ಕಾಪು: ಯುವ ಕಾಂಗ್ರೆಸ್ ವತಿಯಿಂದ ವನಮಹೋತ್ಸವ

ಕಾಪು: ಕಾಪು ವಿಧಾನ ಸಭಾಕ್ಷೇತ್ರದ ಯುವಕಾಂಗ್ರೆಸ್ ಸಮಿತಿಯ ಸಹಯೋಗದೊಂದಿಗೆ "ವನ ಮಹೋತ್ಸವ" ಗಿಡ ನೆಡುವ ಹಾಗೂ ಗಿಡ ವಿತರಣೆ ಕಾರ್ಯಕ್ರಮವು ಯುವಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ನಿಯಾಝ್ ನೇತೃತ್ವದಲ್ಲಿ ಕಾಪು ಬ್ಲಾಕ್ ದಕ್ಷಿಣ (ರಾಜೀವವನ ಮುಂಭಾಗ) ಹಾಗೂ ಉತ್ತರ (ಹಿರಿಯಡ್ಕ) ಗಳಲ್ಲಿ ನಡೆಯಿತು.
ಈ ಸಂದರ್ಭ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ದಕ್ಷಿಣ ಅಧ್ಯಕ್ಷ ವೈ ಸುಕುಮಾರ್, ಯುವ ಕಾಂಗ್ರೆಸ್ ಉಡುಪಿ ಜಿಲ್ಲಾ ಮಾಜಿ ಉಪಾಧ್ಯಕ್ಷರಾದ ಸುನೀಲ್ ಡಿ ಬಂಗೇರ, ಯುವ ಕಾಂಗ್ರೆಸ್ ಅಧ್ಯಕ್ಷರಾದ ಶರತ್ ನಾಯ್ಕ್, ಉತ್ತರ ಯುವ ಕಾಂಗ್ರೆಸ್ ಉಪಾಧ್ಯಕ್ಷರಾದ ಕಾರ್ತಿಕ್, ನವೀನ್ ಸಾಲ್ಯಾನ್, ಪ್ರಭಾಕರ್ ಆಚಾರ್ಯ, ಲಿತೇಶ್, ಸನವರ್ ಶೇಕ್, ಅರ್ಫಾಝ್ ಎಂ ಎಸ್, ಕೀರ್ತಿ ಕುಮಾರ್, ಅಶ್ವತ್ ಆಚಾರ್ಯ, ರಿಯಾಝ್, ಸಫೀಕ್, ರಂಜಿತಾ, ರೇಸ್ಮಾ, ಹರ್ಷ ಕಾಮತ್, ಹಕೀಮ್, ರತನ್ ಕುಮಾರ್, ಉಡುಪಿ ಬ್ಲಾಕ್ ಯುವಕಾಂಗ್ರೆಸ್ನ ಅಧ್ಯಕ್ಷರಾದ ಸಜ್ಜನ್ ಶೆಟ್ಟಿ, ಉಪಾಧ್ಯಕ್ಷರಾದ ಶ್ರೇಯಾ ಪೂಜಾರಿ, ಪ್ರಧಾನ ಕಾರ್ಯ ದರ್ಶಿ ಸುವೀಜ್ ಅಂಚನ್, ಸುದೀಪ್ ಹಾಗೂ ಇನ್ನಿತರ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದರು.





