ಅಂಗಲಾಚಿದ್ದರಿಂದ ಮುಂದಿನ ದಿನಗಳಲ್ಲಿ ಆದರೂ ಆ ರಾಷ್ಟ್ರ ಶಾಂತಿಯುತವಾಗಿ ಮುಂದುವರಿಯುತ್ತದೆಯೇ ಎಂದು ಕಾದು ನೋಡಬೇಕಿದೆ ಎಂದರು.

ಪೌರರ ಬೆಂಬಲವಿಲ್ಲದೆ ಯಾವುದೇ ಸೈನಿಕ ಪಡೆ ಯಶಸ್ಸು ಸಾಧಿಸಲು ಸಾಧ್ಯವಿಲ್ಲ. ಸಮಂಜಸವಾದ ಮತ್ತು ಅತಿಯಾದ ಪ್ರತಿಕ್ರಿಯೆಗಳಿಂದ ದೂರವಿರುವ ನಿರ್ಧಾರಗಳೇ ಶಾಂತಿ ಹಾಗೂ ಸ್ಥಿರತೆಗೆ ನಾಂದಿ ಹಾಡಿದೆ. ಭೂ ಸೈನ್ಯ, ನೌಕಾಪಡೆ, ವಾಯುಪಡೆ ಹಾಗೂ ಇತರ ಪಾರಾಮಿಲಿಟರಿ ಪಡೆಗಳು ನಮ್ಮ ರಾಷ್ಟ್ರದ ರಕ್ಷಣೆಗಾಗಿ ದುಡಿಯುತ್ತಿದ್ದು ಅವರ ಸೇವೆಗೆ ಗೌರವ ಹಾಗೂ ಬೆಂಬಲ ನೀಡಿ, ಅವರ ಜೊತೆಗೆ ನಿಂತುಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದರು.

ಸೈನಿಕರು ಶಿಸ್ತು, ಧೈರ್ಯ ಮತ್ತು ನಿಷ್ಠೆಯಿಂದ ಸೇವೆ ಸಲ್ಲಿಸುತ್ತಿದ್ದು ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಂಡಿರುವುದು ಇದೆ. ಸೈನಿಕ ಅಧ್ಯಯನ ಮತ್ತು ತೀವ್ರ ತರಬೇತಿಗಳ ಮೂಲಕ ಅವರು ಯಾವಾಗಲೂ ದೇಶ ಸೇವೆಗೆ ಸಿದ್ಧರಾಗಿರುತ್ತಾರೆ. ದೇಶದ ಭದ್ರತೆ, ಕಲ್ಯಾಣ ಮತ್ತು ಗೌರವವೇ ಅವರ ಸೇವೆ ಎಂದರು.

ಸಹ ಕುಲಾಧಿಪತಿ ಪ್ರೊ. ಡಾ. ಎಂ. ಶಾಂತರಾಮ ಶೆಟ್ಟಿ, ಕುಲಸಚಿವ ಡಾ. ಹರ್ಷ ಹಾಲಹಳ್ಳಿ, ಕ್ಷೇಮ ಡೀನ್ ಡಾ. ಸಂದೀಪ್ ರೈ, ಡಾ. ಜಯಪ್ರಕಾಶ್ ಶೆಟ್ಟಿ, ನಿವೃತ್ತ ಕುಲಪತಿ ಡಾ. ಸತೀಶ್ ಕುಮಾರ್ ಭಂಡಾರಿ, ನಿಟ್ಟೆ ವಿವಿ ಅಧಿಕಾರಿ ಪ್ರಸನ್ನ ಹೆಗ್ಡೆ, ಎ. ಬಿ. ಶೆಟ್ಟಿ ಸ್ಮಾರಕ ದಂತ ಮಹಾ ವಿದ್ಯಾಲಯ ಡೀನ್ ಡಾ. ಮಿತ್ರ ಎನ್. ಹೆಗ್ಡೆ, ವಾಯುಸೇನೆ ಸಿಎಂಡಿಇಗಳಾದ ಎಸ್. ಕೆ. ಪೈ ಹಾಗೂ ವಿ. ಕೆ. ಶಶೀಂದ್ರನ್, ಕರ್ನಲ್ ಬಿ. ಎಸ್. ಘಿವಾರಿ, ಡಾ. ರಘುನಾಥ ಉಪ್ಪೋರ್, ಡಾ. ರಾಘವೇಂದ್ರ ಹುಚ್ಚನವರ್, ಗೌರವ ಕ್ಯಾಪ್ಟನ್ ಅಮ್ರೀಕ ಸಿಂಗ್, ಗೌರವ ಲೆಫ್ಟಿನೆಂಟ್ ವ್ಯಾಲಿ ಪಿರೇರಾ, ಸುಬೇಧರ್ ದಯಾನಂದ, ಹವಾಲ್ದಾರ್ ಸುಜಯ್ ಪಿರೇರಾ, ಹವಾಲ್ದಾರ್ ಭಾಸ್ಕರ್, ಹವಾಲ್ದಾರ್ ರಂಜಿತ್, ಎನ್. ಕೆ. ಸುರೇಶ್, ಎನ್. ಕೆ. ರಾಧಾಕೃಷ್ಣ ಪಿ.ವಿ ಹಾಗೂ ಪ್ರಸಾದ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X