Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ತಂದೆಯನ್ನು ನೆನೆದು ಭಾವುಕರಾದ ಸ್ಪೀಕರ್...

ತಂದೆಯನ್ನು ನೆನೆದು ಭಾವುಕರಾದ ಸ್ಪೀಕರ್ ಯು.ಟಿ ಖಾದರ್ ಫರೀದ್

ದ.ಕ. ಜಿಲ್ಲಾ ವಕ್ಫ್ ಸಲಹಾ ಸಮಿತಿಯಿಂದ ಬೀಳ್ಕೊಡುಗೆ

ವಾರ್ತಾಭಾರತಿವಾರ್ತಾಭಾರತಿ19 May 2025 7:30 PM IST
share
ತಂದೆಯನ್ನು ನೆನೆದು ಭಾವುಕರಾದ ಸ್ಪೀಕರ್ ಯು.ಟಿ ಖಾದರ್ ಫರೀದ್

ಮಂಗಳೂರು, ಮೇ 19: ಪವಿತ್ರ ಹಜ್ ಯಾತ್ರೆಗೆ ಹೊರಡಲಿರುವ ಸ್ಪೀಕರ್ ಯು.ಟಿ.ಖಾದರ್ ಅವರನ್ನು ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ವತಿಯಿಂದ ಸೋಮವಾರ ನಗರದ ಖಾಸಗಿ ಹೊಟೇಲಿನ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬೀಳ್ಕೊಡಲಾಯಿತು.

ಈ ಸಂದರ್ಭ ಸ್ಪೀಕರ್ ಯು.ಟಿ.ಖಾದರ್ ತನ್ನ ತಂದೆ ಮಾಜಿ ಶಾಸಕ ಯು.ಟಿ.ಫರೀದ್ ಅವರನ್ನು ನೆನೆದು ಭಾವುಕರಾದರು.


ಉಳ್ಳಾಲದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾದರೂ ಕೂಡ ಅವರೆಂದೂ ಕೂಡ ಹೊರ ರಾಜ್ಯ, ವಿದೇಶವನ್ನು ಸುತ್ತಾಡಿದವರಲ್ಲ. ಕ್ಷೇತ್ರದ ಜನತೆಗಾಗಿ ಹೆಚ್ಚಿನ ಸಮಯ ಮೀಸಲಿಟ್ಟಿದ್ದರು. ಪವಿತ್ರ ಹಜ್ ಯಾತ್ರೆ ಮಾಡುವ ಇಚ್ಛೆ ವ್ಯಕ್ತಪಡಿಸಿದ್ದರೂ ಕೂಡ ಕೊನೆಯ ಘಳಿಗೆಯಲ್ಲಿ ಅವರಿಗೆ ಆರೋಗ್ಯ ಸಮಸ್ಯೆ ಕಾಡಿದ ಕಾರಣ ಅದೂ ಈಡೇರಲಿಲ್ಲ ಎಂದು ಯು.ಟಿ.ಖಾದರ್ ಹೇಳಿದರು.

