Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವವಿದ್ದರೆ...

ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವವಿದ್ದರೆ ರವಿಕುಮಾರ್‌ನ್ನು ಪಕ್ಷ , ಶಾಸಕ ಸ್ಥಾನದಿಂದ ವಜಾಗೊಳಿಸಲಿ: ಸೌಮ್ಯ ರೆಡ್ಡಿ ಒತ್ತಾಯ

ವಾರ್ತಾಭಾರತಿವಾರ್ತಾಭಾರತಿ3 July 2025 10:54 PM IST
share
ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವವಿದ್ದರೆ ರವಿಕುಮಾರ್‌ನ್ನು ಪಕ್ಷ , ಶಾಸಕ ಸ್ಥಾನದಿಂದ ವಜಾಗೊಳಿಸಲಿ: ಸೌಮ್ಯ ರೆಡ್ಡಿ ಒತ್ತಾಯ

ಮಂಗಳೂರು, ಜು.3: ಮಹಿಳೆಯರ ಬಗ್ಗೆ ಬಿಜೆಪಿಗೆ ಗೌರವ ಇದ್ದರೆ ರವಿಕುಮಾರ್ ಅವರನ್ನು ಪಕ್ಷ ಮತ್ತು ವಿಧಾನ ಪರಿಷತ್ ಸದಸ್ಯ ಸ್ಥಾನದಿಂದ ವಜಾಗೊಳಿಸುವಂತೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಆಗ್ರಹಿಸಿದ್ದಾರೆ.

ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಆಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್ ನೇತೃತ್ವದಲ್ಲಿ ಗುರುವಾರ ನಗರದ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿ ಮುಂದೆ ನಡೆದ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು.

ಶಾಲಿನಿ ರಜನೀಶ್ ಅವರು, ರಾಜ್ಯದ ಮುಖ್ಯ ಕಾರ್ಯದರ್ಶಿಯಾಗಿ ತಾಯಿಯಂತೆ ನಿಂತು ಕಾರ್ಯ ನಿರ್ವಹಿಸುತ್ತಿದ್ದಾರೆ. ದೇಶ, ಸಂಸ್ಕೃತಿಯ ಪಾಠ ಮಾಡುವ ಇವರಿಗೆ ಮಹಿಳೆಯ ಬಗ್ಗೆ ಗೌರವ ಎಲ್ಲಿ ಹೋಯಿತು. ದೇಶ ಮುಂದೆ ಹೋಗುವ ಬದಲು ಬಿಜೆಪಿಯಿಂದಾಗಿ ಎಲ್ಲೋ ಒಂದು ಕಡೆ ಹಿಂದೆ ಹೋಗುತ್ತಿದೆ ಎಂದು ಸೌಮ್ಯಾ ರೆಡ್ಡಿ ಆರೋಪಿಸಿದರು.

ಬೇಟಿ ಬಚಾವೋ ಪಡಾವೋ ಎಂದು ಪ್ರಧಾನಿ ಮೋದಿ ಹೇಳ್ತಾರೆ. ಬೇಟಿ ಪಡ್ನೇಕೀ ಬಾದ್ ಐಎಎಸ್ ಆಫಿಸರ್ ಬನ್ ಗಯೀ, ಏ ಹಮಾರೆ ಲಿಯೇ ಬಹೂತ್ ಗೌರ್ ಕೀ ಬಾತ್ ಹೈ. ಆದರೆ ಬಿಜೆಪಿಯ ಮುಖಂಡರು ಮಹಿಳೆಯರ ಬಗ್ಗೆ ಅಗೌರವದಿಂದ ಮಾತನಾಡುತ್ತಿದ್ದಾರೆ. ಮಾಜಿ ಸಚಿವ ಸಿ.ಟಿ. ರವಿಯವರು ಸಚಿವರ ಬಗ್ಗೆ ಏನು ಮಾತನಾಡಿದ್ದಾರೆನ್ನುವುದು ಎಲ್ಲರಿಗೂ ಗೊತ್ತಿದೆ ಎಂದರು.

ಕೆಪಿಸಿಸಿ ಮಾಜಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ ಮಾತನಾಡಿ ‘ದೇಶ, ಸಂಸ್ಕೃತಿ ಬಗ್ಗೆ ಮಾತನಾಡುವ ಬಿಜೆಪಿಯವರೇ, ಮಹಿಳೆಯರನ್ನು ಅಗೌರವಿಸುವುದು ನಿಮ್ಮ ಸಂಸ್ಕೃತಿಯಾ? ಬಿಜೆಪಿಯಲ್ಲಿರುವ ಮಹಿಳೆಯರು ಕಣ್ಮುಚ್ಚಿ ಕೂತಿದ್ದೀರಲ್ವಾ? ನಿಮಗೆ ಸ್ವಾಭಿಮಾನ ಇಲ್ಲವಾ ಎಂದು ಪ್ರಶ್ನಿಸಿದರು.

ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ , ಮಾಜಿ ಸಚಿವರಾದ ಅಭಯಚಂದ್ರ ಜೈನ್, ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಮತಾ ಗಟ್ಟಿ, ಮುಖಂಡರಾದ ಕೆ.ಕೆ ಶಾಹುಲ್ ಹಮೀದ್, ಶಾಲೆಟ್ ಪಿಂಟೊ, ಮಂಜುಳಾ ನಾಯಕ್, ಪಿ.ಪಿ. ವರ್ಗಿಸ್, ಉಷಾ ಅಂಚನ್, ಗೀತಾ ಅತ್ತಾವರ, ಎಸ್.ಅಪ್ಪಿ, ಶಕುಂತಲಾ ಕಾಮತ್, ಸಬಿತಾ ಮಿಸ್ಕಿತ್, ಶಾಂತಲಾ ಗಟ್ಟಿ, ಕವಿತಾ ವಾಸು, ಸುರೇಖಾ ಚಂದ್ರಹಾಸ್ ಇನ್ನಿತರರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X