Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಗುರುಪುರ: ಸರಕಾರಿ ಜಮೀನು ಒತ್ತುವರಿ ಮಾಡಿ...

ಗುರುಪುರ: ಸರಕಾರಿ ಜಮೀನು ಒತ್ತುವರಿ ಮಾಡಿ ಪ್ರವಾಸಿ ಕೇಂದ್ರ ನಿರ್ಮಾಣ; ಆರೋಪ

ರಸ್ತೆಗಳನ್ನು ಮಣ್ಣು ಹಾಕಿ ಮುಚ್ಚಿದ್ದರಿಂದ ತೊಂದರೆ: ಗ್ರಾಮಸ್ಥರಿಂದ ಜಿಲ್ಲಾಧಿಕಾರಿಗೆ ದೂರು

ವಾರ್ತಾಭಾರತಿವಾರ್ತಾಭಾರತಿ13 May 2025 11:09 PM IST
share
ಗುರುಪುರ: ಸರಕಾರಿ ಜಮೀನು ಒತ್ತುವರಿ ಮಾಡಿ ಪ್ರವಾಸಿ ಕೇಂದ್ರ ನಿರ್ಮಾಣ; ಆರೋಪ

ಗುರುಪುರ: ಇಲ್ಲಿನ ಫಲ್ಗುಣಿ ನದಿಯ ದಂಡೆಯ ಪಕ್ಕದಲ್ಲಿರುವ ಸಿಆರ್‌ಝೆಡ್ ವ್ಯಾಪ್ತಿಯ ಸರಕಾರಿ ಜಮೀನನ್ನು ಒತ್ತುವರಿ ಮಾಡಿಕೊಂಡು ಪ್ರವಾಸಿ ಕೇಂದ್ರ ನಿರ್ಮಿಸಿರುವುದಲ್ಲದೆ, ಸ್ಥಳೀಯರ ಸಂಚಾರ ಕ್ಕಿರುವ ಸರಕಾರಿ ಕಾಂಕ್ರಿಟ್ ರಸ್ತೆಯನ್ನು ಮಣ್ಣು ಸುರಿದು ಮುಚ್ಚಲಾಗಿದೆ ಎಂದು ಗ್ರಾಮಸ್ಥರು ದೂರಿದ್ದಾರೆ.

ಗುರುಪುರ ವರ್ಧಮಾನ ದುರ್ಗಾಪ್ರಸಾದ್ ಶೆಟ್ಟಿ ಎಂಬವರು ಮಂಗಳೂರು- ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿರುವ ಫಲ್ಗುಣಿ ನದಿಯ ದಡದಲ್ಲಿ ಸರಕಾರಿ ನಿವೇಶನವನ್ನು ಅಕ್ರಮವಾಗಿ ಬಳಸಿಕೊಂಡು ಸ್ನಾನಗೃಹ, ಉದ್ಯಾನವನ, ಅತಿಥಿ ಗೃಹಗಳನ್ನು ನಿರ್ಮಿಸಿದ್ದಾರೆ. ಇದರ ಜೊತೆಗೆ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ ಮಹಾಕಾಳೇಶ್ವರನ ಏಕಶಿಲಾ ಪ್ರತಿಮೆಯನ್ನು ನಿರ್ಮಿಸುತ್ತಿದ್ದಾರೆ. ಇದಕ್ಕಾಗಿ ಬಂಡಸಾಲೆಯಿಂದ ಕಾರಮೊಗೇರುವಿಗೆ ಹೋಗುವ ಸರಕಾರದ ಅನುದಾನದಲ್ಲಿ ನಿರ್ಮಿಸಲಾಗಿರುವ ಕಾಂಕ್ರಿಟ್ ರಸ್ತೆಯನ್ನು ಮುಚ್ಚಿದ್ದಾರೆ ಎಂದು ಗುರಪುರ ಮೂಳೂರು ಗ್ರಾಮಸ್ಥರು ದೂರಿದ್ದಾರೆ.

