Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಶಿಥಿಲಗೊಂಡಿರುವ ಹಳೆ ನೇತ್ರಾವತಿ ಸೇತುವೆ:...

ಶಿಥಿಲಗೊಂಡಿರುವ ಹಳೆ ನೇತ್ರಾವತಿ ಸೇತುವೆ: ಎನ್.ಐ.ಟಿ.ಕೆ ಅಧಿಕಾರಿಗಳಿಂದ ಪರಿಶೀಲನೆ

ವಾರ್ತಾಭಾರತಿವಾರ್ತಾಭಾರತಿ27 Jun 2025 8:01 PM IST
share
ಶಿಥಿಲಗೊಂಡಿರುವ ಹಳೆ ನೇತ್ರಾವತಿ ಸೇತುವೆ: ಎನ್.ಐ.ಟಿ.ಕೆ ಅಧಿಕಾರಿಗಳಿಂದ ಪರಿಶೀಲನೆ

ಬಂಟ್ವಾಳ : ಬಿ.ಸಿ.ರೋಡಿನಿಂದ ಪಾಣೆಮಂಗಳೂರು ಪೇಟೆಗೆ ಸಂಪರ್ಕ ಕಲ್ಪಿಸುವ ಹಳೆ ನೇತ್ರಾವತಿ ಸೇತುವೆ ಶಿಥಿಲಗೊಂಡಿರುವ ಹಿನ್ನಲೆಯಲ್ಲಿ ಸುರತ್ಕಲ್ ನ ರಾಷ್ಟ್ರೀಯ ತಾಂತ್ರಿಕ ಮಹಾ ವಿದ್ಯಾಲಯದ (ಎನ್.ಐ.ಟಿ.ಕೆ) ಅಧಿಕಾರಿಗಳು ಗುರುವಾರ ಪುರಸಭಾಧ್ಯಕ್ಷ ಬಿ ವಾಸು ಪೂಜಾರಿ ಲೊರೆಟ್ಟೊ ಅವರ ಉಪಸ್ಥಿತಿಯಲ್ಲಿ ಸೇತುವೆಯ ಧಾರಣಾ ಸಾಮರ್ಥ್ಯ ವನ್ನು ಪರಿಶೀಲನೆ ನಡೆಸಿದರು.

ಎನ್.ಐ.ಟಿ.ಕೆ ಪ್ರೊಫೆಸರ್ ಡಾ. ಪಲಿನಿ ಸ್ವಾಮಿ, ವಿಜಯನ್ ಅವರು ಸೇತುವೆಯ ಮೇಲ್ಮೈ ಪರಿಶೀಲನೆ ನಡೆಸಿದ್ದು. ಮುಂಗಾರು ಚುರುಕಾಗಿರುವ ಹಿನ್ನಲೆಯಲ್ಲಿ ನೇತ್ರಾವತಿ ತುಂಬಿ ಹರಿಯುತ್ತಿದ್ದ ಕಾರಣ ಸೇತುವೆಯ ಪಿಲ್ಲರ್ ಸಹಿತ ಪೂರ್ಣ ಪ್ರಮಾಣದ ಪರಿಶೀಲನೆ ನಡೆಸಲು ಅಧಿಕಾರಿಗಳ ತಂಡಕ್ಕೆ ಸಾಧ್ಯವಾಗದೆ ಮತ್ತೊಮ್ಮೆ ಪರಿಶೀಲನೆ ನಡೆಸಲು ಬರುವುದಾಗಿ ತಿಳಿಸಿ ವಾಪಾಸ್ಸಾಗಿದ್ದಾರೆ.

ಶಿಥಿಲಾವಸ್ಥಗೆ ತಲುಪಿರುವ ಪಾಣೆಮಂಗಳೂರು ಹಳೆ ಸೇತುವೆಯಲ್ಲಿ ಈ ಹಿಂದೆಯೇ ಘನ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದರು. ಈ ಆದೇಶದ ಹಿನ್ನಲೆಯಲ್ಲಿ ಇತ್ತೀಚೆಗೆ ಪುರಸಭೆ ವತಿಯಿಂದ ಸೇತುವೆ ಮೇಲೆ ಘನ ವಾಹನ ಸಂಚಾರ ನಡೆಸದಂತೆ ಕಬ್ಬಿಣದ ಕಮಾನು ಅಳವಡಿಸಲಾಗಿತ್ತು. ಘನ ವಾಹನವೊಂದು ಈ ಕಮಾನಿಗೆ ಡಿಕ್ಕಿ ಹೊಡೆದು ಕೆಳಕ್ಕೆ ಬಿದ್ದಿದ್ದರಿಂದ ಸೇತುವೆ ಮೇಲೆ ಎಲ್ಲಾ ವಾಹನ ನಿಷೇಧಿಸಿ ಬಂಟ್ವಾಳ ತಹಶೀಲ್ದಾರರು ಆದೇಶ ಹೊರಡಿಸಿ ಸೇತುವೆಗೆ ಟೇಪ್ ಅಳವಡಿಸಿ ಬಂದ್ ಮಾಡಲಾಗಿತ್ತು.

