ಪಾವೂರು ಗಾಡಿಗದ್ದೆ ಶಾಲೆಯಲ್ಲಿ ಎಲ್ಕೆಜಿ, ಯುಕೆಜಿ ತರಗತಿ ಉದ್ಘಾಟನೆ

ಕೊಣಾಜೆ: ಮಕ್ಕಳನ್ನು ಉನ್ನತ ಸ್ಥಾನಕ್ಕೆ ತಲುಪಿಸುವ ಗುರಿಯೊಂದಿಗೆ ಹೆತ್ತವರು ಶಿಕ್ಷಣಕ್ಕೆ ಅವಕಾಶ ಕಲ್ಪಿಸಬೇಕು. ಊರವರು, ಸಂಘ-ಸಂಸ್ಥೆಗಳು, ಜನಪ್ರತಿನಿಧಿಗಳು ಕೈಜೋಡಿಸಿದಾಗ ಶಾಲೆಯ ಅಭಿವೃದ್ಧಿ ಸಾಧ್ಯ ಎನ್ನುವುದಕ್ಕೆ ಗಾಡಿಗದ್ದೆ ಶಾಲೆ ಮಾದರಿಯಾಗಿದೆ ಎಂದು ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಹೇಳಿದರು.
ಪಾವೂರು ಗ್ರಾಮದ ಗಾಡಿಗದ್ದೆಯ ದ.ಕ.ಜಿಪಂ ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ಆರಂಭಗೊಂಡ ಎಲ್ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹರೇಕಳದಿಂದ ಗಾಡಿಗದ್ದೆವರೆಗೆ ರಸ್ತೆ ನಿರ್ಮಾಣಕ್ಕೆ ಈಗಾಗಲೇ 10 ಕೋ.ರೂ. ಅನುದಾನ ಬಿಡುಗಡೆ ಗೊಳಿಸಲಾಗಿದೆ. ಮತ್ತೆ 40 ಕೋಟಿ ಅನುದಾನ ಬಿಡುಗಡೆಗೊಳಿಸಲಾಗುವುದು. ಮುಂದಿನ ದಿನಗಳಲ್ಲಿ ಗಾಡಿಗದ್ದೆ ಪ್ರದೇಶದ ಬೆಳವಣಿಗೆಗೆ ಪ್ರಯತ್ನಿಸಲಾಗುವುದು ಎಂದು ಯು.ಟಿ.ಖಾದರ್ ಹೇಳಿದರು.
ಮಂಗಳೂರು ತಾಪಂ ಮಾಜಿ ಅಧ್ಯಕ್ಷ ಮುಹಮ್ಮದ್ ಮೋನು ಮಾತನಾಡಿ, ಗಾಡಿಗದ್ದೆ ಶಾಲೆಯನ್ನು ಉಳಿಸುವ ನಿಟ್ಟಿನಲ್ಲಿ ಹಳೆ ವಿದ್ಯಾರ್ಥಿಗಳು, ಶಾಲಾಭಿವೃದ್ಧಿ ಸಮಿತಿಯವರು ಸೇರಿ ಎಲ್ಕೆಜಿ, ಯುಕೆಜಿ ಆರಂಭಿಸಿರುವುದು ಶ್ಲಾಘನೀಯ ಎಂದರು.
ಪಾವೂರು ಗ್ರಾಪಂ ಅಧ್ಯಕ್ಷ ಅಬ್ದುಲ್ ಮಜೀದ್ ಸಾತ್ಕೋ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಆರ್.ಈಶ್ವರ್ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಗ್ರಾಪಂ. ಸದಸ್ಯರಾದ ರಿಯಾಝ್ ಅಹ್ಮದ್ ಪಾವೂರು, ರವಿಕಲಾ ಪೂಜಾರಿ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ರಿಯಾಝ್ ಡಿ. ಅರಸ್ತಾನ, ಉಪಾಧ್ಯಕ್ಷೆ ಮೋಹಿನಿ, ಇನೋಳಿ ಶ್ರೀ ಸೋಮನಾಥ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಚಂದ್ರಹಾಸ ಪೂಂಜಾ ಕಿಲ್ಲೂರುಗುತ್ತು, ಪಜೀರ್ ಗ್ರಾಪಂ ಮಾಜಿ ಅಧ್ಯಕ್ಷ ಭರತ್ರಾಜ್ ಶೆಟ್ಟಿ ಪಜೀರುಗುತ್ತು, ತಾಪಂ ಮಾಜಿ ಸದಸ್ಯ ಬಶೀರ್ ಜೋಕಟ್ಟೆ, ಝಕರಿಯಾ ಮಲಾರ್, ಪಾವೂರು ಗ್ರಾಪಂ ಅಭಿವೃದ್ಧಿ ಅಧಿಕಾರಿ ಕೃಷ್ಣಕುಮಾರ್, ಮಾಜಿ ಸದಸ್ಯರಾದ ಯೋಗೀಶ್ ಭಂಡಾರಮನೆ, ಹಸಿರು ದಳದ ವ್ಯವಸ್ಥಾಪಕ ನಾಗರಾಜ್, ಗುತ್ತಿಗೆದಾರ ಬಶೀರ್, ಮಾಜಿ ಸೈನಿಕ ಪಾರ್ಶ್ವನಾಥ ಪಾವೂರುಗುತ್ತು, ಹಳೆ ವಿದ್ಯಾರ್ಥಿ ಸಂಘದ ಪ್ರಮುಖರಾದ ಮೋಕ್ಷಾ, ಮುಹಮ್ಮದ್ ಬಶೀರ್, ಶಿವಶಂಕರ್ ಪಾವೂರುಗುತ್ತು, ವಿಜಯ ಕುಮಾರ್ ಪಾವೂರು ಭಂಡಾರಮನೆ, ನಿಶಾಂತ್ ಪಾವೂರು, ನೌಷಾದ್ ಎಂ.ಆರ್., ನವೀನ್ ಭಂಡಾರಮನೆ, ಸುರೇಶ್ ಪೂಜಾರಿ ಭಂಡಾರಮನೆ, ನೌಫಲ್ ಪಾವೂರು ಉಪಸ್ಥಿತರಿದ್ದರು.
ಫಿರೋಝ್ ಮಲಾರ್ ಸ್ವಾಗತಿಸಿದರು. ಶಾಲೆಯ ಮುಖ್ಯಶಿಕ್ಷಕಿ ಲವಿನಾ ಡಿಸೋಜ ವಂದಿಸಿದರು. ಶಿಕ್ಷಕಿ ಭವ್ಯಾ ಕಾರ್ಯಕ್ರಮ ನಿರೂಪಿಸಿದರು.







