Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಷ್ಟ ಅನುಭವಿಸಿದವರಿಗೆ ಇನ್ನೊಬ್ಬರ ಕಷ್ಟದ...

ಕಷ್ಟ ಅನುಭವಿಸಿದವರಿಗೆ ಇನ್ನೊಬ್ಬರ ಕಷ್ಟದ ಅರಿವಾಗುತ್ತದೆ: ಶಾಸಕ ಅಶೋಕ್ ಕುಮಾರ್ ರೈ

ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ 'ಕ್ಲಾಸ್ ಆನ್ ವೀಲ್ಸ್'‌ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ21 Jun 2025 10:22 PM IST
share
ಕಷ್ಟ ಅನುಭವಿಸಿದವರಿಗೆ ಇನ್ನೊಬ್ಬರ ಕಷ್ಟದ ಅರಿವಾಗುತ್ತದೆ: ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಜನಸೇವೆ ಮಾಡುವುದು ಅಷ್ಟೊಂದು ಸುಲಭದ ಕೆಸಲವಲ್ಲ. ಕಷ್ಟಗಳನ್ನು ಅನುಭವಿಸಿದವರಿಗೆ ಮಾತ್ರ ಇನ್ನೊಬ್ಬರ ಕಷ್ಟಗಳ ಅರಿವಾಗುತ್ತದೆ. ಎಂ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಈ ನಿಟ್ಟಿನಲ್ಲಿ ಬಹಳ ಪ್ರಾಮಾಣಿಕವಾಗಿ ಜನಸೇವೆ ಮಾಡುತ್ತಿರುವುದು ಶ್ಲಾಘನೀಯವಾಗಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದರು.

ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು ವತಿಯಿಂದ ನಡೆಸಲ್ಪಡುವ `ಕ್ಲಾನ್ ಆನ್ ವೀಲ್ಸ್' ಗ್ರಾಮೀಣ ವಿದ್ಯಾರ್ಥಿಗಳ ಕಂಪ್ಯೂಟರ್ ಕಲಿಕಾ ಬಸ್‌ನ ಶಾಶ್ವತ ಪ್ರಾಯೋಜಕತ್ವವನ್ನು ಬಜ್ಪೆಗುತ್ತು ದಿ. ಹಾಜಿ ಬಿ ಶೇಕುಂಞ ಸ್ಮರಣಾರ್ಥ ಅವರ ಪುತ್ರ ಝಕರಿಯಾ ಜೋಕಟ್ಟೆ (ಅಲ್ ಮುಝೈನ್) ಪಡೆದುಕೊಂಡಿದ್ದು, ಈ ಕಾರ್ಯಕ್ರಮವನ್ನು ಶನಿವಾರ ಪುತ್ತೂರಿನ ಚುಂಚಶ್ರೀ ಸಭಾಂಗಣದಲ್ಲಿ ನಡೆದ ಸಮಾರಂಭದಲ್ಲಿ ಶಾಸಕರು ಉದ್ಘಾಟಿಸಿ ಮಾತನಾಡಿದರು.

