Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ರಾಷ್ಟ್ರ, ಅಂತಾರಾಷ್ಟ್ರೀಯ ಈಜು ಪಟುಗಳಿಗೆ...

ರಾಷ್ಟ್ರ, ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತ; ತರಬೇತಿಗೆ ಮಾತ್ರವೇ ಶುಲ್ಕ: ಎಮ್ಮೆಕೆರೆ ಈಜುಕೊಳ ನಿರ್ದೇಶಕ

ವಾರ್ತಾಭಾರತಿವಾರ್ತಾಭಾರತಿ6 Jun 2025 5:26 PM IST
share
ರಾಷ್ಟ್ರ, ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತ; ತರಬೇತಿಗೆ ಮಾತ್ರವೇ ಶುಲ್ಕ: ಎಮ್ಮೆಕೆರೆ ಈಜುಕೊಳ ನಿರ್ದೇಶಕ

ಮಂಗಳೂರು: ಎಮ್ಮೆಕೆರೆ ಈಜುಕೊಳದಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಈಜು ಪಟುಗಳಿಗೆ ಪ್ರವೇಶ ಉಚಿತವಾಗಿಯೇ ನೀಡಲಾಗುತ್ತದೆ. ಈಜುಕೊಳದಲ್ಲಿ ಉತ್ತಮ ಗುಣಮಟ್ಟದ ತರಬೇತಿಗಾಗಿ ಎನ್.ಐ.ಎಸ್. ಶಿಕ್ಷಣ ಹೊಂದಿರುವ ವಿಶ್ವಾಮಿತ್ರ ಪ್ರಶಸ್ತಿ ಪಡೆದ ತರಬೇತುದಾರರನ್ನು ನೇಮಕ ಮಾಡಲಾಗಿದ್ದು, ಆ ಹಿನ್ನೆಲೆಯಲ್ಲಿ ತರಬೇತಿಗೆ ಮಾತ್ರ ಈ ಈಜುಪಟುಗಳಿಂದ ಶುಲ್ಕ ಪಡೆಯಲಾಗುತ್ತದೆ ಎಂದು ಎಮ್ಮೆಕೆರೆ ಈಜುಕೊಳದ ನಿರ್ದೇಶಕ ನವೀನ್ ಪ್ರತಿಕ್ರಿಯಿಸಿದ್ದಾರೆ.

ಎಮ್ಮೆಕೆರೆ ಈಜುಕೊಳದ ಕುರಿತಂತೆ ದ.ಕ. ಈಜು ಸಂಸ್ಥೆಯು ಮಾಡಿರುವ ಆರೋಪಕ್ಕೆ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಅವರು ಈ ಪ್ರತಿಕ್ರಿಯೆ ನೀಡಿದರು.

