Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಹೊಟೇಲ್ ಮಾಲಕ, ಇಬ್ಬರು ಸಹೋದರರಿಗೆ...

ಹೊಟೇಲ್ ಮಾಲಕ, ಇಬ್ಬರು ಸಹೋದರರಿಗೆ ತಂಡದಿಂದ ಹಲ್ಲೆ: ಪ್ರಕರಣ ದಾಖಲು

ವಾರ್ತಾಭಾರತಿವಾರ್ತಾಭಾರತಿ4 Jun 2025 9:30 PM IST
share
ಹೊಟೇಲ್ ಮಾಲಕ, ಇಬ್ಬರು ಸಹೋದರರಿಗೆ ತಂಡದಿಂದ ಹಲ್ಲೆ: ಪ್ರಕರಣ ದಾಖಲು

ಉಳ್ಳಾಲ: ಫಾಸ್ಟ್ ಫುಡ್ ತಿಂದು ಬಿಲ್ ಕೊಡುವ ವಿಚಾರದಲ್ಲಿ ತಗಾದೆ ತೆಗೆದ ಮೂವರು ಕಿಡಿಗೇಡಿ ಯುವಕರು ಹೊಟೇಲ್ ಮಾಲಕ ಮತ್ತು ಆತನ ಸಹೋದರರಿಬ್ಬರಿಗೆ ಹಲ್ಲೆಗೈದು ಚೂರಿಯಿಂದ ಇರಿಯಲೆತ್ನಿಸಿದ ಘಟನೆ ಅಂಬಿಕಾರೋಡ್ ಗಟ್ಟಿ ಸಮಾಜದ ಬಳಿ ಇರುವ ಟಿಕ್ಕ ಪಾಯಿಂಟ್ ನಲ್ಲಿ ಮಂಗಳವಾರ ರಾತ್ರಿ ನಡೆದಿದೆ.

ಟಿಕ್ಕ ಪಾಯಿಂಟ್ ಮಾಲಕ ಅಬ್ದುಲ್ ಆಸಿಫ್ ಮತ್ತು ಅವರ ಸಹೋದರ ಅಬ್ದುಲ್ ರಶೀದ್ ಹಲ್ಲೆಗೊಳಗಾಗಿದ್ದು, ಮತ್ತೋರ್ವ ಸಹೋದರ ಬಶೀರ್ ಅವರಿಗೆ ಕತ್ತಿಯಿಂದ‌ ಇರಿಯಲ್ಪಟ್ಟ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಸಿಫ್ ಅವರು ಅಂಬಿಕಾರೋಡ್ ಗಟ್ಟಿ ಸಮಾಜದ ಎದುರಿನ ಹೆದ್ದಾರಿ ಅಂಚಿನಲ್ಲಿ ಸಹೋದರರಾದ ಅಬ್ದುಲ್ ರಶೀದ್ ಮತ್ತು ಬಶೀರ್ ಜೊತೆಗೂಡಿ ಟಿಕ್ಕ ಪಾಯಿಂಟ್ ಎಂಬ ಫಾಸ್ಟ್ ಫುಡ್ ವ್ಯವಹಾರ ನಡೆಸುತ್ತಿದ್ದರು. ಮಂಗಳವಾರ ರಾತ್ರಿ 10.30 ರ ವೇಳೆ ಫಾಸ್ಟ್ ಫುಡ್ ಅಂಗಡಿಗೆ ಆಸಿಫ್ ಅವರ ಪರಿಚಯಸ್ಥರೇ ಆಗಿರುವ ಮುಝಾಂಬಿಲ್, ನಿಸಾರ್ ಮತ್ತು ಸವಾದ್ ಎಂಬ ಮೂವರು ಯುವಕರು ಬಂದಿದ್ದರು. ಫಾಸ್ಟ್ ಫುಡ್ ಸೇವಿಸಿದ ಬಳಿಕ ಬಿಲ್ ಕೊಡೋ ವಿಚಾರದಲ್ಲಿ ಅಂಗಡಿ‌ ಮಾಲಕ ಆಸಿಫ್ ಅವರಲ್ಲಿ ಈ ಮೂವರು ತಗಾದೆಯೆತ್ತಿ ಹಲ್ಲೆ ನಡೆಸಿದ್ದಾರೆ. ಮೊದಲಿಗೆ ಆಸಿಫ್ ಅವರ ಅಣ್ಣ ರಶೀದ್ ಅವರ ಮೇಲೆ ಹಲ್ಲೆ ನಡೆಸಿದ್ದು, ಗಲಾಟೆ ತಡೆಯಲು ಬಂದ ಸಹೋದರ ಬಶೀರ್ ಅವರ ಮೇಲೂ ಹಲ್ಲೆಗೈದ ಆರೋಪಿಗಳು ಚಾಕುವಿನಿಂದ ಹೊಟ್ಟೆಗೆ ಇರಿಯಲೆತ್ನಿಸಿದ್ದಾರೆ. ಇದರಿಂದ ಅವರ ಕಿವಿ, ಕೆನ್ನೆ, ಕೈ, ಕಾಲು ಮತ್ತು ಬೆನ್ನಿಗೆ ಕತ್ತಿಯಿಂದ ಇರಿದ ಗಾಯಗಳಾಗಿವೆ. ಈ ವೇಳೆ ಜನ ಜಮಾಯಿಸುತ್ತಿರುವುದನ್ನು ಗಮನಿಸಿದ ಆರೋಪಿಗಳು ಪರಾರಿಯಾಗಿದ್ದಾರೆಂದು ದೂರಲಾಗಿದೆ.

ಈ ಘಟನೆ ಯಿಂದ ಗಾಯಗೊಂಡ ಬಶೀರ್ ಅವರು ದೇರಳಕಟ್ಟೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಫಾಸ್ಟ್ ಫುಡ್ ಮಾಲಕ ಆಸಿಫ್ ನೀಡಿದ ದೂರಿನಂತೆ ಉಳ್ಳಾಲ ಪೊಲೀಸರು ಪ್ರಕರಣ ದಾಖಲಿಸಿದ್ದು ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X