ಸೇತುವೆಯಲ್ಲಿ ಲಘು ವಾಹನ ಸಂಚಾರವನ್ನೂ ನಿಷೇಧಿಸಿದ್ದರಿಂದ ಪಾಣೆಮಂಗಳೂರು ಪೇಟೆ ಸಹಿತ, ಅಕ್ಕರಂಗಡಿ, ನಂದಾವರ, ಮೆಲ್ಕಾರ್ ಮೊದಲಾದ ಪ್ರದೇಶಗಳ ಜನ ಸಾರಿಗೆ ಸಂಚಾರಕ್ಕೆ ವ್ಯವಸ್ಥೆ ಇಲ್ಲದೆ ಆಕ್ರೋಶ ವ್ಯಕ್ತಪಡಿಸಿದ ಹಿನ್ನಲೆಯಲ್ಲಿ ಸಾರ್ವಜನಿಕರ ಮನವಿಗೆ ಸ್ಪಂದಿಸಿದ ಪುರಸಭಾಧ್ಯಕ್ಷ ವಾಸು ಪೂಜಾರಿ ಅವರು ಈ ಬಗ್ಗೆ ಸಂಚಾರ ನಿಷೇಧ ತೆರವು ಆದೇಶ ವಾಪಾಸು ಪಡೆದು ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಪುರಸಭಾ ಸಾಮಾನ್ಯ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದರು. ಬಳಿಕ ನಿರ್ಣಯದ ಪ್ರತಿಯೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವರನ್ನು ಭೇಟಿಯಾಗಿ ಪಾಣೆಮಂಗಳೂರು ಊರಿನ ಅಸ್ತಿತ್ವವೇ ಈ ಸೇತುವೆಯಾಗಿದ್ದು, ನಂದಾವರದ ಪ್ರಸಿದ್ದ ದೇವಸ್ಥಾನ, ದರ್ಗಾ, ಮಸೀದಿ, ಹಳೆಯ ಕಾಲದ ಶಾರದಾ ಪ್ರೌಢಶಾಲೆ ಸಹಿತ ಜನೋಪಯೋಗಿ ಸ್ಥಳಗಳಿಗೆ ಸಂಚಾರ ಮಾರ್ಗ ಇದೇ ಆಗಿರುವುದರಿಂದ ಲಘು ವಾಹನ ಸಂಚಾರಕ್ಕೆ ಅವಕಾಶ ನೀಡುವಂತೆ ಆದೇಶಿಸಲು ಅಧಿಕಾರಿಗಳಿಗೆ ಸೂಚಿಸಬೇಕು. ಸದ್ರಿ ಸೇತುವೆಯ ದುರಸ್ತಿಗೆ ಸಂಬಂಧಪಟ್ಟಂತೆ ಪುರಸಭೆಯಿಂದಾಗುವ ಎಲ್ಲ ವ್ಯವಸ್ಥೆ ಗಳನ್ನೂ ನಾವು ಮಾಡುತ್ತೇವೆ ಎಂದು ಕೋರಿಕೊಂಡ ಹಿನ್ನಲೆಯಲ್ಲಿ ಉಸ್ತುವಾರಿ ಸಚಿವರ ಸೂಚನೆಯಂತೆ ಜಿಲ್ಲಾಧಿಕಾರಿ ಅವರು ಸದ್ರಿ ಸೇತುವೆಯಲ್ಲಿ ಧಾರಣೆ ಸಾಮಥ್ರ್ಯ ಪರೀಕ್ಷೆವರೆಗೂ ಲಘು ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಿ ಆದೇಶ ನೀಡಿದ್ದರು.

ಪುರಸಭಾಧ್ಯಕ್ಷ ವಾಸು ಪೂಜಾರಿ, ಮುಖ್ಯಾಧಿಕಾರಿ ನಝೀರ್ ಅಹ್ಮದ್, ಪುರಸಭಾ ಇಂಜಿನಿಯರ್ ಡೊಮೆನಿಕ್ ಡಿಮೆಲ್ಲೋ, ಆರೋಗ್ಯಾಧಿಕಾರಿ ರತ್ನಪ್ರಸಾದ್ ಜೊತೆಗಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X