Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್...

ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್ ಸ್ಥಾಪಕರ ದಿನಾಚರಣೆ

ವಾರ್ತಾಭಾರತಿವಾರ್ತಾಭಾರತಿ14 July 2025 6:57 PM IST
share
ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್ ಸ್ಥಾಪಕರ ದಿನಾಚರಣೆ

ಕೊಣಾಜೆ: ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್ ಇದರ ಸ್ಥಾಪಕರ ದಿನಾಚರಣೆಯು ನಾಟೆಕಲ್ ಕಣಚೂರು ವೈದ್ಯಕೀಯ ಕಾಲೇಜಿನ ಕಾನ್ಪೆರೆನ್ಸ್ ಸಭಾಂಗಣದಲ್ಲಿ ಸೋಮವಾರದಂದು ನಡೆಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಧಾರವಾಡ ವಿಶ್ವವಿದ್ಯಾಲಯ ದ ಉಪಕುಲಪತಿ ಡಾ. ಎ.ಎಂ. ಖಾನ್ ಭಾಗವಹಿಸಿ ಮಾತನಾಡಿ, ಕಣಚೂರು ಸಂಸ್ಥೆ ಸ್ಥಾಪಕರು ಯು. ಕಣಚೂರು ಮೋನು ಸರಳ ವ್ಯಕ್ತಿತ್ವದವರಲ್ಲ. ತಮ್ಮ ಅಪಾರ ಶ್ರಮ, ದೃಢ ಸಂಕಲ್ಪ ಮತ್ತು ದೀರ್ಘ ದೃಷ್ಟಿಯಿಂದ ಇಂದು ಎಲ್ಲರಿಗೂ ಪ್ರೇರಣೆಯಾಗಿರುವ ವ್ಯಕ್ತಿ. ಕಣಚೂರು ಮೋನು ಅವರು ಕಠಿಣ ಪರಿಶ್ರಮದಿಂದ ಯಶಸ್ವಿ ಯನ್ನು ಪಡೆದವರು. ಈ ಭಾಗದ ಯಾರೂ ಕೂಡ ಶಿಕ್ಷಣ ದಿಂದ ವಂಚಿತರಾಗಬಾರದು ಎಂಬ ದೃಷ್ಟಿ ಯಿಂದ ಮೊದಲಿಗೆ ಕಣಚೂರು ಶಾಲೆಯನ್ನು ಆರಂಭಿಸಿ ಇವತ್ತಿಗೆ ವೈದ್ಯಕೀಯ ಕಾಲೇಜು ಸ್ಥಾಪಿಸುವ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ. ಅವರ ಆದರ್ಶ ಇಂದಿನ ಯುವ ಪೀಳಿಗೆಗೆ ಮಾರ್ಗದರ್ಶಕವಾಗಿದೆ ಎಂದರು.

ಕಠಿಣ ಪರಿಶ್ರಮ ಹಾಗೂ ನಿರಂತರ ಕಲಿಕೆಯಿಂದ ಸಾಧನೆಯ ಶಿಖರವನ್ನು ಏರಬಹುದು. ಇಂತಹ ಅವರ ಹೋರಾಟದ ಬದುಕಿಗೆ ಭಾರತ ರತ್ನ ವೂ ಲಭಿಸಲಿ. ಈ ಮೂಲಕ ಪರಿಶ್ರಮದ ದಾರಿಗೆ ಕೊಡುವ ಗೌರವ ವಾಗುತ್ತದೆ. ಎಲ್ಲರೂ ಕಷ್ಟ ಪಟ್ಟು ಕಲಿತು ತಮ್ಮ ಶಾಲೆಗೆ ಅವಾ ವಿದ್ಯಾ ಸಂಸ್ಥೆಗೆ ಹೆಸರನ್ನು ತಂದು ಕೊಡುವ ಕೆಲಸ ಮಾಡಬೇಕು. ವಿದ್ಯಾರ್ಥಿಗಳಂತೆ ಮೌಲ್ಯಯುತ ಶಿಕ್ಷಣದ ಜೊತೆಗೆ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನದಲ್ಲಿ ಶಿಕ್ಷಕರ ಪಾತ್ರ ಮಹತ್ವದಾಗಿದೆ. ಈ‌ ಮೂಲಕ ಕಲಿತ ವಿದ್ಯಾಸಂಸ್ಥೆಗಳಿಗೆ ಕೀರ್ತಿಯನ್ನು ತರುವ ಕೆಲಸ ಪ್ರತಿಯೊಂದು ಶಿಕ್ಷಕರೂ ಹಾಗೂ ವಿದ್ಯಾರ್ಥಿಗಳು ಮಾಡಬೇಕು ಎಂದರು.