ನಾನೂ ಒಂದು ಟ್ರಸ್ಟ್ ನಡೆಸುತ್ತಿದ್ದು ಇಂತಹ ಟ್ರಸ್ಟ್ಗಳು ಜನರ ಕಷ್ಟಗಳಿಗೆ ಸ್ಪಂಧಿಸಲು ಸಾಧ್ಯವಿದೆ ಎಂಬ ವಿಚಾರ ಮತ್ತು ಆ ಬಗ್ಗೆ ಸ್ಪಷ್ಟವಾದ ಅರಿವು ನನಗಿದೆ. ದುಡ್ಡಿದ್ದ ಮಾತ್ರಕ್ಕೆ ಜನಸೇವೆ ಮಾಡಬಹುದು ಎಂದು ಹೇಳಲಾಗುವುದಿಲ್ಲ. ಅದು ಅಷ್ಟೊಂದು ಸುಲಭವೂ ಅಲ್ಲ. ಇದಕ್ಕೆ ತುಂಬಾ ಪ್ರಾಮಾಣಿಕತೆ ಮತ್ತು ಕಾಳಜಿ ಇರಬೇಕು. ತ್ಯಾಗ ಮನೋಭಾವ ಇರಬೇಕು. ಬಾಲ್ಯದಲ್ಲಿ ಕಷ್ಟ ಪಟ್ಟವರಿಗೆ ಮಾತ್ರ ಇನ್ನೊಬ್ಬರ ಕಷ್ಟ ಗೊತ್ತಾಗುತ್ತದೆ. ಈ ನಿಟ್ಟಿನಲ್ಲಿ ಎಂ ಪ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ದೇಶ ಮತ್ತು ದೇವರು ಮೆಚ್ಚು ವಂತಹ ಮಾದರಿಯಾದ ಕೆಲಸ ಮಾಡುತ್ತಿದೆ ಎಂದರು.

ಬಡವರ ಕಷ್ಟವನ್ನು ಮನಗಂಡು ರೈ ಎಸ್ಟೇಟ್ ಚಾರಿಟೇಬಲ್ ಟ್ರಸ್ಟ್ನ ಮೂಲಕ ಈಗಾಗಲೇ ಪುತ್ತೂರು ವಿಧಾನಸಭಾ ಕ್ಷೇತ್ರದ ಸುಮಾರು 600 ಮಂದಿಗೆ ಮನೆ ನಿರ್ಮಿಸಿ ಕೊಡಲು ಯೋಜನೆ ರೂಪಿಸಲಾಗಿದ್ದು, ಇದಕ್ಕಾಗಿ ವಿಟ್ಲದಲ್ಲಿ ಜಮೀನು ಖರೀದಿ ಮಾಡಲಾಗಿದೆ. ಅದರಲ್ಲಿ ಪ್ರಥಮ ಹಂತವಾಗಿ ಸುಮಾರು 300 ಮನೆಗಳನ್ನು ನಿರ್ಮಿಸಲು ಮುಂದಡಿ ಇಡಲಾಗಿದೆ. ಮನೆ ನಿರ್ಮಾಣಕ್ಕೆ ಎಂ. ಫ್ರೆಂಡ್ ಚಾರಿಟೇಬಲ್ ಟ್ರಸ್ಟ್ ಸೇರಿದಂತೆ ವೇದಿಕೆಯಲ್ಲಿದ್ದ ಝಕರಿಯಾ ಜೋಕಟ್ಟೆ ಅವರ ಸಹಾಯ ನೀಡಬೇಕು ಎಂದ ಶಾಸಕರು ಇದರಲ್ಲಿ ಸಹಾಯ ನೀಡಿದವರು ಹೇಳಿದ ಬಡವರಿಗೆ 5 ಮನೆ ಹಾಗೂ ಎಂ. ಫ್ರಂಡ್ಸ್ ಹೇಳಿದ ಬಡವರಿಗೆ 3 ಮನೆಯಲ್ಲಿ ಆದ್ಯತೆಯಲ್ಲಿ ನೀಡುತ್ತೇನೆ ಎಂದು ಭರವಸೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಝಕರಿಯಾ ಜೋಕಟ್ಟೆ ಮಾತನಾಡಿ ನಾವೆಲ್ಲರೂ ಸೇರಿಕೊಂಡು ಜಾತಿ, ಮತ ಬೇಧವಿಲ್ಲದ ಸೌಹಾರ್ಧತೆಯೊಂದಿಗೆ ಜೀವಿಸುವ ಜಿಲ್ಲೆಯನ್ನು ನಿರ್ಮಿಸಲು ಪ್ರಯತ್ನ ನಡೆಸಬೇಕು. ನಮ್ಮ ಜಿಲ್ಲೆಯು ಉತ್ತಮ ಪ್ರವಾಸಿ ಪ್ರದೇಶವಾಗಿ ಎಲ್ಲರನ್ನೂ ಆಕರ್ಷಿಸಬೇಕು. ಅದಕ್ಕಾಗಿ ನಾನು ರಾಜ್ಯದ ಮಂತ್ರಿಗಳ ಜೊತೆಗೂ ಚರ್ಚೆ ನಡೆಸಿದ್ದೇನೆ. ನನಗೆ ಸಮಾಜ ಸೇವೆ ಮಾಡಲು ಪ್ರೇರಣೆ ನೀಡಿದವರು ಎಂ. ಫ್ರೆಂಡ್ಸ್ ಸಂಸ್ಥಾಪಕ ರಶೀದ್ ವಿಟ್ಲ. ಅವರಿಂದಾಗಿ ನನ್ನ ಜನಸೇವೆಯ ಕಾರ್ಯ ಸಾಧ್ಯವಾಯಿತು. ಪುತ್ತೂರಿನ ಶಾಸಕರು ಅನೇಕ ಜನಪರ ಕೆಲಸಗಳನ್ನು ಮಾಡುತ್ತಿದ್ದು, ಅವರ ಉತ್ತಮ ಕೆಲಸಗಳ ಜೊತೆಗೆ ನಾನೂ ಕೈಜೋಡಿಸುತ್ತೇನೆ. ದಾನ ಮಾಡಿ ಯಾರೂ ಕೆಟ್ಟವರಿಲ್ಲ. ದಾನಕ್ಕೆ ಜನರ ಆಶೀರ್ವಾದವಿರುತ್ತದೆ. ಯಾವುದೇ ಕಾರಣಕ್ಕೂ ದಾನವನ್ನು ನಿಲ್ಲಿಸಬಾರದು ಎಂದು ಹೇಳಿದ ಅವರು ಬಾಲ್ಯದಲ್ಲಿ ನಾನೂ ಸಾಕಷ್ಟು ಬಡತನದ ನೋವು ಅನುಭವಿಸಿದ್ದೇನೆ ಎಂದು ನೆನಪಿಸಿಕೊಂಡರು.

