Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು| ಮಕ್ಕಳ ಕಳ್ಳಸಾಗಾಟ ಪ್ರಕರಣ:...

ಮಂಗಳೂರು| ಮಕ್ಕಳ ಕಳ್ಳಸಾಗಾಟ ಪ್ರಕರಣ: ಮೂವರು ಆರೋಪಿಗಳಿಗೆ ಶಿಕ್ಷೆ ಘೋಷಣೆ

► 12 ವರ್ಷದ ಹಿಂದೆ ನಡೆದ ಘಟನೆ ► ಸೋಮವಾರ ಶಿಕ್ಷೆಯ ಪ್ರಮಾಣ ಪ್ರಕಟ

ವಾರ್ತಾಭಾರತಿವಾರ್ತಾಭಾರತಿ26 Jun 2025 7:09 PM IST
share
ಮಂಗಳೂರು| ಮಕ್ಕಳ ಕಳ್ಳಸಾಗಾಟ ಪ್ರಕರಣ: ಮೂವರು ಆರೋಪಿಗಳಿಗೆ ಶಿಕ್ಷೆ ಘೋಷಣೆ

ಮಂಗಳೂರು, ಜೂ.26: ಸುಮಾರು 12 ವರ್ಷದ ಹಿಂದೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮಕ್ಕಳ ಕಳ್ಳ ಸಾಗಾಟ ಪ್ರಕರಣದ ಮೂವರು ಆರೋಪಿಗಳಿಗೆ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ ನ್ಯಾಯಾಲಯ ಗುರುವಾರ ಶಿಕ್ಷೆ ಘೋಷಿಸಿದೆ. ಶಿಕ್ಷೆಯ ಪ್ರಮಾಣವನ್ನು ಸೋಮವಾರ ಪ್ರಕಟಿಸುವುದಾಗಿ ನ್ಯಾಯಾಲಯ ತಿಳಿಸಿದೆ.

ಲೆನೆಟ್ ವೇಗಸ್, ಜೊಸ್ಸಿ ವೇಗಸ್, ಲಸ್ಸಿ ವೇಗಸ್ ಶಿಕ್ಷೆಗೊಳಗಾದ ಆರೋಪಿಗಳಾಗಿದ್ದಾರೆ.

ಘಟನೆಯ ವಿವರ: 2013ರಲ್ಲಿ ಅಂಗನವಾಡಿ ಕಾರ್ಯಕರ್ತೆ ಫಾತಿಮಾ ಎಂಬಾಕೆ ಮನೆ ಮನೆಗೆ ತೆರಳಿ ಮಕ್ಕಳ ಸಮೀಕ್ಷೆ ಮಾಡುವ ಸಂದರ್ಭ ಲೆನೆಟ್ ವೇಗಸ್‌ರ ಎಂಬವರ ಮನೆಯಲ್ಲಿ ಮಾರಾಟಕ್ಕೆ ಮಗು ವನ್ನು ಇಟ್ಟಿರುವ ಬಗ್ಗೆ ಮಾಹಿತಿ ಪಡೆದು ಪತ್ರಕರ್ತ ನವೀನ್ ಸೂರಿಂಜೆಯ ಗಮನಕ್ಕೆ ತಂದಿದ್ದರು. ನಂತರ ಚೈಲ್ಡ್‌ಲೈನ್ ಸಂಸ್ಥೆಯವರು ಲೆನೆಟ್ ಮನೆಗೆ ತೆರಳಿ ಮಗುವಿನ ಕುರಿತು ವಿಚಾರಿಸಿದಾಗ ಮಗು ತನ್ನದೇ ಎಂದು ಲೆನೆಟ್ ಪ್ರತಿಪಾದಿಸಿದ್ದರಲ್ಲದೆ, ಆ ಮಗುವನ್ನು ತಾನೇ ಹೆತ್ತಿದ್ದು ಎಂಬುದಕ್ಕೆ ಮಂಗಳೂರಿನ ನರ್ಸಿಂಗ್ ಹೋಂ ಒಂದರ ಡಿಸ್ಚಾರ್ಜ್ ದಾಖಲೆಗಳನ್ನೂ ತೋರಿಸಿದ್ದಳು.

ರಾತ್ರಿ-ಹಗಲು ಕಾರ್ಯಾಚರಣೆ ಮಾಡಿ ಮಗುವಿನ ನಿಜ ತಾಯಿಯನ್ನು ಪತ್ತೆ ಹಚ್ಚಲಾಯಿತು. ಆ ಮಗು ಉತ್ತರ ಕರ್ನಾಟಕದ ಚೆನ್ನವ್ವ ಎಂಬವರದ್ದಾಗಿತ್ತು. ಕಟ್ಟಡದ ಕೆಲಸಕ್ಕೆ ಬಂದಿದ್ದ ಚೆನ್ನವ್ವ ಬಡತನದ ಬೇಗೆ ತಡೆಯಲಾರದೆ ಮಗುವನ್ನು ಸುಮಾರು 20 ಸಾವಿರಕ್ಕೆ ಲೆನೆಟ್‌ಗೆ ಮಾರಾಟ ಮಾಡುತ್ತಾಳೆ.