ಕಣಚೂರು ಇಸ್ಲಾಮಿಕ್ ಎಜ್ಯುಕೇಷನ್ ಟ್ರಸ್ಟ್‌ ನ ಅಧ್ಯಕ್ಷರಾದ ಡಾ. ಯು.ಕೆ.ಮೋನು ಮಾತನಾಡಿ ಕಷ್ಟದ ದಿನಗಳನ್ನು ಕಳೆದು , ಬಡತನದಲ್ಲಿನ ಜೀವನದಲ್ಲಿ ಅಕ್ಕಿಗೂ ಪರದಾಡಿದ ದಿನಗಳಿತ್ತು. ಬ್ರಿಟೀಷ್ ಸರಕಾರದ ಉದ್ಯೋಗಿಯಾಗಿದ್ದ ತಂದೆ, ತಾಯಿ ಕುಟುಂಬಕ್ಕೆ ಜಮೀನಿದ್ದರೂ ಒಕ್ಕಲು ಮನೆಯವರ ಆಶ್ರಯವಿದ್ದಲ್ಲಿ ಮಾತ್ರ ಅಕ್ಕಿ ಸಿಗುವ ಕಾಲವದು. ಹಣವಿದ್ದರೂ ಅಕ್ಕಿ ಸಿಗದೇ ಪರದಾಡಿದ್ದೆವು. ಹಣವಿದ್ದರೂ ಹೆತ್ತವರನ್ನು ಹಜ್ ಯಾತ್ರೆಗೆ ಕಳುಹಿಸಲು ಸಾಧ್ಯವಾಗಲಿಲ್ಲ ಅನ್ನುವ ದು:ಖ ಸದಾ ಇರುತ್ತದೆ. ಪರಿಶ್ರಮಿಗಳಾಗಿ ಸುಖ ಇದ್ದೇ ಇರುವುದು. ಹುಟ್ಟಿದ ದಿನವನ್ನು ಹಿಂದಿನಿಂದಲೂ ಆಚರಿಸಿದವನಲ್ಲ. ಅಭಿಮಾನದಿಂದ ಹಾಕಿರುವ ನಾಮಫಲಕಗಳಿಗೆ ಗದರಿಸುವಂತಿಲ್ಲ. ಸಂಸ್ಥೆ ಮುಂದೆ ನಿರಂತರ ಸ್ಥಾಪನಾ ದಿನ ಆಚರಣೆಗಳನ್ನು ನಡೆಸುತ್ತಾ ಇರುವ ಆಶಯದೊಂದಿಗೆ ಆಚರಿಸಲಾಗಿದೆ ಎಂದರು.

ಕಣಚೂರು ವೈದ್ಯಕೀಯ ಕಾಲೇಜಿನ ನಿರ್ದೇಶಕ ಅಬ್ದುಲ್ ರಹಿಮಾನ್, ಕಣಚೂರು ಇಸ್ಲಾಮಿಕ್ ಎಜುಕೇಷನ್ ಟ್ರಸ್ಟ್ ನ ಟ್ರಸ್ಟಿ ಜೊಹಾರ ಮೋನು, ಟ್ರಸ್ಟಿ ಉಮಾಯ ಬಾನು ಆರೀಫ್, ಫರೀದ ನಸೀರ್, ಸಹಾದ ರಹಿಮಾನ್, ಡಾ. ಅಬಿದ ಹಸೀಮ್ , ಅಬ್ದಲ್ ರೆಹಿಮಾನ್, ಕ್ಯಾಲಿಕಟ್ ವಿಶ್ವವಿದ್ಯಾಲಯದ ವಿಶ್ರಾಂತ ಕುಲಪತಿ ಡಾ. ಎಂ. ಅಬ್ದುಲ್ ರೆಹಿಮಾನ್,ಕಣಚೂರು ಹೆಲ್ತ್ ಸೈನ್ಸ್ ಸಲಹಾ ಮಂಡಳಿಯ ಚೆರ್ ಮಾನ್ ಡಾ.‌ಮೊಹಮ್ಮದ್ ಇಸ್ಮಾಯಿಲ್ ಹೆಜಮಾಡಿ, ಕಣಚೂರು ಹೆಲ್ತ್ ಸೈನ್ಸ್ ಸಲಹಾ ಮಂಡಳಿಯ ಸದಸ್ಯ ಪ್ರೊ.ವೆಂಕಟರಾಯ್ ಪ್ರಭು ಉಪಸ್ಥಿತರಿದ್ದರು.

ಕಣಚೂರು ವೈದ್ಯಕೀಯ ಕಾಲೇಜಿನ ಆಡಳಿತಾಧಿಕಾರಿ ಡಾ.ರೋಹನ್ ಮೋನಿಸ್ ಸನ್ಮಾನಿತರ ವಿವರ ನೀಡಿದರು. ಕಣಚೂರು ಆಸ್ಪತ್ರೆಯ ಫಿಸಿಯೋಥೆರಫಿ ವಿಭಾಗದ ಪ್ರಾಂಶುಪಾಲ ಡಾ.ಸುಹೇಲ್ ಸ್ವಾಗತಿಸಿದರು.

ಕಣಚೂರು ಅಲೈಡ್ ಸೈನ್ಸ್ ನ ಅಸಿಸ್ಟೆಂಟ್ ಪ್ರೊ. ಪ್ರತಿಕ್ಷಾ ಶೆಟ್ಟಿ , ಪಬ್ಲಿಕ್ ಶಾಲೆಯ ಟಿಜಿಟಿ ಸೌಮ್ಯ ಸುವರ್ಣ ಕಾರ್ಯಕ್ರಮ ನಿರೂಪಿಸಿದರು‌. ಕಣಚೂರು ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲೆ ಡಾ. ಮೊನಿಸ್ ಸಲ್ಡಾನ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X