ಈಜುಕೊಳದಲ್ಲಿ ಸಾರ್ವಜನಿಕರಿಗೆ, ಮಕ್ಕಳಿಗೆ ಹಾಗೂ ಕ್ರೀಡಾಪಟುಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಒಟ್ಟು 80 ಮಂದಿ ಈಜುಪಟುಗಳು ಎಮ್ಮೆಕೆರೆಯಲ್ಲಿ ಸದ್ಯ ತರಬೇತು ಪಡೆಯುತ್ತಿದ್ದಾರೆ. ಈಜು ಗೊತ್ತಿಲ್ಲದ ವರಿಗೆ ಈಜು ಕಲಿಸಲು ಹಾಗೂ ಕ್ರೀಡಾಪಟುಗಳಿಗೆ ತರಬೇತಿ ನೀಡುವ ಉದ್ದೇಶದಿಂದ ಲೆವೆಲ್ 1ರಿಂದ ಲೆವೆಲ್ 7ರವರೆಗೆ ತರಬೇತಿ ನೀಡುವ ಎನ್‌ಐಎಸ್ ತರಬೇತುದಾರರನ್ನು ನಿಯೋಜಿಸಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳ ನಿರ್ವಹಣೆಗಾಗಿ ಮುಚ್ಚಲ್ಪಟ್ಟಾಗ ಮಂಗಳ ಸ್ವಿಮ್ಮಿಂಗ್ ಕ್ಲಬ್ ಹಾಗೂ ಜೈಹಿಂದ್ ಕ್ಲಬ್‌ಗೆ ತರಬೇತಿ ನೀಡಲು ತಾತ್ಕಾಲಿಕವಾಗಿ ಅವಕಾಶ ನೀಡಲಾಗಿತ್ತು. ಮತ್ತೆ ಮನಪಾ ಈಜುಕೊಳ ಆರಂಭಗೊಂಡಾಗ ಜೈಹಿದ್ ಕ್ಲಬ್‌ನವರು ಅಲ್ಲಿಗೆ ತೆರಳಿದ್ದರು. ಮಂಗಳ ಸ್ವಿಮ್ಮಿಂಗ್ ಕ್ಲಬ್‌ನವರು ಇಲ್ಲಿಯೇ ಅವಕಾಶ ವಿನಂತಿಸಿದ್ದರು. ಅದಕ್ಕೆ ಸಂಜೆ 6.30ರಿಂದ 8ರವರೆಗೆ ಅವಕಾಶ ನೀಡ ಲಾಗಿದೆ. ಸಮಯ ಮೀರಿ ತರಬೇತಿ ನೀಡುತ್ತಿದ್ದರೂ ಆಕ್ಷೇಪಿಸಿಲ್ಲ. ಆದರೆ ತರಬೇತಿಗೆ ನಾವು ನಿಯೋಜಿಸಿರುವ ಎನ್‌ಐಎಸ್ ತರಬೇತುದಾರರು ತಾಂತ್ರಿಕ ಕಾರಣದಿಂದ ಸಮಯ ಬದಲಾವಣೆಗೆ ಒಪ್ಪದಾಗ ಅವರು ಮತ್ತೆ ಮನಪಾ ಈಜುಕೊಳಕ್ಕೆ ಹೋಗುತ್ತೇವೆ ಎಂದಿದ್ದರು. ಬಳಿಕ ದ.ಕ. ಸ್ವಿಮ್ಮಿಂಗ್ ಅಸೋಶಿಯಶನ್ ಮೂಲಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳಿಗೆ ತಮ್ಮ ಮಕ್ಕಳಿಗೆ ಉಚಿತ ಪ್ರವೇಶ ಹಾಗೂ ತರಬೇತುದಾರರಿಗೆ ತರಬೇತು ನೀಡಲು ಅವಕಾಶ ನೀಡುವಂತೆ ಒತ್ತಡ ಹಾಕಿದ್ದಾರೆ. ಅವರಿಗೆ ಪ್ರವೇಶ ಶುಲ್ಕವಾಗಿ 1000 ರೂ. ಪಡೆಯಲಾಗತ್ತಿತ್ತು. ಆದರೆ ಅವರು 3 ಸಾವಿರದಿಂದ 4 ಸಾವಿರ ರೂ.ವರೆಗೆ ಪಡೆದಿದ್ದೇವೆ ಎಂದು ಸುಳ್ಳು ಮಾಹಿತಿ ನೀಡಿದ್ದಾರೆ. ಆದರೆ ಮಂಗಳ ಸ್ವಿಮ್ಮಿಂಗ್ ಕ್ಲಬ್‌ನವರು ತಮ್ಮ ಮಕ್ಕಳಿಗೆ ಎಮ್ಮೆಕೆರೆ ಈಜುಕೊಳದಲ್ಲಿ ತರಬೇತಿಗೆ ಈಜುಪಟುಗಳಿಂದ 3 ಸಾವಿರದಿಂದ ನಾಲ್ಕು ಸಾವಿರ ರೂ. ಪಡೆಯುತ್ತಾರೆ ಎಂಬುದ್ನನು ಪೋಷಕರು ಹೇಳಿಕೊಂಡಿದ್ದರು. ಎಮ್ಮೆಕೆರೆ ಈಜು ಸಂಸ್ಥೆ ನಿರ್ವಹಣೆಗೆ ವಾರ್ಷಿಕ 11 ಲಕ್ಷ ರೂ.ವರೆಗೆ ವೆಚ್ಚವಾಗುತ್ತದೆ. ಸದ್ಯ 4 ಲಕ್ಷ ರೂ. ಶುಲ್ಕದಿಂದ ಬರುತ್ತಿದೆ. ಉಳಿದ್ದನ್ನು ಸ್ವಂತ ಹಣದಿಂದ ನಿಭಾಯಿಸುತ್ತಿದ್ದೇನೆ ಎಂದವರು ಹೇಳಿದರು.