ಧಾರ್ಮಿಕ ಕ್ಷೇತ್ರಗಳಾದ ಕೊರದಬ್ಬು, ಕಲ್ಲುರ್ಟಿ ದೈವಸ್ಥಾನ, ಶ್ರೀ ಅಗ್ನಿದುರ್ಗಾ ಗೋಪಾಲಕೃಷ್ಣ ದೇವಸ್ಥಾನ ಮತ್ತು ನಾಗಬನಗಳು ಇದೇ ರಸ್ತೆಯಾಗಿ ಇವೆ. ರಸ್ತೆ ಮುಚ್ಚಿರುವುದರಿಂದ ಇಲ್ಲಿನ ಧಾರ್ಮಿಕ ಕಾರ್ಯಗಳಿಗೂ ತೊಡಕುಂಟಾಗುತ್ತಿದೆ ಎಂದು ಗ್ರಾಮಸ್ಥರು ಅಸಹಾಯಕತೆ ವ್ಯಕ್ತಪಡಿಸಿದ್ದಾರೆ.

ಈ ಭಾಗದ ಜನರು ಸದ್ಯ ಬಂಡಸಾಲೆಯಿಂದ ನೇರವಾಗಿ ಕಾರಮೊಗೇರುವಿಗೆ ತೆರಳುತ್ತಿದ್ದರು. ಈ ರಸ್ತೆ ಯನ್ನು ದುರ್ಗಾ ಪ್ರಸಾದ್ ಶೆಟ್ಟಿ ಭಾರೀ ಪ್ರಮಾಣದಲ್ಲಿ ಮಣ್ಣು ಸೇರಿದು ಮುಚ್ಚಿರುವುದರಿಂದ ಈ ಭಾಗದ ಸುಮಾರು 10 ಮನೆಗಳ ನಿವಾಸಿಗಳು ರಾಷ್ಟ್ರೀಯ ಹೆದ್ದಾರಿಯಾಗಿ ಪರಾರಿ ಮೂಲಕ ಸುಮಾರು 4-5 ಕಿ.ಮೀ. ಸುತ್ತುವರಿದು ಗ್ರಾಮ ಸೇರಬೇಕಾದ ಪರಿಸ್ಥಿತಿ ಎದುರಾಗಿದೆ. ಇದರಿಂದಾಗಿ ಗ್ರಾಮದಲ್ಲಿರುವ ಹಿರಿಯರು, ಅನಾರೋಗ್ಯಪೀಡಿತರು ಮತ್ತು ತುರ್ತು ಸಂದರ್ಭಗಳಲ್ಲಿ ನಾವು ಸಂಕಷ್ಟಕ್ಕೆ ಸಿಲುಕುವಂತಾ ಗಿದೆ ಎಂದು ಗ್ರಾಮಸ್ಥರು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಸರಕಾರಿ ನಿವೇಶನದಲ್ಲಿ ಅಕ್ರಮವಾಗಿ ನಿರ್ಮಿಸಿರುವ ಮಹಾಕಾಳೇಶ್ವರನ ಅಕ್ರಮ ಪ್ರತಿಮೆಯ ಪ್ರತಿಷ್ಠಾಪನೆ ಮೇ 15ರಿಂದ ಆರಂಭಗೊಳ್ಳಲಿದೆ. ಈ ಪ್ರತಿಮೆ ನಿರ್ಮಾಣಕ್ಕಾಗಿ ಗುರುಪುರ ಗ್ರಾಮ ಪಂಚಾಯತ್‌ನಿಂದ ಯಾವುದೇ ಪರವಾನಿಗೆ ಪಡೆದುಕೊಂಡಿಲ್ಲ ಎಂದು ದೂರುವ ಗ್ರಾಮಸ್ಥರು, ಈ ಸಂಬಂಧ ಹಲವು ಬಾರಿ ಸಂಬಂಧಪಟ್ಟ ಸರಕಾರಿ ಅಧಿಕಾರಿಗಳಿಗೆ ದೂರು ನೀಡಿದ್ದರೂ ಪ್ರಯೋಜನ ವಾಗಿಲ್ಲ. ಹಾಗಾಗಿ, ಗ್ರಾಮಸ್ಥರಿಗೆ ಅನ್ಯಾಯ ಎಸಗುತ್ತಾ ಸರಕಾರಿ ಜಮೀನನ್ನು ಒತ್ತುವರಿ ಮಾಡಿ ಅಕ್ರಮವಾಗಿ ನಿರ್ಮಿಸಿರುವ ಎಲ್ಲಾ ಕಟ್ಟಡಗಳು, ಮೂರ್ತಿಯನ್ನು ತೆರವುಗೊಳಿಸಿ ನಿವೇಶನವನ್ನು ಜಿಲ್ಲಾಡಳಿತ ತನ್ನ ಸುಪರ್ದಿಗೆ ಪಡೆದುಕೊಳ್ಳಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