ಈ ಸಂದರ್ಭದಲ್ಲಿ ಎಂ ಫ್ರೆಂಡ್ಸ್ ನೇತೃತ್ವದಲ್ಲಿ ಕ್ಲಾಸ್ ಆನ್ ವೀಲ್ಸ್ ಮೂಲಕ ಕಳೆದ ಒಂದೂವರೆ ವರ್ಷಗಳಲ್ಲಿ 50 ಸರ್ಕಾರಿ ಹಾಗೂ 25 ಕೇಂದ್ರಗಳಲ್ಲಿ ನಡೆಸಲಾದ ಕಂಪ್ಯೂಟರ್ ತರಗತಿಯಲ್ಲಿ ಕಂಪ್ಯೂಟರ್ ಮೂಲ ಶಿಕ್ಷಣ ಪಡೆದಿರುವ 3650 ವಿದ್ಯಾರ್ಥಿಗಳಿಗೆ ಸರ್ಟಿಫಿಕೇಟ್ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ಕಾರುಣ್ಯ ಸಂಸ್ಥೆಯ ಮುಖ್ಯಸ್ಥ ಮಹಮ್ಮದ್ ಹನೀಫ್ ಹಾಜಿ ಗೋಳ್ತಮಜಲು, ಎಂ. ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುಜಾಹ್ ಮಹಮ್ಮದ್, ಪ್ರಧಾನ ಕಾರ್ಯದರ್ಶಿ ಆರಿಫ್ ಪಡುಬಿದ್ರಿ ಉಪಸ್ಥಿತರಿದ್ದರು.

ಎಂ. ಫ್ರೆಂಡ್ಸ್ ಸಂಸ್ಥಾಪಕ ರಶೀದ್ ವಿಟ್ಲ ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು. ಶಾಕಿರ್ ಹಾಜಿ ವಂದಿಸಿದರು. ಮಹಮ್ಮದಲಿ ಕಮ್ಮರಡಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X