ಸುರಕ್ಷತೆಯ ದೃಷ್ಟಿಯಿಂದ ಸ್ಮಾರ್ಟ್ ಸಿಟಿಯವರ ಗಮನಕ್ಕೆ ತಂದು ಅಭ್ಯಾಸಕೊಳದ ಆಳವನ್ನು ಕಡಿಮೆ ಮಾಡಲು ಸ್ಟೀಲ್‌ನಿಂದ ಮಾಡಿದ ಟ್ರೋಲಿ ಅಳವಡಿಸಲಾಗಿದೆ. ಇದರಿಂದ ಈಜುಕೊಳದ ವಿನ್ಯಾಸಕ್ಕೆ ಯಾವುದೇ ತೊಂದರೆಯಾಗುವುದಿಲ್ಲ. ಇದು ಚಲಿಸುವ ಮತ್ತು ತೆಗೆಯಬಹುದಾದ ಟ್ರಾಲಿ. ಚಿಂತನ್ ಎಂಬ ಈಜುಪಟುವನ್ನು ನಾವು ಹೊರಹಾಕಿಲ್ಲ. ಬದಲಾಗಿ ಆತ ಬೆಂಗಳೂರಿನ ಲಕ್ಷನ್ ಈಜು ಸಂಸ್ಥೆಗೆ ಉನ್ನತ ನಿರ್ವಹಣೆಗಾಗಿ ಸೇರಿಕೊಂಡಿದ್ದಾರೆ. ರಾಜ್ಯ ಹಾಗೂ ರಾಷ್ಟ್ರ ಮಟ್ಟದ 38 ಈಜುಪಟುಗಳನ್ನು ಹೊರ ಹಾಕಿದ್ದೇವೆ ಎಂಬ ಸುಳ್ಳು ಸುದ್ದಿಯನ್ನೂ ಹಬ್ಬಿಸಲಾಗಿದೆ. ಮಂಗಳಾ ಸ್ವಿಮ್ಮಿಂಗ್ ಕ್ಲಬ್‌ನ 14, ಜೈಹಿಂದ್‌ನ 11 ಹಾಗೂ ಪತ್ತುೂರು ಅಕ್ವಾಟಿಕ್‌ಕ್ಲಬ್‌ನ 11 ಮಂದಿ ಹಾಗೂ ಉಳಿದ ವಿ ವನ್ ಅಕ್ವಾ ಸೆಂಟರ್ ಮಕ್ಕಳ ಹೆಸರು ನೀಡಿದ್ದಾರೆ. ಆದರೆ ಎಮ್ಮೆಕೆರೆಈಜುಕೊಳ್ಳಕ್ಕೆ ಈ ಹೆಸರಿನಲ್ಲಿ ಕೇವಲ 14 ಮಕ್ಕಳು ಮಾತ್ರ ಬರುತ್ತಿದ್ದು, ಅವರಲ್ಲಿ ಕೇವಲ 9 ಮಕ್ಕಳು ಮಾತ್ರ ರಾಜ್ಯ ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದವರು ಎಂದವರು ಹೇಳಿದರು.

ಗೋಷ್ಟಿಯಲ್ಲಿ ವಿವಿಧ ಸ್ವಿಮ್ಮಿಂಗ್ ಕ್ಲಬ್‌ಗಳ ಪ್ರಮುಖರಾದ ರಾಮಕೃಷ್ಣ, ಡಾ. ನಾಗೇಂದ್ರ, ಲೋಕರಾಜ್ ವಿಟ್ಲ, ರೂಪಾ ಜಿ. ಪ್ರಭು, ಇವಾ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X