Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಪೇರಡ್ಕ: ಮಾದಕ ವ್ಯಸನ ವಿರುದ್ಧ ಅಭಿಯಾನ

ಪೇರಡ್ಕ: ಮಾದಕ ವ್ಯಸನ ವಿರುದ್ಧ ಅಭಿಯಾನ

ವಾರ್ತಾಭಾರತಿವಾರ್ತಾಭಾರತಿ18 May 2025 8:22 PM IST
share
ಪೇರಡ್ಕ: ಮಾದಕ ವ್ಯಸನ ವಿರುದ್ಧ ಅಭಿಯಾನ

ಮಂಗಳೂರು: ಸಮಾಜವನ್ನು ಮಾರಕವಾಗಿ ಬಾಧಿಸುತ್ತಿರುವ ಮಾದಕ ವ್ಯಸನದ ವಿರುದ್ಧ ಸಮಸ್ತ ಕೇರಳ ಇಸ್ಲಾಂ ಮತ ವಿದ್ಯಾಭ್ಯಾಸ ಬೋರ್ಡ್ ಹಮ್ಮಿಕೊಂಡಿರುವ ಅಭಿಯಾನದ ಅಂಗವಾಗಿ ಪೇರಡ್ಕ ತೆಕ್ಕಿಲ್ ಮುಹಮ್ಮದ್ ಹಾಜಿ ಮೆಮೊರಿಯಲ್ ತಖ್ವಿಯತುಲ್ ಇಸ್ಲಾಂ ಮದ್ರಸಾ ಮತ್ತು ಹಯಾತುಲ್ ಇಸ್ಲಾಂ ಮದ್ರಸಾ ಗೂನಡ್ಕ ಇದರ ವಠಾರದಲ್ಲಿ ವಿದ್ಯಾರ್ಥಿಗಳ ವಿಶೇಷ ಅಸೆಂಬ್ಲಿ, ಪ್ರತಿಜ್ಞಾ ಸ್ವೀಕಾರ ಮತ್ತು ಮಾದಕ ದ್ರವ್ಯಗಳ ಸಂಪೂರ್ಣ ನಿಷೇಧಕ್ಕೆ ಆಗ್ರಹಿಸಿ ಮುಖ್ಯಮಂತ್ರಿಗೆ ಸಲ್ಲಿಸುವ ಮನವಿ ಪತ್ರಕ್ಕೆ ಸಹಿ ಸಂಗ್ರಹ ಕಾರ್ಯಕ್ರಮವು ನಡೆಯಿತು.

ಸ್ಥಳೀಯ ಖತೀಬ್ ಅಹ್ಮದ್ ನಈಂ ಫೈಝಿ ಅಲ್ ಮಅಬರಿ ಜನಜಾಗೃತಿ ಸಂದೇಶ ನೀಡಿ, ಮಾದಕ ವಸ್ತುಗಳ ಬಳಕೆಯು ಮಾನವನ ಬದುಕಿನ ಅತಿ ದೊಡ್ಡ ದುರಂತವಾಗಿದೆ. ಇದಕ್ಕೆ ಬಲಿಯಾಗುವವರಲ್ಲಿ ಮಾನವೀಯತೆಯು ಇಲ್ಲವಾಗಿ ಮೃಗೀಯತೆ ಮೇಳೈಸುವುದರಿಂದ ಅವರು ಕುಟುಂಬಕ್ಕೂ ,ಸಮಾಜಕ್ಕೂ ,ದೇಶಕ್ಕೂ ಮಾರಕವಾಗಿ ಮಾರ್ಪಡುತ್ತಾರೆ. ಇಸ್ಲಾಮಿನಲ್ಲಿ ಮಾದಕ ವಸ್ತುಗಳ ಬಳಕೆಯನ್ನು ಕಠಿಣವಾಗಿ ನಿಷೇಧಿಸಿದ್ದು, ಈ ವಸ್ತುಗಳ ಉಪಯೋಗ, ಸಾಗಾಣಿಕೆ ಮತ್ತು ಇವುಗಳಿಗೆ ಸಹಕಾರ ನೀಡುವುದು ದೇಶದ ಕಾನೂನಿಗೂ ವಿರುದ್ಧವಾಗಿದ್ದು ವಿದ್ಯಾರ್ಥಿಗಳು ಎಚ್ಚರವಹಿಸಬೇಕು ಎಂದು ಕರೆ ನೀಡಿದರು.

ಸಂಪಾಜೆ ಗ್ರಾಮ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷ ಜಿ.ಕೆ ಹಮೀದ್ ಗೂನಡ್ಕ ಕಾರ್ಯಕ್ರಮಕ್ಕೆ ಶುಭ ಹಾರೈಸಿ ಮಾತನಾಡಿ, ಮಾದಕ ವ್ಯಸನವೆಂಬ ವಿಪತ್ತನ್ನು ತೊಡೆದು ಹಾಕಲು ವಿದ್ಯಾರ್ಥಿಗಳು ಸನ್ನದ್ಧ ರಾಗಬೇಕು, ವಿವಿಧ ರೂಪದಲ್ಲಿ ನಮ್ಮ ಬಳಿಗೆ ತಲುಪುವ ಮಾದಕ ವಸ್ತುಗಳನ್ನು ಯಾವುದೇ ಆಮಿಷಕ್ಕೆ ಬಲಿಯಾಗದೆ ದೂರವಿಡಬೇಕು ಎಂದರು.

ಕಾರ್ಯದರ್ಶಿ ಕೆ.ಎಂ ಉಸ್ಮಾನ್ ಅರಂತೋಡು ಮಾತನಾಡಿ, ಅಮಲು ಪದಾರ್ಥಗಳ ಬಗ್ಗೆ ವಿದ್ಯಾರ್ಥಿ ಗಳು ಜಾಗರೂಕರಾಗಬೇಕು ಎಂದು ಕರೆ ನೀಡಿದರು.

ಪಿಡುಗನ್ನು ತೊಡೆದು ಹಾಕುವ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮಾದಕ ಪದಾರ್ಥಗಳನ್ನು ಸಂಪೂರ್ಣವಾಗಿ ನಿಷೇಧಿಸುವ ಬಗ್ಗೆ ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಮನವಿ ಪತ್ರಕ್ಕೆ ವಿದ್ಯಾರ್ಥಿಗಳಿಂದ ಸಹಿ ಸಂಗ್ರಹಣೆ ಮಾಡಲಾಯಿತು.

ಮದ್ರಸಾ ಸಹ ಅಧ್ಯಾಪಕರಾದ ಹಾರಿಸ್ ಕಾಮಿಲ್ ಅಝ್ಹರಿ ಮತ್ತು ಶಾಕಿರ್ ಮುಸ್ಲಿಯಾರ್ ಪೋಳ್ಯ, ಜಮಾಅತ್ ಉಪಾಧ್ಯಕ್ಷ ಹನೀಫ್ ಟಿ.ಬಿ, ಎಸ್‌ಕೆಎಸ್‌ಎಸ್‌ಎಫ್ ಗೂನಡ್ಕ ಶಾಖೆ ಅಧ್ಯಕ್ಷ ಮುನೀರ್ ದಾರಿಮಿ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X