"ಕಾಂಕ್ರಿಟ್ ರಸ್ತೆಗೆ ಮಣ್ಣು ಸುರಿದು ಮುಚ್ಚಲಾಗಿದೆ. ಜಿಲ್ಲಾಡಳಿತ ಶೀಘ್ರ ಕ್ರಮ ಕೈಗೊಂಡು ಗ್ರಾಮಸ್ಥರ ಸಹಾಯಕ್ಕೆ ಧಾವಿಸಬೇಕು:

- ಹರಿಪ್ರಸಾದ್ ರೈ, ಮೂಳೂರು ಗ್ರಾಮಸ್ಥ

"ಮುಚ್ಚಿರುವ ಬಂಡಸಾಲೆ- ಕಾರಮೊಗೇರು ರಸ್ತೆಯನ್ನು ಸಂಚಾರಕ್ಕೆ ಮುಕ್ತಗೊಳಿಸಬೇಕು. ಪೊಲೀಸ್ ರಕ್ಷಣೆ ಪಡೆದು ಅಕ್ರಮ ಕಟ್ಟಡಗಳನ್ನು ತೆರವು ಮಾಡಬೇಕು. ಇಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು, ದೇವಸ್ಥಾನ, ದೈವಸ್ಥಾನಕ್ಕೆ ಬರುವ ಭಕ್ತಾದಿಗಳ ಭಾವನೆಗೆ ಧಕ್ಕೆಯಾಗದಂತೆ ರಸ್ತೆ ವ್ಯವಸ್ಥೆ ಮಾಡಿಕೊಡ ಬೇಕು. ದುರ್ಗಾ ಪ್ರಸಾದ್ ಶೆಟ್ಟಿ ಗ್ರಾಮಸ್ಥರ ಮೇಲೆ ನಡೆಸುತ್ತಿರುವ ಅನ್ಯಾಯಗಳಿಗೆ ಜಿಲ್ಲಾಡಳಿತ ತಕ್ಷಣಕ್ಕೆ ಕಡಿವಾಣ ಹಾಕಬೇಕು. ಇಲ್ಲದಿದ್ದಲ್ಲಿ ಗ್ರಾಮಸ್ಥರರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಎದುರು ನಿರಂತರ ಪ್ರತಿಭಟನೆಗಳನ್ನು ಹಮ್ಮಿಕೊಳ್ಳಲಾಗುವುದು".

- ಪ್ರೀತಮ್ ಗುರುಪುರ, ಗ್ರಾಮಸ್ಥ

ಗುರುಪುರ ಮೂಳೂರು ಫಲ್ಗುಣಿ ನದಿ ದಡದಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಹಲವು ಬಾರಿ ಸಂಬಂಧ ಪಟ್ಟ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿ ರುವ ಗ್ರಾಮಸ್ಥರು, ಈ ಸಂಬಂಧ ಪ್ರಧಾನ ಮಂತ್ರಿಗೆ ಲಿಖಿತ ದೂರು ಸಲ್ಲಿಸಲಾಗಿದೆ. ಅದರ ಪ್ರತಿಯನ್ನು ದ.ಕ. ಸಂಸದ ಬ್ರಿಜೇಶ್ ಚೌಟರಿಗೂ ರವಾನಿಸಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ ಎಂದು ತಿಳಿದು ಬಂದಿದೆ.

"ಗುರುಪುರ ಗ್ರಾಪಂ ಪ್ರದೇಶದಲ್ಲಿ ನಡೆದಿರುವ ಘಟನೆಗಳ ಕುರಿತು ಕಂದಾಯ ನಿರೀಕ್ಷಕರಿಂದ ವರದಿ ಪಡೆದು ಕೊಂಡು ಸರ್ವೆಗೆ ಸೂಚನೆ ನೀಡಿದ್ದೇವೆ. ಸರ್ವೇಯ ವರದಿ ಬಂದ ಬಳಿಕ ಅದರಂತೆ ಕ್ರಮ ಜರುಗಿಸಲಾಗುವುದು".

- ಪ್ರಶಾಂತ್ ಪಾಟೀಲ್, ತಹಶೀಲ್ದಾರ್, ಮಂಗಳೂರು

share
ವಾರ್ತಾಭಾರತಿ
ವಾರ್ತಾಭಾರತಿ
Next Story
X