ನಾನು ಯಾವ ಸ್ಥಾನಮಾನವನ್ನೂ ಆಶಿಸಿದವನಲ್ಲ. ಶಾಸಕ ಸ್ಥಾನಕ್ಕೆ ಸ್ಪರ್ಧಿಸಲು, ಮಂತ್ರಿಯಾಗಲು ಯಾರದೇ ಶಿಫಾರಸು ಮಾಡಿಸಿದವನಲ್ಲ. ನಿಮ್ಮೆಲ್ಲರ ದುಆ, ಆಶೀರ್ವಾದವೇ ನನ್ನನ್ನು ಈ ಹಂತಕ್ಕೆ ತಲುಪಿಸಿದೆ. ನನ್ನ ಈವರೆಗಿನ ಬದುಕು ನೆಮ್ಮದಿಯಿಂದ ಕೂಡಿದೆ. ಹಜ್ ಯಾತ್ರೆಯ ಪವಿತ್ರವಾದುದು. ಅದು ಎಲ್ಲರಿಗೂ ದಕ್ಕುವಂತದ್ದಲ್ಲ. ಹಣವಿದ್ದೂ ಹಜ್ ಯಾತ್ರೆ ಮಾಡಲಾಗದವರು ಇದ್ದಾರೆ. ಹಣವಿಲ್ಲದವರಿಗೆ ಕೂಡ ಈ ಸೌಭಾಗ್ಯ ದಕ್ಕಿದೆ. ನಾನು ಹಜ್ ಯಾತ್ರೆ ಮಾಡಲು ಯಾವುದೇ ಪೂರ್ವ ಸಿದ್ಧತೆ ಮಾಡಿದವನಲ್ಲ. ಅನಿರೀಕ್ಷಿತವಾಗಿ ತನಗೆ ಮತ್ತು ತನ್ನ ಸಹೋದರ ಇಫ್ತಿಕಾರ್ ಹಾಗೂ ಕುಟುಂಬದ ಸದಸ್ಯರಿಗೆ ಈ ಅವಕಾಶ ಲಭಿಸಿದೆ. ಇದು ಅಲ್ಲಾಹನ ಅನುಗ್ರಹವಾಗಿದೆ. ನನಗಾಗಿ ನೀವು ಪ್ರಾರ್ಥಿಸಬೇಕು. ನಿಮ್ಮ ದುಆ, ನಮ್ಮ ರಕ್ಷಣೆಯಾಗಿದೆ. ನಾಡಿನ, ಸಮುದಾಯದ ಹಿತಕ್ಕಾಗಿ ನಾನು ಅಲ್ಲಿ ಪ್ರಾರ್ಥಿಸುವೆ. ಈ ಸಾರ್ವಜನಿಕ ರಂಗದಲ್ಲಿ, ನಿಮ್ಮೊಂದಿಗಿನ ನನ್ನ ಒಡನಾಟದಲ್ಲಿ ಏನಾದರು ತಪ್ಪಾಗಿದ್ದರೆ, ಮನಸ್ಸಿಗೆ ನೋವಾಗಿದ್ದರೆ ಕ್ಷಮಿಸಿರಿ ಎಂದು ಯು.ಟಿ.ಖಾದರ್ ನುಡಿದರು.


ಈ ಸಂದರ್ಭ ಹಜ್ ಯಾತ್ರೆಗೈಯಲಿರುವ ದಿ ನ್ಯಾಷನಲ್ ಕಮಿಷನ್ ಫಾರ್ ಅಲ್ಲೈಡ್ ಆ್ಯಂಡ್ ಹೆಲ್ತ್‌ಕೇರ್ ಕರ್ನಾಟಕ ರಾಜ್ಯಾಧ್ಯಕ್ಷ ಯು.ಟಿ. ಇಫ್ತಿಕಾರ್ ಅಲಿ ಅವರನ್ನು ಕೂಡ ಬೀಳ್ಗೊಡಲಾಯಿತು. ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಯಾಕೂಬ್ ಸಅದಿ ನಾವೂರು ದುಆಗೈದರು. ಅಬ್ದುಲ್ ಖಾದರ್ ದಾರಿಮಿ ಕುಕ್ಕಿಲ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.


ಯೆನೆಪೊಯ ವಿವಿಯ ಕುಲಾಧಿಪತಿ ಡಾ.ವೈ.ಅಬ್ದುಲ್ಲಾ ಕುಂಞಿ, ದ.ಕ.ಜಿಲ್ಲಾ ವಕ್ಫ್ ಸಲಹಾ ಸಮಿತಿಯ ಮಾಜಿ ಅಧ್ಯಕ್ಷ ಎಸ್.ಎಂ. ರಶೀದ್ ಹಾಜಿ, ದ.ಕ.ಜಿಪಂ ಮಾಜಿ ಉಪಾಧ್ಯಕ್ಷ ಎಂ.ಎಸ್.ಮುಹಮ್ಮದ್ ಶುಭ ಹಾರೈಸಿದರು.

ವೇದಿಕೆಯಲ್ಲಿ ದಿ ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷ ಅಲ್ಹಾಜ್ ಕೆ.ಎಸ್.ಮುಹಮ್ಮದ್ ಮಸೂದ್, ಸುಳ್ಯ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮುಸ್ತಫಾ ಸುಳ್ಯ, ಉಳ್ಳಾಲ ದರ್ಗಾದ ಅಧ್ಯಕ್ಷ ಬಿ.ಜಿ. ಹನೀಫ್ ಹಾಜಿ, ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು. ಸೈದುದ್ದೀನ್ ಬಜ್ಪೆ ಕಾರ್ಯಕ್ರಮ ನಿರೂಪಿಸಿದರು.


















share
ವಾರ್ತಾಭಾರತಿ
ವಾರ್ತಾಭಾರತಿ
Next Story
X