ಆ ಬಳಿಕ ಪತ್ರಕರ್ತ ನವೀನ ಸೂರಿಂಜೆ, ಸಾಮಾಜಿಕ ಹೋರಾಟಗಾರ್ತಿ ವಿದ್ಯಾ ದಿನಕರ್, ಚೈಲ್ಡ್ ಲೈನ್‌ನ ರೆನ್ನಿ ಡಿಸೋಜ, ಅಸುಂತ ಡಿಸೋಜ, ಅಂಗನವಾಡಿ ಕಾರ್ಯಕರ್ತೆ ಫಾತಿಮಾ ಅಂದಿನ ಪೊಲೀಸ್ ಕಮಿಷನರ್‌ರನ್ನು ಭೇಟಿಯಾಗಿ ಮಕ್ಕಳ ಕಳ್ಳ ಸಾಗಾಟ ಜಾಲದ ಬಗ್ಗೆ ಮಾಹಿತಿ ನೀಡಿದರು.

ಪೊಲೀಸ್ ಕಮಿಷನರ್‌ರ ಸಹಕಾರದ ಮೇರೆಗೆ ದುಬೈಯಲ್ಲಿರುವ ಮುಸ್ಲಿಂ ದಂಪತಿಗೆ ಮಗು ಬೇಕಾಗಿದೆ ಎಂದು ಲೆನೆಟ್ ತಿಳಿಸಿದ್ದು, ಅದರಂತೆ ತೊಕ್ಕೊಟ್ಟಿನ ವೈದ್ಯರೊಬ್ಬರ ಕ್ಲಿನಿಕ್‌ಗೆ ಮಗುವಿನ ಆರೋಗ್ಯ ತಪಾಸಣೆಗೆ ಬರಲಿಕ್ಕಿದೆ. ಮಗುವಿನ ಹೆಲ್ತ್ ಚೆಕಪ್ ಮಾಡಿ ಮಗುವನ್ನು ಮಾರಾಟ ಮಾಡುತ್ತೇನೆ. ಅಲ್ಲೇ ಹಣ ಕೊಟ್ಟು ಮಗು ಖರೀದಿಸಿ ಎಂದು ಲೆನೆಟ್ ಹೇಳಿದ ಮೇರೆಗೆ ಕ್ಲಿನಿಕ್‌ನಿಂದಲೇ ಮಗುವನ್ನು ಖರೀದಿಸುವ ಬಗ್ಗೆ ಕಾರ್ಯಾಚರಣೆ ನಡೆಸಲಾಯಿತು. ಕಮಿಷನ್ ಸೂಚನಯೆ ಮೇರೆಗೆ ಪೊಲೀಸ್ ಕಾನ್‌ಸ್ಟೇಬಲ್ ಇರ್ಫಾನ್ ಕೂಡ ಕಾರ್ಯಾಚರಣೆಯ ಭಾಗವಾಗಿದ್ದರು. ಕೊನೆಗೆ 90 ಸಾ.ರೂ.ವನ್ನು ಕೊಟ್ಟು ಮಗುವನ್ನು ಪಡೆದುಕೊಳ್ಳುವಷ್ಟರಲ್ಲಿ ಲೆನೆಟ್‌ ಳನ್ನು ಅಲ್ಲೇ ಇದ್ದ ಪೊಲೀಸರು ಬಂಧಿಸಿ ಆಕೆಯ ಬಳಿ ಇದ್ದ ಎಲ್ಲಾ ನಕಲಿ ಸರ್ಟಿಫಿಕೇಟ್‌ಗಳು, ಎಟಿಎಂ ಕಾರ್ಡ್‌ಗಳು, ದೆಹಲಿ ವಿಳಾಸದ ನಕಲಿ ವಿಸಿಟಿಂಗ್ ಕಾರ್ಡ್‌ಗಳು, ಮಗುವಿನ ದಾಖಲೆ ಪತ್ರಗಳನ್ನು ವಶಪಡಿಸಿಕೊಳ್ಳಲಾಯಿತು. ಚೆನ್ನವ್ವಳನ್ನು ಪತ್ತೆ ಹಚ್ಚಿ ಆಕೆಯದ್ದೇ ಮಗುವೆಂದು ದಾಖಲೆಗಳ ಸಹಿತ ನಿರೂಪಿಸಿ ಎಫ್‌ಐಆರ್ ದಾಖಲಿಸಲಾಗಿತ್ತು. ಲೆನೆಟ್‌ಗೆ ಸಹಕರಿಸಿದ ಜೊಸ್ಸಿ ವೇಗಸ್, ಲಸ್ಸಿ ವೇಗಸ್ ಮೇಲೂ ಕ್ರಮ ಕೈಗೊಳ್ಳಲಾಯಿತು ಎಂದು ತಿಳಿದುಬಂದಿದೆ.

2013ರಲ್ಲಿ ನಡೆದ ಈ ಪ್ರಕರಣದ ಶಿಕ್ಷೆಯ ತೀರ್ಪು ಗುರುವಾರ ಹೊರಬಿದ್ದಿದ್ದು, ಸೋಮವಾರ ಶಿಕ್ಷೆಯ ಪ್ರಮಾಣ ಪ್ರಕಟಗೊಳ್ಳಲಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X